AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿಸಲು ಸಿದ್ಧವಾಯ್ತು ಹೊಗೆ ಗೋಪುರ; ಅಕ್ಟೋಬರ್​ 1ರಿಂದ ಕಾರ್ಯನಿರ್ವಹಣೆ

Smog Tower: ದೆಹಲಿಯ ಕಾನಾಟ್​ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ  ಹೊಗೆ ಗೋಪುರ 24 ಮೀಟರ್​ ಎತ್ತರವಾಗಿದೆ. ಕಳೆದ ತಿಂಗಳು ಅಂದರೆ ಆಗಸ್ಟ್​ 23ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಉದ್ಘಾಟನೆ ಮಾಡಿದ್ದರು.

ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿಸಲು ಸಿದ್ಧವಾಯ್ತು ಹೊಗೆ ಗೋಪುರ; ಅಕ್ಟೋಬರ್​ 1ರಿಂದ ಕಾರ್ಯನಿರ್ವಹಣೆ
ಹೊಗೆ ಗೋಪುರ
Follow us
TV9 Web
| Updated By: Lakshmi Hegde

Updated on:Sep 23, 2021 | 10:04 AM

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯವಂತೂ ಮಿತಿಮೀರಿದೆ. ಅಲ್ಲಿನ ಜನರು ಸ್ವಚ್ಛಗಾಳಿ ಉಸಿರಾಡಲು ಸಾಧ್ಯವಾಗದೆ ಶ್ವಾಸಕೋಶಿ ಸಂಬಂಧಿತ ಕಾಯಿಲೆಗಳಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾದ ದೆಹಲಿ ಸರ್ಕಾರ ಜನರಿಗೊಂದು ಗುಡ್​ನ್ಯೂಸ್​ ಕೊಟ್ಟಿದೆ. ದೆಹಲಿಯ ಕೊನಾಟ್​ ಪ್ರದೇಶದಲ್ಲಿ ನಿರ್ಮಾಣವಾದ ಹೊಗೆ ಗೋಪುರ (Smog Tower)ದ ಪ್ರಯೋಗ ಮುಗಿದಿದೆ. ಅಕ್ಟೋಬರ್​ 1ರಿಂದ ಈ ಗೋಪುರ ಕಾರ್ಯ ನಿರ್ವಹಿಸಲಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್​ ರಾಯ್​ ತಿಳಿಸಿದ್ದಾರೆ.  ಇಂದು ಟ್ವೀಟ್ ಮಾಡಿರುವ ಅವರು, ಹೊಗೆ ಗೋಪುರದ ಪ್ರಾಯೋಗಿಕ ಕಾರ್ಯ ಮುಕ್ತಾಯವಾಗಿದೆ. ಅಕ್ಟೋಬರ್​ 1ರಿಂದ ಪೂರ್ಣ ಪ್ರಮಾಣದಲ್ಲಿ ಇದು ಕೆಲಸ ನಿರ್ವಹಿಸಲಿದೆ. ಅದರ ಉಸ್ತುವಾರಿ, ಮೇಲ್ವಿಚಾರಣೆ ನೋಡಿಕೊಳ್ಳಲು ಐಐಟಿ-ಬಾಂಬೆ, ಐಐಟಿ-ದೆಹಲಿ ಮತ್ತು ಡಿಪಿಸಿಸಿಯ ವಿಜ್ಞಾನಿಗಳ ತಂಡ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.  

ಈ ಹೊಗೆ ಗೋಪುರ ಮಲಿನ ಯುಕ್ತ ಗಾಳಿಯನ್ನು ಶುದ್ಧೀಕರಣಗೊಳಿಸುತ್ತದೆ. ಇದರಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಯಲಿದೆ. ಜನರು ಶುದ್ಧವಾದ ಗಾಳಿಯನ್ನು ಉಸಿರಾಡಬಹುದು. ನಗರದಲ್ಲಿ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ತಡೆಯಲು ದೆಹಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲಿ ಈ ಹೊಗೆ ಗೋಪುರವೂ ಒಂದು. ಇನ್ನು ಚಳಿಗಾಲದಲ್ಲಂತೂ ಇನ್ನಷ್ಟು ಕೆಟ್ಟ ಅನುಭವ ಆಗುತ್ತದೆ. ಅದನ್ನು ತಡೆಯಲೆಂದೇ ಕ್ರಿಯಾಯೋಜನೆ ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು  ಗೋಪಾಲ್​ ರಾಯ್ ಮಾಹಿತಿ ನೀಡಿದ್ದಾರೆ.

24 ಮೀಟರ್​ ಎತ್ತರ ಇನ್ನು ದೆಹಲಿಯ ಕಾನಾಟ್​ ಪ್ರದೇಶದಲ್ಲಿ ನಿರ್ಮಾಣವಾಗಿರುವ  ದೇಶದ ಮೊದಲ ಹೊಗೆ ಗೋಪುರ 24 ಮೀಟರ್​ ಎತ್ತರವಾಗಿದೆ. ಕಳೆದ ತಿಂಗಳು ಅಂದರೆ ಆಗಸ್ಟ್​ 23ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಉದ್ಘಾಟನೆ ಮಾಡಿದ್ದರು. ಈ ಗೋಪುರದಲ್ಲಿರುವ 40 ಫ್ಯಾನ್​ಗಳು ಮತ್ತು ಹತ್ತು ಸಾವಿರ ಫಿಲ್ಟರ್​ಗಳನ್ನು ಮಿನ್ನೇಸೋಟ ವಿಶ್ವವಿದ್ಯಾಲಯದ ತಜ್ಞರು ಅಭಿವೃದ್ಧಿಪಡಿಸಿದ್ದಾರೆ. ಚೀನಾದ ಕ್ಸಿಯಾನ್​​ನಲ್ಲಿರುವ 100 ಮೀ. ಎತ್ತರದ ಸ್ಮಾಗ್​ ಟವರ್​ನ್ನು ನಿರ್ಮಿಸಲು ಕೂಡ ಈ ತಂಡವೇ ಸಹಾಯ ಮಾಡಿತ್ತು.  ಈ ಹೊಗೆ ಟವರ್​ಗೆ ದೆಹಲಿ ಸರ್ಕಾರ 20 ಕೋಟಿ ರೂಪಾಯಿಗಳನ್ನು ವ್ಯಯಿಸಿದೆ. ಹಾಗೇ, ಸೆಪ್ಟೆಂಬರ್​ ಪ್ರಾರಂಭದಲ್ಲಿ ಇನ್ನೊಂದು ಹೊಗೆ ಟವರ್​ ದೆಹಲಿಯ ಆನಂದ್​ ವಿಹಾರದಲ್ಲಿ ಉದ್ಘಾಟನೆಯಾಗಿದೆ.

ಇದನ್ನೂ ಓದಿ: ಕಿಯಾರಾ ಅಡ್ವಾಣಿ ಫ್ಯಾಷನ್​ ಅಭಿರುಚಿಗೆ ಸಾಟಿ ಯಾರು? ಶೇರ್​ಷಾ ಸುಂದರಿ ಈಗ ಸಖತ್​ ಮಿಂಚಿಂಗ್​

Shreyas Iyer: ತನ್ನನ್ನು ನಾಯಕನಾಗಿ ಆಯ್ಕೆ ಮಾಡದ ಬಗ್ಗೆ ಮೊದಲ ಬಾರಿ ಮೌನ ಮುರಿದ ಶ್ರೇಯಸ್ ಅಯ್ಯರ್

(Smog Tower At Connaught Place Of Delhi To Start Working From October 1)

Published On - 9:56 am, Thu, 23 September 21

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?