AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಮುಖ್ಯಮಂತ್ರಿಯನ್ನು ಡಿಕ್ಟೇಟರ್ ಎಂದು ಕರೆದ ಸಚಿವೆ ಸ್ಮೃತಿ ಇರಾನಿ

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಡಿಕ್ಟೇಟರ್ ಎಂದು ಉದ್ಘರಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಗೆಂದು ಹೈದರಾಬಾದ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಾರದಿರುವ ಕೆಸಿಆರ್ ವಿರುದ್ಧ ಸ್ಮೃತಿ ಇರಾನಿ ಗುಡುಗಿದ್ದು, ಅವರನ್ನು ಸರ್ವಾಧಿಕಾರಿ ಎಂದು ಕರೆದಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿಯನ್ನು ಡಿಕ್ಟೇಟರ್ ಎಂದು ಕರೆದ ಸಚಿವೆ ಸ್ಮೃತಿ ಇರಾನಿ
Smriti Irani
TV9 Web
| Edited By: |

Updated on: Jul 03, 2022 | 10:42 AM

Share

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಡಿಕ್ಟೇಟರ್ ಎಂದು ಉದ್ಘರಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಗೆಂದು ಹೈದರಾಬಾದ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಾರದಿರುವ ಕೆಸಿಆರ್ ವಿರುದ್ಧ ಸ್ಮೃತಿ ಇರಾನಿ ಗುಡುಗಿದ್ದು, ಅವರನ್ನು ಸರ್ವಾಧಿಕಾರಿ ಎಂದು ಕರೆದಿದ್ದಾರೆ.

ಮೋದಿಯ ಸ್ವಾಗತಕ್ಕೆ ಬಾರದೆ ಪ್ರಧಾನಿಗೆ ಅಗೌರವ ಸೂಚಿಸಿದ್ದಾರೆ. ಕೆಸಿಆರ್ ಸಾಂವಿಧಾನಿಕ ಮಾತ್ರವಲ್ಲದೆ ಸಾಂಸ್ಕೃತಿಕ ಸಂಪ್ರದಾಯಗಳನ್ನೂ ಉಲ್ಲಂಘಿಸಿದ್ದಾರೆ ಎಂದು ಹೇಳಿದರು.

ಈ ಹಿಂದೆ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಪ್ರಚಾರದ ವೇಳೆ ಮುಖ್ಯಮಂತ್ರಿ ಕೆಸಿಆರ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮುಖ್ಯಸ್ಥರು ಪ್ರಧಾನಿ ಮೋದಿಯನ್ನು “ಸೇಲ್ಸ್‌ಮ್ಯಾನ್” ಎಂದು ಕರೆದಿದ್ದರು. ಪ್ರಧಾನಿ ಮೋದಿಯನ್ನು ಸ್ವಾಗತಿಸದೇ ಇದ್ದರೂ, ಕೆಲವು ಗಂಟೆಗಳ ಮೊದಲು ಅವರು ಯಶವಂತ್ ಸಿನ್ಹಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದರು.

ರಾಜಕಾರಣವು ಕೆಸಿಆರ್ ಕುಟುಂಬಕ್ಕೆ ಸರ್ಕಸ್ ಆಗಿರಬಹುದು. ನಮಗೆ ಅದು ರಾಷ್ಟ್ರೀಯ ನೀತಿಯ ಮಾಧ್ಯಮ. ತೆಲಂಗಾಣ ಇಂದು ವಂಶಪಾರಂಪರ್ಯ ರಾಜಕಾರಣ ನಡೆಸುತ್ತಿದೆ.

ಭಾರತ ಇದನ್ನು ಎಂದಿಗೂ ಎಂದಿರುವ ಅವರು, ಪ್ರಧಾನಿ ಮೋದಿ ಅವರು ಕೆಸಿಆರ್ ಅವರನ್ನು ಅತ್ಯಂತ ಘನತೆ ಮತ್ತು ಗೌರವದಿಂದ ಭೇಟಿಯಾಗುತ್ತಾರೆ ಎಂದಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ಅವರ ನಡೆ ಸರ್ಕಾರಕ್ಕೆ ಮಾಡಿರುವ ಅವಮಾನ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಡುಗಿದ್ದಾರೆ.

ತೆಲಂಗಾಣದ ಅಭಿವೃದ್ಧಿ ಮಾದರಿಯನ್ನು ದೇಶದ ಇತರೆ ರಾಜ್ಯಗಳು ಅನುಸರಿಸಬೇಕು ಎಂಬ ಕೆಸಿಆರ್ ಹೇಳಿಕೆಯನ್ನು ಪ್ರಶ್ನಿಸಿದ ಸ್ಮೃತಿ ಇರಾನಿ, ಪ್ರಧಾನಿಗೇ ಗೌರವ ಸೂಚಿಸದ ರಾಜ್ಯ ಯಾರಿಗೂ ಮಾದರಿಯಾಗಲು ಸಾಧ್ಯವಿಲ್ಲ ಎಂದಿದ್ದಾರೆ.

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್