AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

ಸ್ಮೃತಿ ಇರಾನಿ ತೆಳ್ಳಗಾಗಿರುವ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ
ತೂಕ ಇಳಿಸಿದ ಸ್ಮೃತಿ ಇರಾನಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 18, 2021 | 5:38 PM

ಹಿಂದಿ ಕಿರುತೆರೆಯ ಖ್ಯಾತ ನಟಿಯಾಗಿದ್ದ ಸ್ಮೃತಿ ಇರಾನಿ (Smriti Irani) ಬಳಿಕ ರಾಜಕಾರಣದಲ್ಲಿ ಸಕ್ರಿಯರಾದವರು. ಇದೀಗ ಕೇಂದ್ರ ಸಚಿವೆಯೂ ಆಗಿರುವ ಸ್ಮೃತಿ ಇರಾನಿ ಯುವತಿಯೂ ನಾಚುವಂತೆ ತೂಕ ಇಳಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸ್ಮೃತಿ ಇರಾನಿ ಮಾಡಿರುವ ಹೊಸ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ತಮ್ಮ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋವನ್ನು ನೋಡಿದ ಸ್ಮೃತಿ ಇರಾನಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ದಪ್ಪಗಾಗಿದ್ದ ಸ್ಮೃತಿ ಇರಾನಿ ತೆಳ್ಳಗಾಗಿರುವ ರೀತಿಯನ್ನು ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ತೆಳ್ಳಗೆ ಯುವತಿಯಂತೆ ಕಾಣುತ್ತಿರುವ ಸ್ಮೃತಿ ಇರಾನಿ ಮರದಿಂದ ಹೂವನ್ನು ಕೊಯ್ಯುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

ಭಾರತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮತ್ತು ಮಾಜಿ ನಟಿಯೂ ಆಗಿರುವ ಸ್ಮೃತಿ ಇರಾನಿ ಪಾರ್ಕ್​ನಲ್ಲಿ ನಿಂತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ಅರ್ಧಕ್ಕರ್ಧ ತೂಕ ಇಳಿಸಿರುವ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೇ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡ ಇಳಿಸಿ ಮೇಡಂ ಎಂದು ಕೆಲವರು ಕಿಚಾಯಿಸಿದ್ದಾರೆ.

ನೀವು ಹೇಗೆ ತೂಕ ಇಳಿಸಿಕೊಂಡಿದ್ದೀರ ಎಂಬುದನ್ನು ನಮಗೆ ವಿವರಿಸುತ್ತೀರ? ನೀವು ಎಲ್ಲ ಕ್ಷೇತ್ರಗಳಲ್ಲೂ ಸಾಧಕರಾಗಿದ್ದೀರಿ. ಈ ವಯಸ್ಸಿನಲ್ಲಿ ಇಷ್ಟು ತೂಕ ಇಳಿಸಲು ಹೇಗೆ ಸಾಧ್ಯವಾಯಿತು? ಎಂದು ಹಲವರು ಪ್ರಶ್ನಿಸಿದ್ದಾರೆ. ಇದಕ್ಕೂ ಮೊದಲು ತಮ್ಮ ಕುಟುಂಬದವರೊಂದಿಗೆ ಇದ್ದ ಸೆಲ್ಫೀಯನ್ನು ಕೂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಆ ಸೆಲ್ಫೀಯಲ್ಲಿ ಕೆಂಪು ಕುರ್ತಾ ಧರಿಸಿದ್ದ ಸ್ಮೃತಿ ಇರಾನಿ ತೂಕ ಇಳಿಸಿದ್ದನ್ನು ಅನೇಕರು ಗಮನಿಸಿದ್ದರು.

ಇದನ್ನೂ ಓದಿ: Lal Salaam: ಲಾಲ್ ಸಲಾಂ ಕಾದಂಬರಿ ಮೂಲಕ ಲೇಖಕಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪ್ರೊಫೆಸರ್​ಗೆ ಜೈಲು

‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ