AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

ಸ್ಮೃತಿ ಇರಾನಿ ತೆಳ್ಳಗಾಗಿರುವ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ
ತೂಕ ಇಳಿಸಿದ ಸ್ಮೃತಿ ಇರಾನಿ
TV9 Web
| Edited By: |

Updated on: Nov 18, 2021 | 5:38 PM

Share

ಹಿಂದಿ ಕಿರುತೆರೆಯ ಖ್ಯಾತ ನಟಿಯಾಗಿದ್ದ ಸ್ಮೃತಿ ಇರಾನಿ (Smriti Irani) ಬಳಿಕ ರಾಜಕಾರಣದಲ್ಲಿ ಸಕ್ರಿಯರಾದವರು. ಇದೀಗ ಕೇಂದ್ರ ಸಚಿವೆಯೂ ಆಗಿರುವ ಸ್ಮೃತಿ ಇರಾನಿ ಯುವತಿಯೂ ನಾಚುವಂತೆ ತೂಕ ಇಳಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸ್ಮೃತಿ ಇರಾನಿ ಮಾಡಿರುವ ಹೊಸ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ತಮ್ಮ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋವನ್ನು ನೋಡಿದ ಸ್ಮೃತಿ ಇರಾನಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ದಪ್ಪಗಾಗಿದ್ದ ಸ್ಮೃತಿ ಇರಾನಿ ತೆಳ್ಳಗಾಗಿರುವ ರೀತಿಯನ್ನು ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ತೆಳ್ಳಗೆ ಯುವತಿಯಂತೆ ಕಾಣುತ್ತಿರುವ ಸ್ಮೃತಿ ಇರಾನಿ ಮರದಿಂದ ಹೂವನ್ನು ಕೊಯ್ಯುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

ಭಾರತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮತ್ತು ಮಾಜಿ ನಟಿಯೂ ಆಗಿರುವ ಸ್ಮೃತಿ ಇರಾನಿ ಪಾರ್ಕ್​ನಲ್ಲಿ ನಿಂತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ಅರ್ಧಕ್ಕರ್ಧ ತೂಕ ಇಳಿಸಿರುವ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೇ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡ ಇಳಿಸಿ ಮೇಡಂ ಎಂದು ಕೆಲವರು ಕಿಚಾಯಿಸಿದ್ದಾರೆ.

ನೀವು ಹೇಗೆ ತೂಕ ಇಳಿಸಿಕೊಂಡಿದ್ದೀರ ಎಂಬುದನ್ನು ನಮಗೆ ವಿವರಿಸುತ್ತೀರ? ನೀವು ಎಲ್ಲ ಕ್ಷೇತ್ರಗಳಲ್ಲೂ ಸಾಧಕರಾಗಿದ್ದೀರಿ. ಈ ವಯಸ್ಸಿನಲ್ಲಿ ಇಷ್ಟು ತೂಕ ಇಳಿಸಲು ಹೇಗೆ ಸಾಧ್ಯವಾಯಿತು? ಎಂದು ಹಲವರು ಪ್ರಶ್ನಿಸಿದ್ದಾರೆ. ಇದಕ್ಕೂ ಮೊದಲು ತಮ್ಮ ಕುಟುಂಬದವರೊಂದಿಗೆ ಇದ್ದ ಸೆಲ್ಫೀಯನ್ನು ಕೂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಆ ಸೆಲ್ಫೀಯಲ್ಲಿ ಕೆಂಪು ಕುರ್ತಾ ಧರಿಸಿದ್ದ ಸ್ಮೃತಿ ಇರಾನಿ ತೂಕ ಇಳಿಸಿದ್ದನ್ನು ಅನೇಕರು ಗಮನಿಸಿದ್ದರು.

ಇದನ್ನೂ ಓದಿ: Lal Salaam: ಲಾಲ್ ಸಲಾಂ ಕಾದಂಬರಿ ಮೂಲಕ ಲೇಖಕಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪ್ರೊಫೆಸರ್​ಗೆ ಜೈಲು

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ