AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

ಸ್ಮೃತಿ ಇರಾನಿ ತೆಳ್ಳಗಾಗಿರುವ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ
ತೂಕ ಇಳಿಸಿದ ಸ್ಮೃತಿ ಇರಾನಿ
TV9 Web
| Edited By: |

Updated on: Nov 18, 2021 | 5:38 PM

Share

ಹಿಂದಿ ಕಿರುತೆರೆಯ ಖ್ಯಾತ ನಟಿಯಾಗಿದ್ದ ಸ್ಮೃತಿ ಇರಾನಿ (Smriti Irani) ಬಳಿಕ ರಾಜಕಾರಣದಲ್ಲಿ ಸಕ್ರಿಯರಾದವರು. ಇದೀಗ ಕೇಂದ್ರ ಸಚಿವೆಯೂ ಆಗಿರುವ ಸ್ಮೃತಿ ಇರಾನಿ ಯುವತಿಯೂ ನಾಚುವಂತೆ ತೂಕ ಇಳಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸ್ಮೃತಿ ಇರಾನಿ ಮಾಡಿರುವ ಹೊಸ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ತಮ್ಮ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋವನ್ನು ನೋಡಿದ ಸ್ಮೃತಿ ಇರಾನಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ದಪ್ಪಗಾಗಿದ್ದ ಸ್ಮೃತಿ ಇರಾನಿ ತೆಳ್ಳಗಾಗಿರುವ ರೀತಿಯನ್ನು ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ತೆಳ್ಳಗೆ ಯುವತಿಯಂತೆ ಕಾಣುತ್ತಿರುವ ಸ್ಮೃತಿ ಇರಾನಿ ಮರದಿಂದ ಹೂವನ್ನು ಕೊಯ್ಯುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋ ನೋಡಿ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ನಟಿ ಸೋನಂ ಕಪೂರ್, ಮೌನಿ ರಾಯ್ ಮುಂತಾದ ನಟಿಯರು ಕೂಡ ಅಚ್ಚರಿ ಪಟ್ಟಿದ್ದಾರೆ.

ಭಾರತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮತ್ತು ಮಾಜಿ ನಟಿಯೂ ಆಗಿರುವ ಸ್ಮೃತಿ ಇರಾನಿ ಪಾರ್ಕ್​ನಲ್ಲಿ ನಿಂತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ಅರ್ಧಕ್ಕರ್ಧ ತೂಕ ಇಳಿಸಿರುವ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೇ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡ ಇಳಿಸಿ ಮೇಡಂ ಎಂದು ಕೆಲವರು ಕಿಚಾಯಿಸಿದ್ದಾರೆ.

ನೀವು ಹೇಗೆ ತೂಕ ಇಳಿಸಿಕೊಂಡಿದ್ದೀರ ಎಂಬುದನ್ನು ನಮಗೆ ವಿವರಿಸುತ್ತೀರ? ನೀವು ಎಲ್ಲ ಕ್ಷೇತ್ರಗಳಲ್ಲೂ ಸಾಧಕರಾಗಿದ್ದೀರಿ. ಈ ವಯಸ್ಸಿನಲ್ಲಿ ಇಷ್ಟು ತೂಕ ಇಳಿಸಲು ಹೇಗೆ ಸಾಧ್ಯವಾಯಿತು? ಎಂದು ಹಲವರು ಪ್ರಶ್ನಿಸಿದ್ದಾರೆ. ಇದಕ್ಕೂ ಮೊದಲು ತಮ್ಮ ಕುಟುಂಬದವರೊಂದಿಗೆ ಇದ್ದ ಸೆಲ್ಫೀಯನ್ನು ಕೂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಆ ಸೆಲ್ಫೀಯಲ್ಲಿ ಕೆಂಪು ಕುರ್ತಾ ಧರಿಸಿದ್ದ ಸ್ಮೃತಿ ಇರಾನಿ ತೂಕ ಇಳಿಸಿದ್ದನ್ನು ಅನೇಕರು ಗಮನಿಸಿದ್ದರು.

ಇದನ್ನೂ ಓದಿ: Lal Salaam: ಲಾಲ್ ಸಲಾಂ ಕಾದಂಬರಿ ಮೂಲಕ ಲೇಖಕಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪ್ರೊಫೆಸರ್​ಗೆ ಜೈಲು

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!