AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ

ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ
ಸ್ಮೃತಿ ಇರಾನಿ
Follow us
TV9 Web
| Updated By: Pavitra Bhat Jigalemane

Updated on: Dec 17, 2021 | 3:10 PM

ನವದೆಹಲಿ: ವಿಧಾನಸಭೆಯಲ್ಲಿ ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಅವರ ರೇಪ್​ ಕುರಿತಾದ ಹೇಳಿಕೆ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದೆ. ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕರ ಈ ರೀತಿಯ ಹೇಳಿಕೆ ಹೆಣ್ಣಿಗೆ ಅವಮಾನ ಮಾಡಿದಂತೆ ನಾನೂ ಹೆಣ್ಣು, ನಾನೂ ಹೋರಾಡಬಲ್ಲೆ ಎಂದು ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಸದನದಲ್ಲಿ ರೇಪ್​ ಅಗುವುದನ್ನು ತಡೆಯಲು ಆಗದಿದ್ದರೆ ಅದನ್ನು ಎಂಜಾಯ್​ ಮಾಡಿ ಎಂದು ಹೆಣ್ಣು ಮಕ್ಕಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯದಲ್ಲಿ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ರಮೇಶ್ ಕುಮಾರ್ ಬೆಳಗ್ಗೆ ಟ್ವೀಟ್​ ಮೂಲಕ ಕ್ಷಮೆಯಾಚಿಸಿದ್ದರು.

ಸದನದಲ್ಲಿ ನಾನು ನೀಡಿದ ಅಸಡ್ಡೆ ಹಾಗೂ ನಿರ್ಲಕ್ಷ್ಯದ ಕಾಮೆಂಟ್​ ಬಗ್ಗೆ ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಈ ನೀಚ ಕೃತ್ಯವನ್ನು ಕ್ಷುಲಕ ಎಂದು ಹೇಳುವುದು ನನ್ನ ಉದ್ದೇಶವಾಗಿರಲಿಲ್ಲ. ಆದರೆ ಇನ್ನು ಮುಂದೆ ನಾನು ಪದಗಳನ್ನು ಆಯ್ಕೆ ಮಾಡಿ ಮಾತನಾಡುವುದ ರ ಬಗ್ಗೆ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡು ಕ್ಷಮೆ ಕೇಳಿದ್ದರು. ಇದೀಗ ಲೋಕಸಭೆಯಲ್ಲಿಯೂ ರಮೇಶ್​​ ಕುಮಾರ್​ ವಿಚಾರ ಚರ್ಚೆಗೆ ಬಂದಿದ್ದು ಕಾಂಗ್ರೆಸ್​ ಶಾಸಕರ ಹೇಳಿಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ರಮೇಶ್​ ಕುಮಾರ್​ ಈ ಹಿಂದೆಯೂ ಹೆಣ್ಣು ಮಕ್ಕಳ ಬಗ್ಗೆ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಮತ್ತೆ ಅವರ ಹೇಳಿಕೆ ರಾಷ್ಟ್ರಮಟ್ಟದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:

ಶಾಸಕ ರಮೇಶ್ ಕುಮಾರ್ ಹೇಳಿಕೆಯಿಂದ ಮುಜುಗರಕ್ಕೀಡಾದ ಕಾಂಗ್ರೆಸ್; ಪಕ್ಷದ ನಾಯಕರಿಂದಲೂ ಖಂಡನೆ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ