AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ

ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ
ಸ್ಮೃತಿ ಇರಾನಿ
TV9 Web
| Edited By: |

Updated on: Dec 17, 2021 | 3:10 PM

Share

ನವದೆಹಲಿ: ವಿಧಾನಸಭೆಯಲ್ಲಿ ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಅವರ ರೇಪ್​ ಕುರಿತಾದ ಹೇಳಿಕೆ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದೆ. ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕರ ಈ ರೀತಿಯ ಹೇಳಿಕೆ ಹೆಣ್ಣಿಗೆ ಅವಮಾನ ಮಾಡಿದಂತೆ ನಾನೂ ಹೆಣ್ಣು, ನಾನೂ ಹೋರಾಡಬಲ್ಲೆ ಎಂದು ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಸದನದಲ್ಲಿ ರೇಪ್​ ಅಗುವುದನ್ನು ತಡೆಯಲು ಆಗದಿದ್ದರೆ ಅದನ್ನು ಎಂಜಾಯ್​ ಮಾಡಿ ಎಂದು ಹೆಣ್ಣು ಮಕ್ಕಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯದಲ್ಲಿ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ರಮೇಶ್ ಕುಮಾರ್ ಬೆಳಗ್ಗೆ ಟ್ವೀಟ್​ ಮೂಲಕ ಕ್ಷಮೆಯಾಚಿಸಿದ್ದರು.

ಸದನದಲ್ಲಿ ನಾನು ನೀಡಿದ ಅಸಡ್ಡೆ ಹಾಗೂ ನಿರ್ಲಕ್ಷ್ಯದ ಕಾಮೆಂಟ್​ ಬಗ್ಗೆ ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಈ ನೀಚ ಕೃತ್ಯವನ್ನು ಕ್ಷುಲಕ ಎಂದು ಹೇಳುವುದು ನನ್ನ ಉದ್ದೇಶವಾಗಿರಲಿಲ್ಲ. ಆದರೆ ಇನ್ನು ಮುಂದೆ ನಾನು ಪದಗಳನ್ನು ಆಯ್ಕೆ ಮಾಡಿ ಮಾತನಾಡುವುದ ರ ಬಗ್ಗೆ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡು ಕ್ಷಮೆ ಕೇಳಿದ್ದರು. ಇದೀಗ ಲೋಕಸಭೆಯಲ್ಲಿಯೂ ರಮೇಶ್​​ ಕುಮಾರ್​ ವಿಚಾರ ಚರ್ಚೆಗೆ ಬಂದಿದ್ದು ಕಾಂಗ್ರೆಸ್​ ಶಾಸಕರ ಹೇಳಿಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ರಮೇಶ್​ ಕುಮಾರ್​ ಈ ಹಿಂದೆಯೂ ಹೆಣ್ಣು ಮಕ್ಕಳ ಬಗ್ಗೆ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಮತ್ತೆ ಅವರ ಹೇಳಿಕೆ ರಾಷ್ಟ್ರಮಟ್ಟದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:

ಶಾಸಕ ರಮೇಶ್ ಕುಮಾರ್ ಹೇಳಿಕೆಯಿಂದ ಮುಜುಗರಕ್ಕೀಡಾದ ಕಾಂಗ್ರೆಸ್; ಪಕ್ಷದ ನಾಯಕರಿಂದಲೂ ಖಂಡನೆ

Follow Us
TV9 Web
TV9 Web

TV9 Kannada

Read More
ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್
ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್
ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ
ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ
ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ