AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ನಲ್ಲಿ ರಾಹುಲ್ ಗಾಂಧಿಯಿಂದ ‘ಫ್ಲೈಯಿಂಗ್ ಕಿಸ್’: ಆಕ್ಷೇಪ ವ್ಯಕ್ತಪಡಿಸಿದ ಸ್ಮೃತಿ ಇರಾನಿ, ಸ್ಪೀಕರ್​​ಗೆ ದೂರು

ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ನನಗಿಂತ ಮೊದಲು ಮಾತನಾಡಿದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾರೆ. ಸ್ತ್ರೀದ್ವೇಷಿಯಾಗಿರುವ ಪುರುಷ ಮಾತ್ರ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಬಹುದು. ಇದು ಅವರ ಕುಟುಂಬ ಮತ್ತು ಪಕ್ಷವು ಮಹಿಳೆಯರ ಬಗ್ಗೆ ಅವರ ಭಾವನೆ ಏನಿದೆ ಎಂಬುದನ್ನು ತೋರಿಸುತ್ತದೆ. ಇಂತಹ ಅಮಾನವೀಯ ನಡವಳಿಕೆಯನ್ನು ದೇಶದ ಸಂಸತ್ತಿನಲ್ಲಿ ಹಿಂದೆಂದೂ ಕಂಡಿರಲಿಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಸಂಸತ್​​ನಲ್ಲಿ ರಾಹುಲ್ ಗಾಂಧಿಯಿಂದ 'ಫ್ಲೈಯಿಂಗ್ ಕಿಸ್': ಆಕ್ಷೇಪ ವ್ಯಕ್ತಪಡಿಸಿದ ಸ್ಮೃತಿ ಇರಾನಿ, ಸ್ಪೀಕರ್​​ಗೆ ದೂರು
ರಾಹುಲ್ ಗಾಂಧಿ- ಸ್ಮೃತಿ ಇರಾನಿ
Follow us
ರಶ್ಮಿ ಕಲ್ಲಕಟ್ಟ
|

Updated on:Aug 09, 2023 | 5:53 PM

ದೆಹಲಿ ಆಗಸ್ಟ್ 09: ಸಂಸತ್ ಸ್ಥಾನ ಮರುಸ್ಥಾಪನೆ ಆದ ಬಳಿಕ ರಾಹುಲ್ ಗಾಂಧಿ (Rahul Gandhi) ಬುಧವಾರ ಲೋಕಸಭೆಯಲ್ಲಿ (Lok Sabha) ಮೊದಲ ಬಾರಿ ಭಾಷಣ ಮಾಡಿದ್ದಾರೆ. ಆದರೆ ರಾಜಸ್ಥಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ತಮ್ಮ ಭಾಷಣದ ಪ್ರತಿಕ್ರಿಯೆ ಕೇಳಲು ನಿಲ್ಲದೆ ಅವರು ಅಲ್ಲಿಂದ ಹೊರ ನಡೆದಿದ್ದಾರೆ. 2018 ರಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧದ ಕೊನೆಯ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಅವರು ಮೋದಿಗೆ ಅಪ್ಪುಗೆ ನೀಡಿದ್ದು, ಕಣ್ಣು ಮಿಟುಕಿಸಿದ್ದರು. ಆದರೆ ಈ ಬಾರಿ ಫ್ಲೈಯಿಂಗ್ ಕಿಸ್ (Flying Kiss) ನೀಡಿದ್ದು ಸುದ್ದಿಯಾಗಿದೆ. ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಪ್ರತಿಕ್ರಿಯೆ ನೀಡಲು ಮುಂದಾದಾಗ, ರಾಹುಲ್ ಗಾಂಧಿ ಹೊರ ನಡೆದಿದ್ದಾರೆ. ಆಗ ಅವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂಬ ಆರೋಪವೆದ್ದಿದೆ.

ಏತನ್ಮಧ್ಯೆ, ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ನನಗಿಂತ ಮೊದಲು ಮಾತನಾಡಿದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾರೆ. ಸ್ತ್ರೀದ್ವೇಷಿಯಾಗಿರುವ ಪುರುಷ ಮಾತ್ರ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಬಹುದು. ಇದು ಅವರ ಕುಟುಂಬ ಮತ್ತು ಪಕ್ಷವು ಮಹಿಳೆಯರ ಬಗ್ಗೆ ಅವರ ಭಾವನೆ ಏನಿದೆ ಎಂಬುದನ್ನು ತೋರಿಸುತ್ತದೆ. ಇಂತಹ ಅಮಾನವೀಯ ನಡವಳಿಕೆಯನ್ನು ದೇಶದ ಸಂಸತ್ತಿನಲ್ಲಿ ಹಿಂದೆಂದೂ ಕಂಡಿರಲಿಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇದು ಅವಮಾನಕರ ರೀತಿಯ ವರ್ತನೆ: ಬಿಜೆಪಿ

ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ರಾಹುಲ್ ಗಾಂಧಿಯವರ ‘ಫ್ಲೈಯಿಂಗ್ ಕಿಸ್’ ಖಂಡಿಸಿದ್ದು, ಇದು ಈ ನಾಚಿಕೆಗೇಡಿನ ವರ್ತನೆ ಎಂದಿದ್ದಾರೆ. ಕಳೆದ ಬಾರಿ ಕಣ್ಣು ಮಿಟುಕಿಸಿದ್ರು, ಆಗ ಫ್ಲೈಯಿಂಗ್ ಕಿಸ್. ಸ್ಮೃತಿ ಇರಾನಿ ಅವರ ವಿರುದ್ಧ ರಾಹುಲ್ ಗಾಂಧಿಯವರದ್ದು ನಾಚಿಕೆಗೇಡಿನ ವರ್ತನೆ. ಇದು ಅವಮಾನಕರ ಮತ್ತು ಚಿಚೋರಾ ರೀತಿಯ ನಡವಳಿಕೆಯಲ್ಲವೇ? ವಿಪರ್ಯಾಸವೆಂದರೆ ಅವರು ಮಹಿಳಾ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ ಎಂದಿದ್ದಾರೆ ಶೆಹಜಾದ್.

ಇದನ್ನೂ ಓದಿ: ಭಾರತ ಮಾತೆಯ ಸಾವಿನ ಬಗ್ಗೆ ಮಾತನಾಡುತ್ತೀರಾ?: ರಾಹುಲ್ ಗಾಂಧಿ ವಿರುದ್ಧ ಗುಡುಗಿದ ಸ್ಮೃತಿ ಇರಾನಿ

2018ರಲ್ಲಿ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯವರು ಕುಳಿತಲ್ಲಿಗೆ ನಡೆದುಕೊಂಡು ಹೋಗಿ ಅಪ್ಪಿಕೊಂಡರು. ಅಷ್ಟೊತ್ತಿಗಾಗಲೇ ರಾಹುಲ್ ಗಾಂಧಿ ಮಾತನಾಡಿದ್ದರು. ಅವರು ತಮ್ಮ ಆಸನಕ್ಕೆ ಹಿಂತಿರುಗುತ್ತಿದ್ದಂತೆ  ಪಿಎಂ ಮೋದಿಯವರಿಗೆ ಹಠಾತ್ ಅಪ್ಪುಗೆಯ ಬಗ್ಗೆ ಸದನದಲ್ಲಿ ಸದಸ್ಯರು ಏನಾಯ್ತು ಎಂದು ನೋಡುತ್ತಿರುವಾಗಲೇ ಅವರು ಕಣ್ಣು ಮಿಟುಕಿಸಿ ನಕ್ಕಿದ್ದರು.

ಸ್ಮೃತಿ ಇರಾನಿ ಆಕ್ಷೇಪ ವ್ಯಕ್ತಪಡಿಸಿದ ನಂತರ, ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ವಿರುದ್ಧ ಬಿಜೆಪಿ ಮಹಿಳಾ ಸಂಸದರು ಸ್ಪೀಕರ್‌ಗೆ ದೂರು ನೀಡಿದ್ದಾರೆ. ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು, ಎಲ್ಲಾ ಮಹಿಳಾ ಸದಸ್ಯರಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ರಾಹುಲ್ ಗಾಂಧಿ ಹೊರಟು ಹೋದರು. ಇದು ಸದಸ್ಯರೊಬ್ಬರ ಅನುಚಿತ ಮತ್ತು ಅಸಭ್ಯ ವರ್ತನೆ. ಇದು ಸದಸ್ಯನ ಅನುಚಿತ ಮತ್ತು ಅಸಭ್ಯ ವರ್ತನೆ ಎಂದು ಹಿರಿಯ ಸದಸ್ಯರು ಹೇಳುತ್ತಿದ್ದಾರೆ. ಭಾರತದ ಸಂಸತ್ತಿನ ಇತಿಹಾಸದಲ್ಲಿ ಇದುವರೆಗೆ ನಡೆದಿಲ್ಲ…ಏನು ಈ ನಡವಳಿಕೆ?ಎಂತಹ ನಾಯಕ ಇವರು?ಅದಕ್ಕಾಗಿಯೇ ಇದರ ಸಿಸಿಟಿವಿ ದೃಶ್ಯಾವಳಿಗಳನ್ನು ತೆಗೆದುಕೊಂಡು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್‌ಗೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 9 August 23

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ