AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Election 2021: ಭರ್ಜರಿ ಡ್ಯಾನ್ಸ್​ ಮಾಡಿ, ಸ್ಕೂಟರ್​ ರೈಡ್ ಮಾಡಿ ಚುನಾವಣಾ ಪ್ರಚಾರ ನಡೆಸಿದ ಸಚಿವೆ ಸ್ಮೃತಿ ಇರಾನಿ

ತಮಿಳುನಾಡಿನ ಒಟ್ಟು 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 118 ಮ್ಯಾಜಿಕ್ ನಂಬರ್. ಅಂದರೆ ಸರ್ಕಾರ ರಚಿಸಲು 118 ಸೀಟುಗಳು ಸಾಕು. ಇಲ್ಲಿ ಬಿಜೆಪಿ AIADMKಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ತಮಿಳುನಾಡಿನಲ್ಲಿ ಪ್ರಚಾರ ನಡೆಸಿದ್ದರು.

Tamil Nadu Election 2021: ಭರ್ಜರಿ ಡ್ಯಾನ್ಸ್​ ಮಾಡಿ, ಸ್ಕೂಟರ್​ ರೈಡ್ ಮಾಡಿ ಚುನಾವಣಾ ಪ್ರಚಾರ ನಡೆಸಿದ ಸಚಿವೆ ಸ್ಮೃತಿ ಇರಾನಿ
ಸ್ಮೃತಿ ಇರಾನಿ
Lakshmi Hegde
|

Updated on: Mar 27, 2021 | 5:54 PM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ದಕ್ಷಿಣ ಕೊಯಮತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವನತಿ ಶ್ರೀನಿವಾಸನ್​ ಪರ ಪ್ರಚಾರ ನಡೆಸಿದ ಅವರು, ತಮಿಳುನಾಡಿನ ಸಾಂಪ್ರದಾಯಿಕ ನೃತ್ಯವನ್ನೂ ಮಾಡಿದರು. ಅಷ್ಟೇ ಅಲ್ಲ, ಬೈಕ್​, ಆಟೋದಲ್ಲಿ ಕೂಡ ಸಂಚರಿಸಿ ಮತ ಯಾಚನೆ ಮಾಡಿದ್ದಾರೆ. ಈ ಫೋಟೋ, ವಿಡಿಯೋಗಳು ವೈರಲ್ ಆಗಿವೆ.

ಇನ್ನು ಸ್ಮೃತಿ ಇರಾನಿ ಸ್ವತಃ ದ್ವಿಚಕ್ರವಾಹನ ಓಡಿಸಿದ್ದು, ಇನ್ನೊಂದು ಸ್ಕೂಟರ್​​ನಲ್ಲಿ ವನತಿ ಶ್ರೀನಿವಾಸನ್​ ಇದ್ದರು. ನಂತರ ಇವರಿಬ್ಬರೂ ಸೇರಿ ಬಿಜೆಪಿ ಕಾರ್ಯಕರ್ತೆಯರ ಜತೆ ಸೇರಿ ಸಾಂಪ್ರದಾಯಿಕ ನೃತ್ಯ ಮಾಡಿದ್ದಾರೆ. ತಮಿಳುನಾಡಿನ ವಿಧಾನಸಭಾ ಚುನಾವಣೆ ಏಪ್ರಿಲ್​ 6ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನ ಒಟ್ಟು 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 118 ಮ್ಯಾಜಿಕ್ ನಂಬರ್. ಅಂದರೆ ಸರ್ಕಾರ ರಚಿಸಲು 118 ಸೀಟುಗಳು ಸಾಕು. ಇಲ್ಲಿ ಬಿಜೆಪಿ AIADMKಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ತಮಿಳುನಾಡಿನಲ್ಲಿ ಪ್ರಚಾರ ನಡೆಸಿದ್ದರು. ಇಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮೊದಲ ಹಂತದ ಮತದಾನ ನಡೆದಿದ್ದು, ಏಪ್ರಿಲ್​ 6ರಂದು ಕೇರಳ, ತಮಿಳು ನಾಡು, ಪುದುಚೇರಿಯಲ್ಲಿ ಎಲೆಕ್ಷನ್​ ಇರಲಿದೆ. ಈ ಪಂಚರಾಜ್ಯಗಳ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಮತ ಸೆಳೆಯುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!