AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿಯ ನಿಶ್ಚಿತಾರ್ಥ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ; ಹೃತ್ಪೂರ್ವಕ ಸಂದೇಶದೊಂದಿಗೆ ಇನ್​ಸ್ಟಾ ಪೋಸ್ಟ್​​

ಅಂದಹಾಗೆ ಸ್ಮೃತಿ ಇರಾನಿಗೆ ಶಾನೆಲ್​ ಸ್ವಂತ ಮಗಳಲ್ಲ. ಪತಿ ಜುಬಿನ್​ ಅವರ ಮೊದಲ ಪತ್ನಿ ಮೋನಾ ಮಗಳು. ಹಾಗಂತ ಇವರೆಲ್ಲ ಸ್ನೇಹದಿಂದಲೇ ಇದ್ದಾರೆ. ಶಾನೆಲ್​ರನ್ನೂ ಸ್ಮೃತಿ ಇರಾನಿ ಪ್ರೀತಿಯಿಂದಲೇ ನೋಡಿಕೊಳ್ಳುತ್ತಾರೆ.

ಪುತ್ರಿಯ ನಿಶ್ಚಿತಾರ್ಥ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ; ಹೃತ್ಪೂರ್ವಕ ಸಂದೇಶದೊಂದಿಗೆ ಇನ್​ಸ್ಟಾ ಪೋಸ್ಟ್​​
ಶಾನೆಲ್​ ಇರಾನಿ ಮತ್ತು ಅರ್ಜುನ್​ ಭಲ್ಲಾ
TV9 Web
| Edited By: |

Updated on: Dec 26, 2021 | 8:33 AM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಷಿಯಲ್​ ಮೀಡಿಯಾಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಹಾಗೇ, ಇದೀಗ ತಮ್ಮ ಇನ್​ಸ್ಟಾಗ್ರಾಂನಲ್ಲಿ ಒಂದು ಗುಡ್​ ನ್ಯೂಸ್ ಹಂಚಿಕೊಂಡಿದ್ದಾರೆ. ತಮ್ಮ ಮಗಳು ಶಾನೆಲ್​ ನಿಶ್ಚಿತಾರ್ಥವಾಯಿತು ಎಂದು ಹೇಳಿರುವ ಅವರು, ಮಗಳು ಮತ್ತು ಬಾವಿ ಅಳಿಯನ ಫೋಟೋವನ್ನು  ಇನ್​ಸ್ಟಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.  ಅಂದಹಾಗೆ, ಸ್ಮೃತಿ ಇರಾನಿ ಪುತ್ರಿ ಶಾನೆಲ್, ಅರ್ಜುನ್​ ಭಲ್ಲಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸ್ಮೃತಿ ಇರಾನಿ ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. 

ಮೊದಲ ಫೋಟೋದಲ್ಲಿ ಅರ್ಜುನ್​ ಅವರು ಶಾನೆಲ್​​ಗೆ ಪ್ರಪೋಸ್​ ಮಾಡುತ್ತಿರುವುದನ್ನು ನೋಡಬಹುದು. ಹಾಗೇ ಎರಡನೇ ಫೋಟೋ, ಇವರಿಬ್ಬರೂ ಪ್ರೀತಿಯಿಂದ ಮುಖಕ್ಕೆ-ಮುಖ ತಾಗಿಸಿ ನಗುತ್ತ ನಿಂತಿರುವುದನ್ನು ನೋಡಬಹುದು. ಹಾಗೇ, ಸ್ಮೃತಿ ಇರಾನಿ ಎಂದಿನಿಂತೆ ಫನ್ನಿಯಾಗಿ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಅರ್ಜುನ್​ ಭಲ್ಲಾ ನಮ್ಮ ಹೃದಯವನ್ನು ಗೆದ್ದ ವ್ಯಕ್ತಿ. ಅವರಿಗೆ ನಮ್ಮ ಕ್ರೇಜಿ ಕುಟುಂಬಕ್ಕೆ ಸ್ವಾಗತ. ಹಾಗೇ, ನೀವು ಇನ್ನು ಮುಂದೆ ನಮ್ಮ ಹುಚ್ಚುತನವನ್ನೆಲ್ಲ ಸಹಿಸಿಕೊಳ್ಳಬೇಕು ಎಂದು ಅರ್ಜುನ್​ಗೆ ಪ್ರೀತಿಯಿಂದ ಎಚ್ಚರಿಕೆಯನ್ನೂ ನೀಡಿದ್ದಾರೆ. ಹಾಗೇ, ದೇವರು ಒಳ್ಳೆಯದು ಮಾಡಲಿ ಎಂದಿದ್ದಾರೆ.

ಅಂದಹಾಗೆ ಸ್ಮೃತಿ ಇರಾನಿಗೆ ಶಾನೆಲ್​ ಸ್ವಂತ ಮಗಳಲ್ಲ. ಪತಿ ಜುಬಿನ್​ ಅವರ ಮೊದಲ ಪತ್ನಿ ಮೋನಾ ಮಗಳು. ಹಾಗಂತ ಇವರೆಲ್ಲ ಸ್ನೇಹದಿಂದಲೇ ಇದ್ದಾರೆ. ಶಾನೆಲ್​ರನ್ನೂ ಸ್ಮೃತಿ ಇರಾನಿ ಪ್ರೀತಿಯಿಂದಲೇ ನೋಡಿಕೊಳ್ಳುತ್ತಾರೆ. ಹಾಗೇ, ಸ್ಮೃತಿ ಇರಾನಿಗೆ ಜೋಹರ್​ ಎಂಬ ಮಗ ಮತ್ತು ಜೋಯಿಶ್​ ಎಂಬ ಮಗಳಿದ್ದಾರೆ. ಈ ಹಿಂದೆ ಒಮ್ಮೆ ತಮ್ಮ ಮೂರು ಮಕ್ಕಳೊಂದಿಗೆ ಇರುವ ಫೋಟೋವನ್ನು ಸ್ಮೃತಿ ಇರಾನಿ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದರು. ನನಗೆ ನನ್ನ ಮಕ್ಕಳೇ ಜೀವ, ಪ್ರಪಂಚ ಎಂದು ಕ್ಯಾಪ್ಷನ್​ ಬರೆದಿದ್ದರು.

ಇದನ್ನೂ ಓದಿ: Mann Ki Baat: ಇಂದು ವರ್ಷದ ಕೊನೇ ಮನ್​ ಕೀ ಬಾತ್​​ನಲ್ಲಿ ಪ್ರಧಾನಿ ಮೋದಿ ಮಾತು; ಸಮಯ ಯಾವುದು? ಎಲ್ಲೆಲ್ಲಿ ಪ್ರಸಾರವಾಗಲಿದೆ? ಇಲ್ಲಿದೆ ಮಾಹಿತಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು