AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿಯ ನಿಶ್ಚಿತಾರ್ಥ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ; ಹೃತ್ಪೂರ್ವಕ ಸಂದೇಶದೊಂದಿಗೆ ಇನ್​ಸ್ಟಾ ಪೋಸ್ಟ್​​

ಅಂದಹಾಗೆ ಸ್ಮೃತಿ ಇರಾನಿಗೆ ಶಾನೆಲ್​ ಸ್ವಂತ ಮಗಳಲ್ಲ. ಪತಿ ಜುಬಿನ್​ ಅವರ ಮೊದಲ ಪತ್ನಿ ಮೋನಾ ಮಗಳು. ಹಾಗಂತ ಇವರೆಲ್ಲ ಸ್ನೇಹದಿಂದಲೇ ಇದ್ದಾರೆ. ಶಾನೆಲ್​ರನ್ನೂ ಸ್ಮೃತಿ ಇರಾನಿ ಪ್ರೀತಿಯಿಂದಲೇ ನೋಡಿಕೊಳ್ಳುತ್ತಾರೆ.

ಪುತ್ರಿಯ ನಿಶ್ಚಿತಾರ್ಥ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ; ಹೃತ್ಪೂರ್ವಕ ಸಂದೇಶದೊಂದಿಗೆ ಇನ್​ಸ್ಟಾ ಪೋಸ್ಟ್​​
ಶಾನೆಲ್​ ಇರಾನಿ ಮತ್ತು ಅರ್ಜುನ್​ ಭಲ್ಲಾ
TV9 Web
| Edited By: |

Updated on: Dec 26, 2021 | 8:33 AM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಷಿಯಲ್​ ಮೀಡಿಯಾಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಹಾಗೇ, ಇದೀಗ ತಮ್ಮ ಇನ್​ಸ್ಟಾಗ್ರಾಂನಲ್ಲಿ ಒಂದು ಗುಡ್​ ನ್ಯೂಸ್ ಹಂಚಿಕೊಂಡಿದ್ದಾರೆ. ತಮ್ಮ ಮಗಳು ಶಾನೆಲ್​ ನಿಶ್ಚಿತಾರ್ಥವಾಯಿತು ಎಂದು ಹೇಳಿರುವ ಅವರು, ಮಗಳು ಮತ್ತು ಬಾವಿ ಅಳಿಯನ ಫೋಟೋವನ್ನು  ಇನ್​ಸ್ಟಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.  ಅಂದಹಾಗೆ, ಸ್ಮೃತಿ ಇರಾನಿ ಪುತ್ರಿ ಶಾನೆಲ್, ಅರ್ಜುನ್​ ಭಲ್ಲಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸ್ಮೃತಿ ಇರಾನಿ ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. 

ಮೊದಲ ಫೋಟೋದಲ್ಲಿ ಅರ್ಜುನ್​ ಅವರು ಶಾನೆಲ್​​ಗೆ ಪ್ರಪೋಸ್​ ಮಾಡುತ್ತಿರುವುದನ್ನು ನೋಡಬಹುದು. ಹಾಗೇ ಎರಡನೇ ಫೋಟೋ, ಇವರಿಬ್ಬರೂ ಪ್ರೀತಿಯಿಂದ ಮುಖಕ್ಕೆ-ಮುಖ ತಾಗಿಸಿ ನಗುತ್ತ ನಿಂತಿರುವುದನ್ನು ನೋಡಬಹುದು. ಹಾಗೇ, ಸ್ಮೃತಿ ಇರಾನಿ ಎಂದಿನಿಂತೆ ಫನ್ನಿಯಾಗಿ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಅರ್ಜುನ್​ ಭಲ್ಲಾ ನಮ್ಮ ಹೃದಯವನ್ನು ಗೆದ್ದ ವ್ಯಕ್ತಿ. ಅವರಿಗೆ ನಮ್ಮ ಕ್ರೇಜಿ ಕುಟುಂಬಕ್ಕೆ ಸ್ವಾಗತ. ಹಾಗೇ, ನೀವು ಇನ್ನು ಮುಂದೆ ನಮ್ಮ ಹುಚ್ಚುತನವನ್ನೆಲ್ಲ ಸಹಿಸಿಕೊಳ್ಳಬೇಕು ಎಂದು ಅರ್ಜುನ್​ಗೆ ಪ್ರೀತಿಯಿಂದ ಎಚ್ಚರಿಕೆಯನ್ನೂ ನೀಡಿದ್ದಾರೆ. ಹಾಗೇ, ದೇವರು ಒಳ್ಳೆಯದು ಮಾಡಲಿ ಎಂದಿದ್ದಾರೆ.

ಅಂದಹಾಗೆ ಸ್ಮೃತಿ ಇರಾನಿಗೆ ಶಾನೆಲ್​ ಸ್ವಂತ ಮಗಳಲ್ಲ. ಪತಿ ಜುಬಿನ್​ ಅವರ ಮೊದಲ ಪತ್ನಿ ಮೋನಾ ಮಗಳು. ಹಾಗಂತ ಇವರೆಲ್ಲ ಸ್ನೇಹದಿಂದಲೇ ಇದ್ದಾರೆ. ಶಾನೆಲ್​ರನ್ನೂ ಸ್ಮೃತಿ ಇರಾನಿ ಪ್ರೀತಿಯಿಂದಲೇ ನೋಡಿಕೊಳ್ಳುತ್ತಾರೆ. ಹಾಗೇ, ಸ್ಮೃತಿ ಇರಾನಿಗೆ ಜೋಹರ್​ ಎಂಬ ಮಗ ಮತ್ತು ಜೋಯಿಶ್​ ಎಂಬ ಮಗಳಿದ್ದಾರೆ. ಈ ಹಿಂದೆ ಒಮ್ಮೆ ತಮ್ಮ ಮೂರು ಮಕ್ಕಳೊಂದಿಗೆ ಇರುವ ಫೋಟೋವನ್ನು ಸ್ಮೃತಿ ಇರಾನಿ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದರು. ನನಗೆ ನನ್ನ ಮಕ್ಕಳೇ ಜೀವ, ಪ್ರಪಂಚ ಎಂದು ಕ್ಯಾಪ್ಷನ್​ ಬರೆದಿದ್ದರು.

ಇದನ್ನೂ ಓದಿ: Mann Ki Baat: ಇಂದು ವರ್ಷದ ಕೊನೇ ಮನ್​ ಕೀ ಬಾತ್​​ನಲ್ಲಿ ಪ್ರಧಾನಿ ಮೋದಿ ಮಾತು; ಸಮಯ ಯಾವುದು? ಎಲ್ಲೆಲ್ಲಿ ಪ್ರಸಾರವಾಗಲಿದೆ? ಇಲ್ಲಿದೆ ಮಾಹಿತಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ