AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಿ ಮುಂಬೈ: ₹ 5.7 ಕೋಟಿ ಮೌಲ್ಯದ ಕಳ್ಳಸಾಗಣೆ ಸಿಗರೇಟ್‌ ವಶ

ಸಿಗರೇಟ್ ಪೆಟ್ಟಿಗೆಗಳನ್ನು ಹುಣಸೆ ಪೆಟ್ಟಿಗೆಯೊಳಗೆ ಇರಿಸಲಾಗಿತ್ತು. ಕಾರ್ಡ್ಬೋರ್ಡ್ ಪೆಟ್ಟಿಗೆಗಳನ್ನು ತೆರೆಯುವಾಗಲೂ ಸಿಗರೇಟ್ ಪೆಟ್ಟಿಗೆಗಳನ್ನು ಮರೆಮಾಡಲು ಹುಣಸೆಹಣ್ಣಿನಿಂದ ಎಲ್ಲಾ ಕಡೆಗಳಲ್ಲ ಮುಚ್ಚಲಾಗಿತ್ತು ಎಂದು ಡಿಆರ್ ಐ ಅಧಿಕಾರಿಯೊಬ್ಬರು ಹೇಳಿದರು.

ನವಿ ಮುಂಬೈ: ₹ 5.7 ಕೋಟಿ ಮೌಲ್ಯದ ಕಳ್ಳಸಾಗಣೆ ಸಿಗರೇಟ್‌ ವಶ
ಸಿಗರೇಟ್ ತುಂಬಿದ ಪೆಟ್ಟಿಗೆಗಳು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 29, 2023 | 7:16 PM

Share

ಮುಂಬೈ ಡಿಸೆಂಬರ್ 29: ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ₹ 5.77 ಕೋಟಿ ಮೌಲ್ಯದ ಕಳ್ಳಸಾಗಣೆ ಸಿಗರೇಟ್‌ಗಳನ್ನು (smuggled cigarettes )ನವಾ ಶೇವಾದಲ್ಲಿ ವಶಪಡಿಸಿಕೊಂಡಿದ್ದಾರೆ ಎಂದು ಏಜೆನ್ಸಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಮುಂಬೈನ ಡಿಆರ್‌ಐಗೆ ಸಿಕ್ಕಿದ ಗುಪ್ತಚರ ಮಾಹಿತಿ ಆಧಾರದ ಮೇಲೆ, ಜವಾಹರಲಾಲ್ ನೆಹರು ಬಂದರಿಗೆ ಬಂದ 40-ಅಡಿ ಶೈತ್ಯೀಕರಿಸಿದ ಕಂಟೇನರ್ ಅನ್ನು ನವಾ ಶೆವಾದಲ್ಲಿನ ಕಂಟೈನರ್ ಸರಕು ಸಾಗಣೆ ಕೇಂದ್ರದಲ್ಲಿ (CFS) ವಶ ಪಡಿಸಿಕೊಳ್ಳಲಾಗಿದೆ. ತಪಾಸಣೆ ವೇಳೆ ಸಿಗರೇಟ್ ಪೆಟ್ಟಿಗೆಗಳು ಪತ್ತೆಯಾಗಿವೆ.

ಕಂಟೈನರ್‌ನಲ್ಲಿನ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಸಿಗರೇಟ್ ಪೆಟ್ಟಿಗೆಗಳನ್ನು ಹುಣಸೆಹಣ್ಣನ್ನು ಹೊಂದಿರುವ ರಟ್ಟಿನ ಪೆಟ್ಟಿಗೆಗಳಲ್ಲಿ ಮರೆಮಾಡಲಾಗಿದೆ ಎಂದು ತಿಳಿದುಬಂದಿದೆ. ಹುಣಸೆಹಣ್ಣು ಹಡಗು ದಾಖಲೆಗಳಲ್ಲಿ ಘೋಷಿಸಲಾದ ವಸ್ತುವಾಗಿದೆ.

ಸಿಗರೇಟ್ ಪೆಟ್ಟಿಗೆಗಳನ್ನು ಹುಣಸೆ ಪೆಟ್ಟಿಗೆಯೊಳಗೆ ಇರಿಸಲಾಗಿತ್ತು. ಕಾರ್ಡ್ಬೋರ್ಡ್ ಪೆಟ್ಟಿಗೆಗಳನ್ನು ತೆರೆಯುವಾಗಲೂ ಸಿಗರೇಟ್ ಪೆಟ್ಟಿಗೆಗಳನ್ನು ಮರೆಮಾಡಲು ಹುಣಸೆಹಣ್ಣಿನಿಂದ ಎಲ್ಲಾ ಕಡೆಗಳಲ್ಲ ಮುಚ್ಚಲಾಗಿತ್ತು ಎಂದು ಡಿಆರ್ ಐ ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ರ‍್ಯಾಲಿ ನಡೆಯಲಿರುವ ಅಯೋಧ್ಯೆಯ ಮೈದಾನ ಪರಿಶೀಲಿಸಿ ಸೆಲ್ಫಿ ಕ್ಲಿಕ್ ಮಾಡಿದ ಯೋಗಿ ಆದಿತ್ಯನಾಥ್

ಕಳ್ಳಸಾಗಣೆ ಮಾಡಿದ ಸರಕು 33,92,000 ಸಿಗರೇಟ್ ಗಳನ್ನು ಹೊಂದಿದ್ದು, ಮಾರುಕಟ್ಟೆ ಮೌಲ್ಯ ಅಂದಾಜು ₹ 5.77 ಕೋಟಿ. ಪ್ರಕರಣದ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು