AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ ಆರೋಪ: ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ

Big Boss OTT Winner Elvish Yadav Arrested: ಖ್ಯಾತ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಒಟಿಟಿಯ ವಿಜೇತ ಎಲ್ವಿಶ್ ಯಾದವ್ ಅವರನ್ನು ವನ್ಯಜೀವಿ ಕಾಯ್ದೆ ಅಡಿ ಪೊಲೀಸರು ಬಂಧಿಸಿದ್ದಾರೆ. ರೇವ್ ಪಾರ್ಟಿಗಳಲ್ಲಿ ಹಾವಿನ ವಿಷದ ವ್ಯವಸ್ಥೆ ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿದೆ. ಜೊತೆಗೆ ತಮ್ಮ ಕೆಲ ಯೂಟ್ಯೂಬ್ ವಿಡಿಯೋಗಳಿಗೆ ಶೂಟ್ ಮಾಡುವಾಗ ಹಾವುಗಳನ್ನು ಬಳಸಿಕೊಂಡ ಆರೋಪವೂ ಇದೆ. ಹಾವಿನ ವಿಷ ಪೂರೈಕೆ ಮಾಡುತ್ತಿದ್ದ ಐವರನ್ನು ಈ ಹಿಂದೆ ಬಂಧಿಸಲಾಗಿತ್ತು.

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ ಆರೋಪ: ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ
ಎಲ್ವಿಶ್ ಯಾದವ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 17, 2024 | 5:36 PM

ನವದೆಹಲಿ, ಮಾರ್ಚ್ 17: ರೇವ್ ಪಾರ್ಟಿಯೊಂದರಲ್ಲಿ ಹಾವಿನ ವಿಷದ (snake venom) ವ್ಯವಸ್ಥೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಲ್ವಿಶ್ ಯಾದವ್ (Elvish Yadav) ಅವರನ್ನು ಪೊಲೀಸರು ಬಂಧಿಸಿದ್ದಾರೆ. ವನ್ಯಜೀವಿ ಕಾಯ್ದೆ (wildlife act) ಅಡಿಯಲ್ಲಿ ನೋಯ್ಡಾದಲ್ಲಿ ಎಲ್ವಿಶ್ ಯಾದವ್ ಸೇರಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ವಾರ ನಡೆದ ರೇವ್ ಪಾರ್ಟಿಗಳಲ್ಲಿ ಹಾವಿನ ವಿಷವನ್ನು ಇವರು ವ್ಯವಸ್ಥೆ ಮಾಡಿದರೆಂದು ಆರೋಪಿಸಲಾಗಿದೆ.

ಪೊಲೀಸರು ಈ ಪ್ರಕರಣ ಸಂಬಂಧ ನವೆಂಬರ್ 3ರಂದು ನೋಯ್ಡಾದ ಸೆಕ್ಟರ್ 51ರಲ್ಲಿ ಬಾಂಕ್ವೆಟ್ ಹಾಲ್​ವೊಂದರಲ್ಲಿ ದಾಳಿ ಮಾಡಿ ಐವರನ್ನು ಬಂಧಿಸಿದ್ದರು. ಅವರ ಪೈಕಿ ನಾಲ್ವರು ಹಾವಾಡಿರಾಗಿದ್ದರು. ಈ ದಾಳಿಯಲ್ಲಿ ಒಂಬತ್ತು ಹಾವುಗಳು ಹಾಗೂ ಅವುಗಳ ವಿಷವನ್ನು ಪೊಲೀಸರು ಜಫ್ತಿ ಮಾಡಿದ್ದರು. ಹಾವಿ ವಿಷವನ್ನು ಮತ್ತೇರಿಸಲು ಬಳಸಲಾಗುತ್ತದೆ. ರೇವ್ ಪಾರ್ಟಿಗಳಲ್ಲಿ ಇತರ ಮಾದಕ ವಸ್ತುಗಳ ಜೊತೆ ಹಾವಿನ ವಿಷ ಕೂಡ ಬಳಸಬಹುದು.

ಇದನ್ನೂ ಓದಿ: ಹಾಸ್ಟೆಲ್​ನಲ್ಲಿ ನಮಾಜ್​ ಮಾಡುತ್ತಿರುವ ವೇಳೆ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಈ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಎಲ್ವಿಶ್ ಯಾದವ್ ಆರನೆಯರು. ಬಿಗ್ ಬಾಸ್ ಒಟಿಟಿಯ ಕಳೆದ ಬಾರಿಯ ಸೀಸನ್​ನಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿದ್ದಾರೆ. ರೇವ್ ಪಾರ್ಟಿಗಳಲ್ಲಿ ಎಲ್ವಿಶ್ ಯಾದವ್ ಹಾವುಗಳನ್ನು ಬಳಸಿ ವಿಡಿಯೋ ಶೂಟ್ ಕೂಡ ಮಾಡಿದ್ದರೆನ್ನಲಾಗಿದೆ. ಖ್ಯಾತ ಯೂಟ್ಯೂಬರ್ ಕೂಡ ಆಗಿರುವ ಎಲ್ವಿಶ್ ತನ್ನ ಚಾನಲ್​ನ ಹಲವು ವಿಡಿಯೋಗಳಿಗೆ ಹಾವನ್ನು ಬಳಸಿಕೊಂಡಿದ್ದಾರೆ.

ಹಾವಿನ ವಿಷ ಸರಬರಾಜು ಮಾಡುವ ಗ್ಯಾಂಗ್ ಅನ್ನು ಹಿಡಿಯಲು ಕಾರಣರಾದ ಮೇನಕಾ ಗಾಂಧಿ

ಎಲ್ವಿಶ್ ಯಾದವ್ ಅವರ ಯೂಟ್ಯೂಬ್ ವಿಡಿಯೋಗಳಲ್ಲಿ ಹಾವುಗಳನ್ನು ಬಳಸಿಕೊಂಡಿರುವುದು ಅವರನ್ನು ಕಾನೂನಿನ ಕುಣಿಕೆಗೆ ಸಿಕ್ಕಿಸಲು ಕಾರಣವಾಗಿದೆ. ಮನೇಕಾ ಗಾಂಧಿ ನೇತೃತ್ವದ ಪೀಪಲ್ ಫಾರ್ ಅನಿಮಲ್ಸ್ ಎಂಬ ಪ್ರಾಣಿ ಹಕ್ಕು ಗುಂಪು ಅನಾಮಧೇಯರಾಗಿ ಎಲ್ವಿಶ್ ಯಾದವ್ ಅವರಿಗೆ ಕರೆ ಮಾಡಿ ತಮಗೆ ಹಾವುಗಳು ಹಾಗೂ ಅವುಗಳ ವಿಷ ಬೇಕು ಎಂದು ಫೋನ್​ನಲ್ಲಿ ಕೇಳಿದ್ದಾರೆ. ಆಗ ಎಲ್ವಿಶ್ ಯಾದವ್ ಅವರು ರಾಹುಲ್ ಎಂಬಾತನ ನಂಬರ್ ಕೊಟ್ಟಿದ್ದಾರೆ. ನೋಯ್ಡಾ ಸೆಕ್ಟರ್ 51ರಲ್ಲಿನ ಬ್ಯಾಂಕ್ವೆಟ್​ವೊಂದಕ್ಕೆ ಬರಲು ರಾಹುಲ್ ತಿಳಿಸಿದ್ದಾನೆ.

ಇದನ್ನೂ ಓದಿ: ಸಂದೇಶ್​ಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ, ಷಹಜಹಾನ್ ಶೇಖ್​ ಸಹೋದರ ಸೇರಿ ಮೂವರ ಬಂಧನ

ಪ್ರಾಣಿ ಹಕ್ಕು ತಂಡದವರು ಆ ಬಾಂಕ್ವೆಟ್ ಹಾಲ್​ಗೆ ಹೋದಾಗ ಅಲ್ಲಿ ನಾಲ್ವರು ಹಾವಾಡಿಗರು, ಒಂಬತ್ತು ಹಾವು ಮತ್ತು 20ಎಂಲ್ ಹಾವಿನ ವಿಷ ಸಂಗ್ರಹ ಇದ್ದದ್ದು ತಿಳಿಯುತ್ತದೆ. ಕೂಡಲೇ ಈ ತಂಡದ ಸದಸ್ಯರು ನೋಯ್ಡಾ ಪೊಲೀಸ್​ನ ತಂಡಕ್ಕೆ ಕರೆ ಮಾಡಿ ತಿಳಿಸುತ್ತದೆ. ತತ್​ಕ್ಷಣವೇ ಬರುವ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ, ಐವರನ್ನು ಬಂಧಿಸುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Sun, 17 March 24

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ