AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸಂಸದೆಯ ಚೈನ್ ದೋಚಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್​, ಸರವೂ ಸಿಕ್ತು

ಬೆಳಗ್ಗೆ ಜಾಗಿಂಗ್​​ಗೆಂದು ತೆರಳಿದ್ದ ಕಾಂಗ್ರೆಸ್ ಸಂಸದೆ ಸುಧಾರಿಂದ ಸರ ದೋಚಿ ಪರಾರಿಯಾಗಿದ್ದ ಕಳ್ಳ ಸಿಕ್ಕಿಬಿದ್ದಿದ್ದಾನೆ, ಸರವೂ ವಾಪಸ್ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 4 ರಂದು ದೆಹಲಿಯ ಹೆಚ್ಚಿನ ಭದ್ರತೆಯ ಚಾಣಕ್ಯಪುರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚೈನ್ ಕಸಿದುಕೊಂಡು ಪರಾರಿಯಾಗಿದ್ದ, ಈ ಘಟನೆಯಲ್ಲಿ ಸುಧಾ ಅವರು ಗಾಯಗೊಂಡಿದ್ದರು, ಅವರ ಬಟ್ಟೆಯೂ ಕೂಡ ಹರಿದಿತ್ತು.

ಕಾಂಗ್ರೆಸ್ ಸಂಸದೆಯ ಚೈನ್ ದೋಚಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್​, ಸರವೂ ಸಿಕ್ತು
ಸುಧಾ
ನಯನಾ ರಾಜೀವ್
|

Updated on: Aug 06, 2025 | 12:45 PM

Share

ನವದೆಹಲಿ, ಆಗಸ್ಟ್ 06: ಬೆಳಗ್ಗೆ ಜಾಗಿಂಗ್​​ಗೆಂದು ತೆರಳಿದ್ದ ಕಾಂಗ್ರೆಸ್ ಸಂಸದೆ ಸುಧಾರಿಂದ ಸರ ದೋಚಿ ಪರಾರಿಯಾಗಿದ್ದ ಕಳ್ಳ(Thief) ಸಿಕ್ಕಿಬಿದ್ದಿದ್ದಾನೆ, ಸರವೂ ವಾಪಸ್ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 4 ರಂದು ದೆಹಲಿಯ ಹೆಚ್ಚಿನ ಭದ್ರತೆಯ ಚಾಣಕ್ಯಪುರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚೈನ್ ಕಸಿದುಕೊಂಡು ಪರಾರಿಯಾಗಿದ್ದ, ಈ ಘಟನೆಯಲ್ಲಿ ಸುಧಾ ಅವರು ಗಾಯಗೊಂಡಿದ್ದರು, ಅವರ ಬಟ್ಟೆಯೂ ಕೂಡ ಹರಿದಿತ್ತು.

ದೆಹಲಿ ಪೊಲೀಸರ ಹಲವಾರು ತಂಡಗಳು ತನಿಖೆಯಲ್ಲಿ ತೊಡಗಿದ್ದವು ಮತ್ತು ಆರೋಪಿಯನ್ನು ಬಂಧಿಸಲಾಯಿತು, ಅವನು ಓಖ್ಲಾ ನಿವಾಸಿ ಎಂದು ತಿಳಿದುಬಂದಿದೆ. ಬೆಳಗ್ಗೆ 6.15ರ ಸುಮಾರಿಗೆ ಘಟನೆ ನಡೆದಿದೆ. ಆ ವ್ಯಕ್ತಿ ಹೆಲ್ಮೆಟ್​ ಧರಿಸಿದ್ದ, ನಿಧಾನವಾಗಿ ತನ್ನ ಎದುರು ಬರುತ್ತಿದ್ದ ಹಾಗಾಗಿ ಅನುಮಾನ ಬಂದಿರಲಿಲ್ಲ. ಅವನು ಹತ್ತಿರ ಬಂದ ತಕ್ಷಣ ಸರ ಕಸಿದುಕೊಂಡು ಓಡಿಹೋದ. ಘಟನೆಯಲ್ಲಿ ಸುಧಾ ಅವರ ಕುತ್ತಿಗೆಯಲ್ಲಿ ಗಾಯಗಳಾಗಿವೆ ಮತ್ತು ಅವರ ಚೂಡಿದಾರ್ ಕೂಡ ಹರಿದಿದೆ.

2024ರ ತಮ್ಮ ಅಫಿಡವಿಟ್​ನಲ್ಲಿ ಸುಧಾ ತಮ್ಮ ಬಳಿ 480 ಗ್ರಾಂ ಚಿನ್ನವಿದೆ ಎಂದು ಹೇಳಿಕೊಂಡಿದ್ದರು. ಅದರ ಮೌಲ್ಯ 27 ಲಕ್ಷ ರೂ. ಎಂದು ಹೇಳಿದ್ದರು. ಅವರ ಬಳಿ 37 ಲಕ್ಷಕ್ಕೂ ಹೆಚ್ಚು ಆಸ್ತಿ ಇದೆ. ಅಲ್ಲದೆ, ಅವರ ವಿರುದ್ಧ 10 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ ಅಂತಿಮಗೊಳಿಸಲಾದ ಎಲ್ಲಾ ಪ್ರಕರಣಗಳಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾಗಿಲ್ಲ ಎಂದು ಅವರು ಬಹಿರಂಗಪಡಿಸಿದ್ದರು.

ಮತ್ತಷ್ಟು ಓದಿ: ದೆಹಲಿ: ಜಾಗಿಂಗ್​​ಗೆ ಹೋಗಿದ್ದ ಕಾಂಗ್ರೆಸ್ ಸಂಸದೆಯ ಸರ ದೋಚಿ ಪರಾರಿಯಾದ ಕಳ್ಳ

ಸಂಸದೆ ಸುಧಾ ಈ ಕುರಿತು ಮಾತನಾಡಿ, ಈ ಘಟನೆ ತುಂಬಾ ಆಘಾತಕಾರಿಯಾಗಿದೆ. ದೇಶದ ರಾಜಧಾನಿಯ ಈ ಅತ್ಯಂತ ಸುರಕ್ಷಿತ ಪ್ರದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲದಿದ್ದರೆ,ದೇಶದ ಉಳಿದ ಭಾಗಗಳಲ್ಲಿ ನಾವು ಸುರಕ್ಷತೆಯನ್ನು ಎಲ್ಲಿ ನಿರೀಕ್ಷಿಸಬಹುದು ಎಂದು ಪ್ರಶ್ನಿಸಿದ್ದಾರೆ. ಈ ಘಟನೆಯ ಬಗ್ಗೆ ಸುಧಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರನ್ನು ಸಂಪರ್ಕಿಸಿ ಅಪರಾಧಿಯನ್ನು ಶೀಘ್ರದಲ್ಲೇ ಬಂಧಿಸುವಂತೆ ಮನವಿ ಮಾಡಿದ್ದರು.

ತಮಿಳುನಾಡಿನ ಮೈಲಾಡುತುರೈ ಕ್ಷೇತ್ರದ ಸಂಸದೆ ಸುಧಾ, ಸಂಸದರಿಗೆ ಅಧಿಕೃತ ವಸತಿ ಸೌಕರ್ಯ ಇನ್ನೂ ಹಂಚಿಕೆಯಾಗದ ಕಾರಣ ಕಳೆದ ಒಂದು ವರ್ಷದಿಂದ ತಮಿಳುನಾಡು ಹೌಸ್‌ನಲ್ಲಿ ವಾಸಿಸುತ್ತಿದ್ದಾರೆ. ಈ ಘಟನೆ ವಿವಿಐಪಿ ಚಾಣಕ್ಯಪುರಿ ಪ್ರದೇಶದಲ್ಲಿ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!