AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸಂಸದೆಯ ಚೈನ್ ದೋಚಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್​, ಸರವೂ ಸಿಕ್ತು

ಬೆಳಗ್ಗೆ ಜಾಗಿಂಗ್​​ಗೆಂದು ತೆರಳಿದ್ದ ಕಾಂಗ್ರೆಸ್ ಸಂಸದೆ ಸುಧಾರಿಂದ ಸರ ದೋಚಿ ಪರಾರಿಯಾಗಿದ್ದ ಕಳ್ಳ ಸಿಕ್ಕಿಬಿದ್ದಿದ್ದಾನೆ, ಸರವೂ ವಾಪಸ್ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 4 ರಂದು ದೆಹಲಿಯ ಹೆಚ್ಚಿನ ಭದ್ರತೆಯ ಚಾಣಕ್ಯಪುರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚೈನ್ ಕಸಿದುಕೊಂಡು ಪರಾರಿಯಾಗಿದ್ದ, ಈ ಘಟನೆಯಲ್ಲಿ ಸುಧಾ ಅವರು ಗಾಯಗೊಂಡಿದ್ದರು, ಅವರ ಬಟ್ಟೆಯೂ ಕೂಡ ಹರಿದಿತ್ತು.

ಕಾಂಗ್ರೆಸ್ ಸಂಸದೆಯ ಚೈನ್ ದೋಚಿ ಪರಾರಿಯಾಗಿದ್ದ ಕಳ್ಳ ಅರೆಸ್ಟ್​, ಸರವೂ ಸಿಕ್ತು
ಸುಧಾ
ನಯನಾ ರಾಜೀವ್
|

Updated on: Aug 06, 2025 | 12:45 PM

Share

ನವದೆಹಲಿ, ಆಗಸ್ಟ್ 06: ಬೆಳಗ್ಗೆ ಜಾಗಿಂಗ್​​ಗೆಂದು ತೆರಳಿದ್ದ ಕಾಂಗ್ರೆಸ್ ಸಂಸದೆ ಸುಧಾರಿಂದ ಸರ ದೋಚಿ ಪರಾರಿಯಾಗಿದ್ದ ಕಳ್ಳ(Thief) ಸಿಕ್ಕಿಬಿದ್ದಿದ್ದಾನೆ, ಸರವೂ ವಾಪಸ್ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 4 ರಂದು ದೆಹಲಿಯ ಹೆಚ್ಚಿನ ಭದ್ರತೆಯ ಚಾಣಕ್ಯಪುರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚೈನ್ ಕಸಿದುಕೊಂಡು ಪರಾರಿಯಾಗಿದ್ದ, ಈ ಘಟನೆಯಲ್ಲಿ ಸುಧಾ ಅವರು ಗಾಯಗೊಂಡಿದ್ದರು, ಅವರ ಬಟ್ಟೆಯೂ ಕೂಡ ಹರಿದಿತ್ತು.

ದೆಹಲಿ ಪೊಲೀಸರ ಹಲವಾರು ತಂಡಗಳು ತನಿಖೆಯಲ್ಲಿ ತೊಡಗಿದ್ದವು ಮತ್ತು ಆರೋಪಿಯನ್ನು ಬಂಧಿಸಲಾಯಿತು, ಅವನು ಓಖ್ಲಾ ನಿವಾಸಿ ಎಂದು ತಿಳಿದುಬಂದಿದೆ. ಬೆಳಗ್ಗೆ 6.15ರ ಸುಮಾರಿಗೆ ಘಟನೆ ನಡೆದಿದೆ. ಆ ವ್ಯಕ್ತಿ ಹೆಲ್ಮೆಟ್​ ಧರಿಸಿದ್ದ, ನಿಧಾನವಾಗಿ ತನ್ನ ಎದುರು ಬರುತ್ತಿದ್ದ ಹಾಗಾಗಿ ಅನುಮಾನ ಬಂದಿರಲಿಲ್ಲ. ಅವನು ಹತ್ತಿರ ಬಂದ ತಕ್ಷಣ ಸರ ಕಸಿದುಕೊಂಡು ಓಡಿಹೋದ. ಘಟನೆಯಲ್ಲಿ ಸುಧಾ ಅವರ ಕುತ್ತಿಗೆಯಲ್ಲಿ ಗಾಯಗಳಾಗಿವೆ ಮತ್ತು ಅವರ ಚೂಡಿದಾರ್ ಕೂಡ ಹರಿದಿದೆ.

2024ರ ತಮ್ಮ ಅಫಿಡವಿಟ್​ನಲ್ಲಿ ಸುಧಾ ತಮ್ಮ ಬಳಿ 480 ಗ್ರಾಂ ಚಿನ್ನವಿದೆ ಎಂದು ಹೇಳಿಕೊಂಡಿದ್ದರು. ಅದರ ಮೌಲ್ಯ 27 ಲಕ್ಷ ರೂ. ಎಂದು ಹೇಳಿದ್ದರು. ಅವರ ಬಳಿ 37 ಲಕ್ಷಕ್ಕೂ ಹೆಚ್ಚು ಆಸ್ತಿ ಇದೆ. ಅಲ್ಲದೆ, ಅವರ ವಿರುದ್ಧ 10 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ ಅಂತಿಮಗೊಳಿಸಲಾದ ಎಲ್ಲಾ ಪ್ರಕರಣಗಳಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾಗಿಲ್ಲ ಎಂದು ಅವರು ಬಹಿರಂಗಪಡಿಸಿದ್ದರು.

ಮತ್ತಷ್ಟು ಓದಿ: ದೆಹಲಿ: ಜಾಗಿಂಗ್​​ಗೆ ಹೋಗಿದ್ದ ಕಾಂಗ್ರೆಸ್ ಸಂಸದೆಯ ಸರ ದೋಚಿ ಪರಾರಿಯಾದ ಕಳ್ಳ

ಸಂಸದೆ ಸುಧಾ ಈ ಕುರಿತು ಮಾತನಾಡಿ, ಈ ಘಟನೆ ತುಂಬಾ ಆಘಾತಕಾರಿಯಾಗಿದೆ. ದೇಶದ ರಾಜಧಾನಿಯ ಈ ಅತ್ಯಂತ ಸುರಕ್ಷಿತ ಪ್ರದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲದಿದ್ದರೆ,ದೇಶದ ಉಳಿದ ಭಾಗಗಳಲ್ಲಿ ನಾವು ಸುರಕ್ಷತೆಯನ್ನು ಎಲ್ಲಿ ನಿರೀಕ್ಷಿಸಬಹುದು ಎಂದು ಪ್ರಶ್ನಿಸಿದ್ದಾರೆ. ಈ ಘಟನೆಯ ಬಗ್ಗೆ ಸುಧಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರನ್ನು ಸಂಪರ್ಕಿಸಿ ಅಪರಾಧಿಯನ್ನು ಶೀಘ್ರದಲ್ಲೇ ಬಂಧಿಸುವಂತೆ ಮನವಿ ಮಾಡಿದ್ದರು.

ತಮಿಳುನಾಡಿನ ಮೈಲಾಡುತುರೈ ಕ್ಷೇತ್ರದ ಸಂಸದೆ ಸುಧಾ, ಸಂಸದರಿಗೆ ಅಧಿಕೃತ ವಸತಿ ಸೌಕರ್ಯ ಇನ್ನೂ ಹಂಚಿಕೆಯಾಗದ ಕಾರಣ ಕಳೆದ ಒಂದು ವರ್ಷದಿಂದ ತಮಿಳುನಾಡು ಹೌಸ್‌ನಲ್ಲಿ ವಾಸಿಸುತ್ತಿದ್ದಾರೆ. ಈ ಘಟನೆ ವಿವಿಐಪಿ ಚಾಣಕ್ಯಪುರಿ ಪ್ರದೇಶದಲ್ಲಿ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ