AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಪಾತದಿಂದ ಉತ್ತರಾಖಂಡದ 77 ಗ್ರಾಮಗಳಿಗೆ ಸಂಕಷ್ಟ, ರಸ್ತೆಗಳು ಬಂದ್, ಪ್ರವಾಸಿಗರು ಕಂಗಾಲು

ಉತ್ತರಾಖಂಡದ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಇಲ್ಲಿನ ಪರ್ವತ ಜಿಲ್ಲೆಗಳಲ್ಲಿ ಮಳೆ ಮತ್ತು ಹಿಮಪಾತವು ಚಳಿಯನ್ನು ಹೆಚ್ಚಿಸಿದೆ. ಉತ್ತರಾಖಂಡದ ತೆಹ್ರಿ ಜಿಲ್ಲೆಯ ಧನೌಲ್ತಿಯಲ್ಲಿ ಈ ಋತುವಿನ ಎರಡನೇ ಹಿಮಪಾತವಾಗಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ನೀಡಿದೆ. ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಾಗರೂಕರಾಗಿರಲು ಸೂಚಿಸಿದೆ.

ಹಿಮಪಾತದಿಂದ ಉತ್ತರಾಖಂಡದ 77 ಗ್ರಾಮಗಳಿಗೆ ಸಂಕಷ್ಟ, ರಸ್ತೆಗಳು ಬಂದ್, ಪ್ರವಾಸಿಗರು ಕಂಗಾಲು
Snowfall
ಸುಷ್ಮಾ ಚಕ್ರೆ
|

Updated on: Jan 29, 2026 | 5:39 PM

Share

ಡೆಹ್ರಾಡೂನ್, ಜನವರಿ 29: ಉತ್ತರಾಖಂಡದಲ್ಲಿ ಹಿಮಪಾತದ (Snowfall) ಪರಿಣಾಮದಿಂದ ಅನೇಕ ಪ್ರವಾಸಿಗರು ಮಧ್ಯದಲ್ಲೇ ಸಿಲುಕಿಕೊಂಡಿದ್ದಾರೆ. ಚಮೋಲಿಯಲ್ಲಿ 77 ಗ್ರಾಮಗಳು ಹಿಮಪಾತದಿಂದ ತೊಂದರೆಗೆ ಸಿಲುಕಿವೆ, ರಸ್ತೆಗಳ ಸಂಪರ್ಕ ಸ್ಥಗಿತಗೊಂಡಿದೆ, ಪ್ರವಾಸಿಗರು ತಮ್ಮ ಊರನ್ನು ತಲುಪಿದರೆ ಸಾಕಪ್ಪ ಎಂದು ಚಡಪಡಿಸುತ್ತಿದ್ದಾರೆ. ಭಾರೀ ಹಿಮಪಾತವಾಗುತ್ತಿರುವುದರಿಂದ ಪ್ರವಾಸಿಗರು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.

ಕಳೆದ 4 ದಿನಗಳಿಂದ ಉತ್ತರಾಖಂಡದಲ್ಲಿ ಹವಾಮಾನ ಅಸ್ಥಿರವಾಗಿದ್ದು, ತಡರಾತ್ರಿಯ ಮಳೆ, ಆಲಿಕಲ್ಲು ಮಳೆ ಮತ್ತು ಭಾರೀ ಹಿಮಪಾತವು ಹಲವಾರು ಜಿಲ್ಲೆಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅವುಗಳಲ್ಲಿ ಚಮೋಲಿ ಅತ್ಯಂತ ಹೆಚ್ಚು ಪರಿಣಾಮ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ಒಂದಾಗಿದೆ. ಚಮೋಲಿಯ 77ಕ್ಕೂ ಹೆಚ್ಚು ಗ್ರಾಮಗಳು ಹಿಮದಿಂದ ಆವೃತವಾಗಿವೆ. ಜ್ಯೋತಿರ್ಮಠ-ಮಲಾರಿ ಹೆದ್ದಾರಿ ಸೇರಿದಂತೆ 7 ಪ್ರಮುಖ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಇದನ್ನೂ ಓದಿ: Video: ಜಮ್ಮು ಮತ್ತು ಕಾಶ್ಮೀರದ ರೆಸಾರ್ಟ್​ ಮೇಲೆ ಭಾರಿ ಹಿಮಪಾತ

ಉತ್ತರಕಾಶಿ ಜಿಲ್ಲೆಯಲ್ಲಿಯೂ ಹಿಮಪಾತವಾಗಿದೆ. ಯಮುನೋತ್ರಿ, ಗಂಗೋತ್ರಿ, ಹರ್ಸಿಲ್, ಮುಖ್ಬಾ, ಸುಖಿ ಟಾಪ್, ರಾಡಿ ಟಾಪ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗಿದೆ. ಇಲ್ಲಿ ಅಪಘಾತಗಳನ್ನು ತಪ್ಪಿಸಲು ಸಣ್ಣ ವಾಹನಗಳನ್ನು ನಿಷೇಧಿಸಲಾಗಿದೆ.

ಅನಗತ್ಯ ಪ್ರಯಾಣಗಳನ್ನು ಕೈಗೊಳ್ಳದಂತೆ ಅಧಿಕಾರಿಗಳು ಸ್ಥಳೀಯರು ಮತ್ತು ಪ್ರಯಾಣಿಕರನ್ನು ಒತ್ತಾಯಿಸಿದ್ದಾರೆ. ಪರಿಸ್ಥಿತಿಗಳಿಗೆ ಅನುಗುಣವಾಗಿ ಮಾರ್ಗಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಸಾಧ್ಯತೆ ಇರುವುದರಿಂದ ಅಗತ್ಯವಿದ್ದರೆ ಮಾತ್ರ ಪರ್ವತಗಳಿಗೆ ಪ್ರಯಾಣಿಸಲು ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ