AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್​ನಿಂದ ನಿರ್ವಹಿಸಲ್ಪಡುವ, ಉಗ್ರಸಂಘಟನೆಗೆ ಬೆಂಬಲ ಸೂಚಿಸುವ ಖಾತೆಗಳನ್ನು ನಿಷೇಧಿಸುವುದಾಗಿ ಫೇಸ್​ಬುಕ್​ ಘೋಷಣೆ

ನಾವೀಗ ನಮ್ಮ ಅಪಾಯಕಾರಿ ಸಂಸ್ಥೆ ನೀತಿಗಳಡಿ ತಾಲಿಬಾನ್​ನ್ನು ನಿಷೇಧಿಸುತ್ತಿದ್ದೇವೆ. ಅಂದರೆ, ತಾಲಿಬಾನ್​ ಮತ್ತು ಆ ಸಂಘಟನೆ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಫೇಸ್​ಬುಕ್​ ಖಾತೆಗಳನ್ನು ತೆಗೆದುಹಾಕುತ್ತೇವೆ ಎಂದು ಫೇಸ್​​ಬುಕ್​ ಹೇಳಿಕೊಂಡಿದೆ.

ತಾಲಿಬಾನ್​ನಿಂದ ನಿರ್ವಹಿಸಲ್ಪಡುವ, ಉಗ್ರಸಂಘಟನೆಗೆ ಬೆಂಬಲ ಸೂಚಿಸುವ ಖಾತೆಗಳನ್ನು ನಿಷೇಧಿಸುವುದಾಗಿ ಫೇಸ್​ಬುಕ್​ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 17, 2021 | 4:59 PM

Share

ಕಾಬೂಲ್​: ತಾಲಿಬಾನ್ (Taliban)​ಗೆ ಬೆಂಬಲ ಸೂಚಿಸಿ ಯಾವುದೇ ಪೋಸ್ಟ್​​ಗಳನ್ನು ಹಾಕುವುದನ್ನು ನಿಷೇಧಿಸುವುದಾಗಿ ಫೇಸ್​ಬುಕ್ (Facebook)​ ಹೇಳಿಕೊಂಡಿದೆ. ತಾಲಿಬಾನ್​ ಒಂದು ಉಗ್ರಸಂಘಟನೆಯಾಗಿದ್ದು, ಅದನ್ನು ನಾವು ನಿಷೇಧಿಸುತ್ತೇವೆ. ಹಾಗೇ, ತಾಲಿಬಾನ್​ಗೆ ಬೆಂಬಲ ಸೂಚಿಸಿ ಪೋಸ್ಟ್​​ಗಳನ್ನು ಹಾಕುವವರನ್ನು, ಬರಹಗಳನ್ನು ಬರೆಯುವವರನ್ನೂ ನಿಷೇಧಿಸುತ್ತೇವೆ ಎಂದು ಫೇಸ್​ಬುಕ್​ ಹೇಳಿಕೊಂಡಿದೆ. ಇನ್ನು ಅಫ್ಘಾನ್​​ನಲ್ಲಿ ತಜ್ಞರ ತಂಡವೊಂದು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ತಾಲಿಬಾನ್​ ಉಗ್ರಗುಂಪಿಗೆ ಸಂಬಂಧಪಟ್ಟ ಬರಹಗಳು, ಪೋಸ್ಟ್​ಗಳನ್ನು ಫೇಸ್​​ಬುಕ್​​ನಿಂದ ತೆಗೆದುಹಾಕಲೆಂದೇ ಆ ತಂಡವನ್ನು ನೇಮಕ ಮಾಡಲಾಗಿದೆ ಎಂದೂ ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್​ಬುಕ್​ ಹೇಳಿಕೊಂಡಿದೆ.

ಕಳೆದ ಹಲವು ವರ್ಷಗಳಿಂದಲೂ ತಾಲಿಬಾನ್​ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಸಂದೇಶವನ್ನು ರವಾನಿಸುತ್ತಿದೆ. ಆದರೆ ಯುಎಸ್​ ಕಾನೂನಿನಡಿ ತಾಲಿಬಾನ್​​ನ್ನು ಉಗ್ರರ ಸಂಘಟನೆ ಎಂದೇ ಪರಿಗಣಿಸಲಾಗಿದೆ. ನಾವೀಗ ನಮ್ಮ ಅಪಾಯಕಾರಿ ಸಂಸ್ಥೆ ನೀತಿಗಳಡಿ ತಾಲಿಬಾನ್​ನ್ನು ನಿಷೇಧಿಸುತ್ತಿದ್ದೇವೆ. ಅಂದರೆ, ತಾಲಿಬಾನ್​ ಮತ್ತು ಆ ಸಂಘಟನೆ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಫೇಸ್​ಬುಕ್​ ಖಾತೆಗಳನ್ನು ತೆಗೆದುಹಾಕುತ್ತೇವೆ. ಇನ್ನು ತಾಲಿಬಾನ್​​ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುವವರ, ಬೆಂಬಲ ಸೂಚಿಸುವವರ ಹಾಗೂ ಅದಕ್ಕೆ ಪ್ರಾತಿನಿಧ್ಯ ನೀಡುವವರ ಖಾತೆಗಳನ್ನೂ ನಿಷೇಧಿಸುತ್ತೇವೆ ಎಂದು ಫೇಸ್​​ಬುಕ್​ ವಕ್ತಾರರೊಬ್ಬರು ಅಂತಾರಾಷ್ಟ್ರೀಯ ಮಾಧ್ಯಮಕ್ಕೆ ಹೇಳಿದ್ದಾರೆ.

ಇದರರ್ಥ ನಾವು ತಾಲಿಬಾನ್ ಅಥವಾ ಅವರ ಪರವಾಗಿ ನಿರ್ವಹಿಸುವ ಖಾತೆಗಳನ್ನು ತೆಗೆದುಹಾಕುತ್ತೇವೆ ಮತ್ತು ಅವರ ಪ್ರಶಂಸೆ, ಬೆಂಬಲ ಮತ್ತು ಪ್ರಾತಿನಿಧ್ಯವನ್ನು ನಿಷೇಧಿಸುತ್ತೇವೆ ಎಂದು ಫೇಸ್ಬುಕ್ ವಕ್ತಾರರು ಹೇಳಿದ್ದಾರೆ. ಇದೀಗ ಅಫ್ಘಾನ್​​ನಲ್ಲಿ ಫೇಸ್​ಬುಕ್​ ಸಂಸ್ಥೆಯಿಂದ ನೇಮಕ ಮಾಡಲಾದ ತಂಡದಲ್ಲಿ, ಸ್ಥಳೀಯ ಭಾಷಿಕರು, ಸ್ಥಳೀಯ ಸನ್ನಿವೇಶದ ಅರಿವು ಇರುವವರೇ ಇದ್ದಾರೆ ಎಂದೂ ಅವರು ತಿಳಿಸಿದ್ದಾರೆ. ನಮ್ಮ ಈ ನಿಷೇಧ ನೀತಿ ವಾಟ್ಸ್​ಆ್ಯಪ್​, ಇನ್​ಸ್ಟಾಗ್ರಾಂನಲ್ಲೂ ಅನ್ವಯ ಆಗಲಿದೆ ಎಂದು ಸ್ಪಷ್ಟಪಡಿಸಿದೆ. ಹಾಗೇ, ನಾವೂ ಕೂಡ ಹಿಂಸಾಚಾರವನ್ನು ಉತ್ತೇಜಿಸುವುದಿಲ್ಲ ಎಂದು ಟ್ವಿಟರ್​ ಹೇಳಿಕೊಂಡಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಘಟನೆಗಳಿಗೆ ಮಾನವೀಯತೆಯಿಂದ ನಾವು ಪ್ರತಿಕ್ರಿಯಿಸಬೇಕಿದೆ: ಹೆಚ್​ಡಿ ದೇವೇಗೌಡ ಟ್ವೀಟ್

ಕೆಲಸಕ್ಕೆ ಹಿಂದಿರುಗುವಂತೆ ಅಫ್ಘಾನ್​ ಸರ್ಕಾರಿ ನೌಕರರಿಗೆ ಕರೆಕೊಟ್ಟ ತಾಲಿಬಾನ್​ ಉಗ್ರರು; ಮಹಿಳೆಯರಿಗೂ ಆಹ್ವಾನ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ