AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಟ್ವೀಟ್​ಗೆ ಆಕ್ಷೇಪಾರ್ಹ ಪ್ರತಿಕ್ರಿಯೆ; ಕಂಗನಾ ಟ್ವೀಟ್ ಡಿಲೀಟ್ ಮಾಡಿದ ಟ್ವಿಟರ್

ಕ್ರಿಕೆಟಿಗ ರೋಹಿತ್ ಶರ್ಮಾ ಅವರ ಟ್ವೀಟ್​ಗೆ ದೋಭಿ ಕಾ ಕುತ್ತಾ ಎಂಬ ಪದ ಬಳಸಿ ಪ್ರತಿಕ್ರಿಯಿಸಿದ್ದಕ್ಕಾಗಿ ಕಂಗನಾ ರನೌತ್ ಅವರ ಟ್ವೀಟ್​ನ್ನು ಟ್ವಿಟರ್ ಸಂಸ್ಥೆ ಡಿಲೀಟ್ ಮಾಡಿದೆ.

ರೋಹಿತ್ ಶರ್ಮಾ ಟ್ವೀಟ್​ಗೆ ಆಕ್ಷೇಪಾರ್ಹ ಪ್ರತಿಕ್ರಿಯೆ; ಕಂಗನಾ ಟ್ವೀಟ್ ಡಿಲೀಟ್ ಮಾಡಿದ ಟ್ವಿಟರ್
ಕಂಗನಾ ರನೌತ್- ರೋಹಿತ್ ಶರ್ಮಾ
ರಶ್ಮಿ ಕಲ್ಲಕಟ್ಟ
|

Updated on: Feb 04, 2021 | 5:30 PM

Share

ನವದೆಹಲಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳ ವಿರುದ್ಧ ಟ್ವೀಟ್ ಪ್ರಹಾರ ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರ ಎರಡು ಟ್ವೀಟ್ ಗಳನ್ನು ಟ್ವಿಟರ್ ಸಂಸ್ಥೆ ಡಿಲೀಟ್ ಮಾಡಿದೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಿರತರಾಗಿರುವ ರೈತರ ಬಗ್ಗೆ ನಾವು ಯಾಕೆ ಚರ್ಚಿಸುತ್ತಿಲ್ಲ ಎಂದು ಅಮೆರಿಕದ ಪಾಪ್ ತಾರೆ ರಿಹಾನ್ನಾ ಟ್ವೀಟ್ ಮಾಡಿದ್ದರು. ರಿಹಾನ್ನಾ ಟ್ವೀಟ್ ಬೆನ್ನಲ್ಲೇ ಸ್ವೀಡನ್ ನ ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್, ಮಾಜಿ ನೀಲಿಚಿತ್ರ ತಾರೆ ಮಿಯಾ ಖಲೀಫಾ ಕೂಡಾ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು.

ವಿದೇಶಿ ಸೆಲೆಬ್ರಿಟಿಗಳ ಟ್ವೀಟ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಪಂಜಾಬಿ ಗಾಯಕ, ನಟ ದಿಲ್ಜಿತ್ ದೊಸಾಂಜ್ ರಿಹಾನ್ನಾ ಅವರಿಗೆ ‘ರಿರಿ’ ಹಾಡನ್ನು ಅರ್ಪಿಸಿರುವುದಾಗಿ ಟ್ವೀಟಿಸಿದ್ದರು. ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ ಕಂಗನಾ, ದಿಲ್ಜಿತ್​ರನ್ನು ಖಾಲಿಸ್ತಾನಿ ಎಂದು ಕರೆದಿದ್ದರು.

ರೋಹಿತ್ ಟ್ವೀಟ್​ಗೆ ಕಂಗನಾ ಪ್ರತಿಕ್ರಿಯೆ ಡಿಲೀಟ್ ರಿಹಾನ್ನಾ ಟ್ವೀಟ್ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯೊಂದನ್ನು ಹೊರಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನ ಸೃಷ್ಟಿಸುವ ಹ್ಯಾಷ್​ಟ್ಯಾಗ್, ವಿಷಯಗಳ ನಿಜ ಸಂಗತಿಯನ್ನು ಅರಿತು ಪ್ರತಿಕ್ರಿಯೆ ನೀಡಿ ಎಂದು ಹೇಳಿತ್ತು. ಈ ಪ್ರಕಟಣೆಯೊಂದಿಗೆ #IndiaTogether #IndiaAgainstPropaganda ಎಂಬ ಹ್ಯಾಷ್​ಟ್ಯಾಗ್ ಬಳಸಿತ್ತು. ಇದಕ್ಕೆ ಬೆಂಬಲ ಸೂಚಿಸಿ ಹಲವಾರು ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು. ಸಚಿನ್ ತೆಂಡೂಲ್ಕರ್, ಸುರೇಶ್ ರೈನಾ, ಅನಿಲ್ ಕುಂಬ್ಳೆ, ರೋಹಿತ್ ಶರ್ಮಾ ಮೊದಲಾದವರು ದೇಶದ ಒಗ್ಗಟಿನ ಬಗ್ಗೆ ಟ್ವೀಟ್ ಮಾಡಿದ್ದರು. ಈ ಪೈಕಿ ರೋಹಿತ್ ಶರ್ಮಾ ಮಾಡಿದ ಟ್ವೀಟ್​ಗೆ ಕಂಗನಾ ಮಾಡಿದ ಪ್ರತಿಕ್ರಿಯೆಯನ್ನು ಟ್ವಿಟರ್ ಸಂಸ್ಥೆ ಡಿಲೀಟ್ ಮಾಡಿದೆ.

ಭಾರತ ಸದಾ ಶಕ್ತವಾಗಿದ್ದು, ಸಮಸ್ಯೆಯನ್ನು ಪರಿಹರಿಸಲು ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವುದು ಈ ಹೊತ್ತಿನ ತುರ್ತು. ನಮ್ಮ ರೈತರು ದೇಶದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಒಗ್ಗಟ್ಟಾಗಿ ನಿಂತು ಸಮಸ್ಯೆಯನ್ನು ಪರಿಹರಿಸಲು ಎಲ್ಲರೂ ಅವರವರ ಪಾತ್ರ ನಿಭಾಯಿಸಬೇಕಾಗುತ್ತದೆ ಎಂದು ಹಿಟ್​ಮ್ಯಾನ್ ರೋಹಿತ್ ಶರ್ಮಾ ಟ್ವೀಟ್ ಮಾಡಿದ್ದರು.

ರೋಹಿತ್ ಶರ್ಮಾ ಟ್ವೀಟ್ ಹೀಗಿತ್ತು

ಇದಕ್ಕೆ ಪ್ರತಿಕ್ರಿಯಿಸಿದ ಕಂಗನಾ, ಈ ಎಲ್ಲ ಕ್ರಿಕೆಟಿಗರು ‘ದೋಭಿ ಕಾ ಕುತ್ತಾ ನಾ ಘರ್ ಕಾ ನಾ ಘಾಟ್ ಕಾ’ ಎಂಬಂತೆ ಯಾಕೆ ವರ್ತಿಸುತ್ತಿದ್ದಾರೆ? ಕೃಷಿ ಕಾನೂನು ಕ್ರಾಂತಿಕಾರಿ ಮತ್ತು ರೈತರಿಗೆ ಸಹಕಾರಿ ಆಗಿರುವಾಗ ರೈತರು ಪ್ರತಿಭಟನೆ ನಡೆಸುತ್ತಿರುವುದೇಕೆ. ಈ ರೀತಿ ಗಲಭೆ ಮಾಡುವವರು ಭಯೋತ್ಪಾದಕರು.. ಅದನ್ನು ಹೇಳಲು ಭಯವಾಗುತ್ತಿದೆಯೇ? ಎಂದಿದ್ದರು. ದೋಭಿ ಕಾ ಕುತ್ತಾ (ಅಗಸನ ನಾಯಿ) ಎಂಬ ಪದ ಬಳಸಿದ್ದಕ್ಕಾಗಿ ಕಂಗನಾಳ ಟ್ವೀಟ್​ನ್ನು ಟ್ವಿಟರ್ ಡಿಲೀಟ್ ಮಾಡಿದೆ.

ಡಿಲೀಟ್ ಮಾಡಿದ ಟ್ವೀಟ್

ಅದೇ ವೇಳೆ ಬಾಲಿವುಡ್ ನಟಿ ತಾಪ್ಸಿ ಪನ್ನು ಬಗ್ಗೆ ಕಂಗನಾ ಮಾಡಿದ್ದ ಟ್ವೀಟ್ ಅನ್ನೂ ಕೂಡಾ ಟ್ವಿಟರ್ ಡಿಲೀಟ್ ಮಾಡಿದೆ. ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ನಾವು ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಟ್ವಿಟರ್ ಸಂಸ್ಥೆ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು