AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಆಮ್ಟೆ ಮೊಮ್ಮಗಳು ಡಾ. ಶೀತಲ್​ ಆತ್ಮಹತ್ಯೆ; ಕಳೆದ ವಾರದ ಫೇಸ್​ಬುಕ್ ಪೋಸ್ಟ್​, ಮುಂಜಾನೆಯ ಟ್ವೀಟ್​ ಏನು ಹೇಳತ್ತೆ?

ನಾಗಪುರ ಸರ್ಕಾರಿ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿದ ಶೀತಲ್​ ಆಮ್ಟೆ, ವೈದ್ಯಕೀಯ ಕೋರ್ಸ್​ ಮುಗಿದ ನಂತರ ಆನಂದವನಕ್ಕೆ ಆಗಮಿಸಿದ್ದರು. ಬಾಬಾ ಆಮ್ಟೆ ಸ್ಥಾಪಿಸಿದ ಮಹಾರೋಗಿ ಸೇವಾ ಸಮಿತಿಯ ಜವಾಬ್ದಾರಿ ವಹಿಸಿಕೊಂಡರು. ಸಮಾಜ ಸೇವೆಯನ್ನೇ ಮುಖ್ಯವನ್ನಾಗಿಸಿಕೊಂಡು ಸಾಗಿದರು.

ಬಾಬಾ ಆಮ್ಟೆ ಮೊಮ್ಮಗಳು ಡಾ. ಶೀತಲ್​ ಆತ್ಮಹತ್ಯೆ; ಕಳೆದ ವಾರದ ಫೇಸ್​ಬುಕ್ ಪೋಸ್ಟ್​, ಮುಂಜಾನೆಯ ಟ್ವೀಟ್​ ಏನು ಹೇಳತ್ತೆ?
ಡಾ. ಶೀತಲ್ ಆಮ್ಟೆ ಮತ್ತು ಅವರು ಮುಂಜಾನೆ ಮಾಡಿದ್ದ ಟ್ವೀಟ್ ಚಿತ್ರ
Lakshmi Hegde
|

Updated on:Nov 30, 2020 | 5:02 PM

Share

ಮುಂಬೈ: ಸಮಾಜ ಸೇವಕ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಬಾಬಾ ಆಮ್ಟೆ (ಮುರಳಿಧರ್​ ದೇವಿದಾಸ್ ಆಮ್ಟ್) ಮೊಮ್ಮಗಳು, ಖ್ಯಾತ ಸಾಮಾಜಿಕ ಕಾರ್ಯಕರ್ತೆ, ವೈದ್ಯೆ ಶೀತಲ್​ ಆಮ್ಟೆ ಕರಾಜಿಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಾಪುರ ಜಿಲ್ಲೆಯ ಆನಂದವನ್​​ದಲ್ಲಿ ಇರುವ ತಮ್ಮ ನಿವಾಸದಲ್ಲಿ ಇಂದು ವಿಷಪೂರಿತ ಇಂಜಕ್ಷನ್​ ಚುಚ್ಚಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಷವನ್ನು ಇಂಜೆಕ್ಟ್ ಮಾಡಿಕೊಂಡು ಅಸ್ವಸ್ಥರಾಗಿದ್ದ ಶೀತಲ್​ ಆಮ್ಟೆ ಅವರನ್ನು ವರೋರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರೂ ಕೂಡ ತಾತ ಬಾಬಾ ಆಮ್ಟೆಯವರಂತೆ ಸಮಾಜ ಸೇವೆಯಲ್ಲಿ ಸಕ್ರಿಯರಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಮಾಡಿದ್ದರು. ಕುಷ್ಠರೋಗಿಗಳ ಆರೈಕೆಗಾಗಿ ಆನಂದವನದಲ್ಲಿ ಸ್ಥಾಪಿಸಲಾಗಿರುವ ಮಹಾರೋಗಿ ಸೇವಾ ಸಮಿತಿಯ ಸಿಇಒ ಆಗಿದ್ದರು.

ನಾಗಪುರದ ಸರ್ಕಾರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿದ ಶೀತಲ್​ ಆಮ್ಟೆ, ವೈದ್ಯಕೀಯ ಕೋರ್ಸ್​ ಮುಗಿದ ನಂತರ ಆನಂದವನಕ್ಕೆ ಆಗಮಿಸಿದ್ದರು. ಬಾಬಾ ಆಮ್ಟೆ ಸ್ಥಾಪಿಸಿದ ಮಹಾರೋಗಿ ಸೇವಾ ಸಮಿತಿಯ ಜವಾಬ್ದಾರಿ ವಹಿಸಿಕೊಂಡರು. ಸಮಾಜ ಸೇವೆಯನ್ನೇ ಮುಖ್ಯವನ್ನಾಗಿಸಿಕೊಂಡು ಸಾಗಿದರು. 2016ರಲ್ಲಿ ವಿಶ್ವ ಆರ್ಥಿಕ ವೇದಿಕೆ ಡಾ. ಶೀತಲ್​ರನ್ನು ‘ಯಂಗ್ ಗ್ಲೋಬಲ್ ಲೀಡರ್’ ಆಗಿ ಆಯ್ಕೆ ಮಾಡಿತ್ತು.

‘ವಾರ್​ ಆ್ಯಂಡ್​ ಪೀಸ್​’ ಇಂದು ಮುಂಜಾನೆ 5.45ರ ಸಮಯದಲ್ಲಿ ಶೀತಲ್​ ಆಮ್ಟೆ ಮಾಡಿರುವ ಟ್ವೀಟ್​ ಇದೀಗ ಚರ್ಚೆಗೆ ಕಾರಣವಾಗಿದೆ. ಕ್ಯಾನ್​ವಾಸ್ ಪೇಂಟಿಂಗ್ ಫೋಟೋವನ್ನು ಪೋಸ್ಟ್ ಮಾಡಿ, ವಾರ್ ಆ್ಯಂಡ್ ಪೀಸ್​ (ಯುದ್ಧ ಮತ್ತು ಶಾಂತಿ) ಎಂದು ಕ್ಯಾಪ್ಷನ್ ಬರೆದಿದ್ದರು. ಅದಾದ ಕೆಲವೇ ಗಂಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಕ್ರಮ ಬಯಲಿಗೆ ಶೀತಲ್ ಆಮ್ಟೆ ಕಳೆದ ವಾರ ತಮ್ಮ ಫೇಸ್​​ಬುಕ್​ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿ, ಅದರಲ್ಲಿ ಮಹಾರೋಗಿ ಸೇವಾ ಸಮಿತಿಯಲ್ಲಿ ಕೆಲವು ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ್ದರು. ಆ ವಿಡಿಯೋವನ್ನು ಎರಡೇ ತಾಸಿನಲ್ಲಿ ಅಲ್ಲಿಂದ ತೆಗೆದುಹಾಕಿದ್ದರು.

ಬಾಬಾ ಆಮ್ಟೆ

ಇದನ್ನೂ ಓದಿ: ‘ಚಿನ್ನ’ ತಂದ ನೀವಾರ್​ ಚಂಡಮಾರುತ; ಸಮುದ್ರ ತೀರಕ್ಕೆ ಮೀನುಗಾರರು ದೌಡು

Published On - 4:58 pm, Mon, 30 November 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ