AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್​ ಪತ್ನಿ ನಿಗೂಢ ಸಾವು

ಹೈದರಾಬಾದ್: ಆತ ಬೆಂಗಳೂರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಕೆಲಸ, ಸಂಬಳ ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಲಾಕ್‌ಡೌನ್‌ನಿಂದಾಗಿ ವರ್ಕ್ ಫ್ರಮ್ ಹೋಮ್ ಅಂತಾ ಹೆಂಡತಿ ಜೊತೆ ಊರು ಸೇರಿದ್ದ. ಆದರೆ, ಅಲ್ಲಿ ಏನಾಯ್ತೋ ಏನೋ ಗೊತ್ತಿಲ್ಲ. ಇದೀಗ ಪತ್ನಿ ಸಾವಿನ ಮನೆ ಸೇರಿದ್ದಾಳೆ. ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದಳಾ? ಈಕೆ ಮೌನಿಕ. ವಯಸ್ಸು ಇನ್ನು 30ರ ಅಸುಪಾಸು. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೀರಂಕಿಲಾಕುವಿನ ನಿವಾಸಿ. ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜನಿಯರ್ ಆಗಿದ್ದ ಅನಿಲ್‌ ಎಂಬಾತನಿಗೆ […]

ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್​ ಪತ್ನಿ ನಿಗೂಢ ಸಾವು
ಸಾಧು ಶ್ರೀನಾಥ್​
| Edited By: |

Updated on: Sep 13, 2020 | 3:25 PM

Share

ಹೈದರಾಬಾದ್: ಆತ ಬೆಂಗಳೂರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಕೆಲಸ, ಸಂಬಳ ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಲಾಕ್‌ಡೌನ್‌ನಿಂದಾಗಿ ವರ್ಕ್ ಫ್ರಮ್ ಹೋಮ್ ಅಂತಾ ಹೆಂಡತಿ ಜೊತೆ ಊರು ಸೇರಿದ್ದ. ಆದರೆ, ಅಲ್ಲಿ ಏನಾಯ್ತೋ ಏನೋ ಗೊತ್ತಿಲ್ಲ. ಇದೀಗ ಪತ್ನಿ ಸಾವಿನ ಮನೆ ಸೇರಿದ್ದಾಳೆ.

ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದಳಾ? ಈಕೆ ಮೌನಿಕ. ವಯಸ್ಸು ಇನ್ನು 30ರ ಅಸುಪಾಸು. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೀರಂಕಿಲಾಕುವಿನ ನಿವಾಸಿ. ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜನಿಯರ್ ಆಗಿದ್ದ ಅನಿಲ್‌ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು.

ಇಬ್ಬರು ಸುಖವಾಗಿ ಜೀವನ ನಡೆಸುತ್ತಿದ್ರು. ಆದ್ರೆ ಕೊರೊನಾ ಹಾವಳಿಯಿಂದಾಗಿ ದಂಪತಿ ಬೆಂಗಳೂರು ಬಿಟ್ಟು ಸ್ವಗ್ರಾಮಕ್ಕೆ ತೆರಳಿದ್ದರು. ಲಾಕ್‌ಡೌನ್ ಆರಂಭದಿಂದಲೂ ಗಂಡ ಹೆಂಡತಿ ಅಲ್ಲೇ ವಾಸ ಮಾಡ್ತಾಯಿದ್ರು. ಅಲ್ಲೂ ಕೂಡ ಜೀವನ ಚೆನ್ನಾಗಿಯೇ ಇತ್ತು. ಆದ್ರೆ, ಪತಿ ಮನೆಯಲ್ಲಿ ಏನಾಯ್ತೋ ಏನೋ ಗೊತ್ತಿಲ್ಲ. ಇದೀಗ ಮೌನಿಕ ಶವವಾಗಿ ಪತ್ತೆಯಾಗಿದ್ದಾಳೆ.

ಪೊಲೀಸರ ವಿರುದ್ಧ ಸಿಡಿದೆದ್ದ ಸಂಬಂಧಿಕರು ಗಂಡನ ಮನೆಯಲ್ಲಿ ಮೌನಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ವರದಕ್ಷಿಣೆಗಾಗಿ ಪತಿ ಹಾಗೂ ಅತ್ತೆ ಮಾವ ಕಿರುಕುಳ‌ ನೀಡಿದ್ದಾರೆ. ಆಕೆಯ ಸಾವಿಗೆ ಪತಿಯ  ಕುಟುಂಬಸ್ಥರೇ ಕಾರಣ ಎಂದು ಮೌನಿಕ ಸಂಬಂಧಿಕರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ರು. ಶವಗಾರದ ಬಳಿ ಕುಳಿತು ಪೊಲೀಸರು ಹಾಗೂ ವೈದ್ಯರು ವಿರುದ್ಧ ಘೋಷಣೆ ಕೂಗಿದ್ರು.

ಪತಿ ಮತ್ತು ಆತನ ಕುಟುಂಬಸ್ಥರು ಖಾಕಿ ವಶಕ್ಕೆ  ಪ್ರತಿಭಟನೆ ಜೋರಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪತಿ ಅನಿಲ‌್ ಹಾಗೂ ಆತನ ಪೋಷಕರನ್ನು ವಶಕ್ಕೆ‌ ತೆಗೆದುಕೊಂಡಿದ್ದಾರೆ. ಸದ್ಯ ಅನಿಲ್ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೌನಿಕ ಸಾವು ಕುರಿತಂತೆ ತನಿಖೆ ಆರಂಭಿಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್