AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್​ ಪತ್ನಿ ನಿಗೂಢ ಸಾವು

ಹೈದರಾಬಾದ್: ಆತ ಬೆಂಗಳೂರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಕೆಲಸ, ಸಂಬಳ ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಲಾಕ್‌ಡೌನ್‌ನಿಂದಾಗಿ ವರ್ಕ್ ಫ್ರಮ್ ಹೋಮ್ ಅಂತಾ ಹೆಂಡತಿ ಜೊತೆ ಊರು ಸೇರಿದ್ದ. ಆದರೆ, ಅಲ್ಲಿ ಏನಾಯ್ತೋ ಏನೋ ಗೊತ್ತಿಲ್ಲ. ಇದೀಗ ಪತ್ನಿ ಸಾವಿನ ಮನೆ ಸೇರಿದ್ದಾಳೆ. ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದಳಾ? ಈಕೆ ಮೌನಿಕ. ವಯಸ್ಸು ಇನ್ನು 30ರ ಅಸುಪಾಸು. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೀರಂಕಿಲಾಕುವಿನ ನಿವಾಸಿ. ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜನಿಯರ್ ಆಗಿದ್ದ ಅನಿಲ್‌ ಎಂಬಾತನಿಗೆ […]

ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್​ ಪತ್ನಿ ನಿಗೂಢ ಸಾವು
ಸಾಧು ಶ್ರೀನಾಥ್​
| Edited By: |

Updated on: Sep 13, 2020 | 3:25 PM

Share

ಹೈದರಾಬಾದ್: ಆತ ಬೆಂಗಳೂರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಕೆಲಸ, ಸಂಬಳ ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಲಾಕ್‌ಡೌನ್‌ನಿಂದಾಗಿ ವರ್ಕ್ ಫ್ರಮ್ ಹೋಮ್ ಅಂತಾ ಹೆಂಡತಿ ಜೊತೆ ಊರು ಸೇರಿದ್ದ. ಆದರೆ, ಅಲ್ಲಿ ಏನಾಯ್ತೋ ಏನೋ ಗೊತ್ತಿಲ್ಲ. ಇದೀಗ ಪತ್ನಿ ಸಾವಿನ ಮನೆ ಸೇರಿದ್ದಾಳೆ.

ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದಳಾ? ಈಕೆ ಮೌನಿಕ. ವಯಸ್ಸು ಇನ್ನು 30ರ ಅಸುಪಾಸು. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವೀರಂಕಿಲಾಕುವಿನ ನಿವಾಸಿ. ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜನಿಯರ್ ಆಗಿದ್ದ ಅನಿಲ್‌ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು.

ಇಬ್ಬರು ಸುಖವಾಗಿ ಜೀವನ ನಡೆಸುತ್ತಿದ್ರು. ಆದ್ರೆ ಕೊರೊನಾ ಹಾವಳಿಯಿಂದಾಗಿ ದಂಪತಿ ಬೆಂಗಳೂರು ಬಿಟ್ಟು ಸ್ವಗ್ರಾಮಕ್ಕೆ ತೆರಳಿದ್ದರು. ಲಾಕ್‌ಡೌನ್ ಆರಂಭದಿಂದಲೂ ಗಂಡ ಹೆಂಡತಿ ಅಲ್ಲೇ ವಾಸ ಮಾಡ್ತಾಯಿದ್ರು. ಅಲ್ಲೂ ಕೂಡ ಜೀವನ ಚೆನ್ನಾಗಿಯೇ ಇತ್ತು. ಆದ್ರೆ, ಪತಿ ಮನೆಯಲ್ಲಿ ಏನಾಯ್ತೋ ಏನೋ ಗೊತ್ತಿಲ್ಲ. ಇದೀಗ ಮೌನಿಕ ಶವವಾಗಿ ಪತ್ತೆಯಾಗಿದ್ದಾಳೆ.

ಪೊಲೀಸರ ವಿರುದ್ಧ ಸಿಡಿದೆದ್ದ ಸಂಬಂಧಿಕರು ಗಂಡನ ಮನೆಯಲ್ಲಿ ಮೌನಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ವರದಕ್ಷಿಣೆಗಾಗಿ ಪತಿ ಹಾಗೂ ಅತ್ತೆ ಮಾವ ಕಿರುಕುಳ‌ ನೀಡಿದ್ದಾರೆ. ಆಕೆಯ ಸಾವಿಗೆ ಪತಿಯ  ಕುಟುಂಬಸ್ಥರೇ ಕಾರಣ ಎಂದು ಮೌನಿಕ ಸಂಬಂಧಿಕರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ರು. ಶವಗಾರದ ಬಳಿ ಕುಳಿತು ಪೊಲೀಸರು ಹಾಗೂ ವೈದ್ಯರು ವಿರುದ್ಧ ಘೋಷಣೆ ಕೂಗಿದ್ರು.

ಪತಿ ಮತ್ತು ಆತನ ಕುಟುಂಬಸ್ಥರು ಖಾಕಿ ವಶಕ್ಕೆ  ಪ್ರತಿಭಟನೆ ಜೋರಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪತಿ ಅನಿಲ‌್ ಹಾಗೂ ಆತನ ಪೋಷಕರನ್ನು ವಶಕ್ಕೆ‌ ತೆಗೆದುಕೊಂಡಿದ್ದಾರೆ. ಸದ್ಯ ಅನಿಲ್ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೌನಿಕ ಸಾವು ಕುರಿತಂತೆ ತನಿಖೆ ಆರಂಭಿಸಿದ್ದಾರೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!