AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ರಕ್ಷಣಾ ಇಲಾಖೆಯ ಸಿಬ್ಬಂದಿ ಬಂಧನ

Soldier Recruitment Exam: ಈ ಪ್ರಕರಣವನ್ನು ಅತಿ ದೊಡ್ಡ ಹಗರಣವೆಂದು ವ್ಯಾಖ್ಯಾನಿಸಲಾಗಿದ್ದು, ಇದೇ ತೆರನಾದ ಎರಡು ಪ್ರಕರಣಗಳಲ್ಲಿ ಒಟ್ಟು 10 ಜನರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಸೇನಾ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ರಕ್ಷಣಾ ಇಲಾಖೆಯ ಸಿಬ್ಬಂದಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 7:19 PM

Share

ಚೆನ್ನೈ: ಸೇನಾ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಕ್ಷಣಾ ಇಲಾಖೆಯ ಮುಖ್ಯ ಹುದ್ದೆಯಲ್ಲಿದ್ದ ಸಿಬ್ಬಂದಿಯನ್ನು ಶನಿವಾರ ಬಂಧಿಸಲಾಗಿದೆ. ಸೇನಾ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪುಣೆ ನಗರ ಪೊಲೀಸ್ ಹಾಗೂ ಮಿಲಿಟರಿ ಇಂಟಲಿಜೆನ್ಸ್ ನಡೆಸಿದ ತನಿಖೆಯಲ್ಲಿ ಈ ಅಕ್ರಮಕ್ಕೆ ಕಾರಣರಾದವರ ಹೆಸರು ಬೆಳಕಿಗೆ ಬಂದಿದೆ. ಈ ವಿಷಯವನ್ನು ಪುಣೆ ಪೊಲೀಸ್ ಕಮಿಷನರ್​ ಅಮಿತಾಭ್ ಗುಪ್ತಾ ಸ್ಪಷ್ಟಪಡಿಸಿದ್ದು, ಹಗರಣದಲ್ಲಿ ಪಾಲ್ಗೊಂಡ ಅಧಿಕಾರಿಯನ್ನು ಬಂಧನದಲ್ಲಿಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣವನ್ನು ಅತಿ ದೊಡ್ಡ ಹಗರಣವೆಂದು ವ್ಯಾಖ್ಯಾನಿಸಲಾಗಿದ್ದು, ಇದೇ ತೆರನಾದ ಎರಡು ಪ್ರಕರಣಗಳಲ್ಲಿ ಒಟ್ಟು 10 ಜನರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ. ಈ ಮೂಲಕ ಸೇನೆಯ ಸಾಮಾನ್ಯ ಪ್ರವೇಶಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಫೆಬ್ರವರಿಯಿಂದಲೂ ತನಿಖೆ ನಡೆಸುತ್ತಿದ್ದ ಅಧಿಕಾರಿಗಳು ಕೊನೆಗೂ ಅಕ್ರಮದ ಮೂಲ ಪತ್ತೆ ಮಾಡಿದ್ದಾರೆ. ಫೆಬ್ರವರಿ 28ರಂದು ನಡೆಯಬೇಕಾಗಿದ್ದ ಸದರಿ ಪರೀಕ್ಷೆ ಇದೇ ಕಾರಣದಿಂದ ಮುಂದೂಡಲ್ಪಟ್ಟಿದ್ದು, ಈಗ ಭದ್ರತಾ ಸಿಬ್ಬಂದಿಯೇ aಕ್ರಮದ ಭಾಗಿಯಾಗಿದ್ದಾರೆ ಎನ್ನುವ ವಿಚಾರ ಸಂಚಲನ ಮೂಡಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ನಂತರ ಪುಣೆಯ ವಾನವಾಡಿ ಮತ್ತು ವಿಶ್ರಾಂತ್​ವಾಡಿ ಪೊಲೀಸ್​ ಠಾಣೆಗಳಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಪ್ರತ್ಯೇಕ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ವಿಶ್ರಾಂತ್​ವಾಡಿ ಪೊಲೀಸ್​ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ನಿವೃತ್ತ ಸೇನಾ ಅಧಿಕಾರಿ ಸೇರಿದಂತೆ ಮೂವರ ಬಂಧನವಾಗಿದ್ದರೆ, ವಾನವಾಡಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಸೇವೆಯಲ್ಲಿದ್ದ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ.

ಈ ಸಂಬಂಧ ಮಾತನಾಡಿರುವ ಸೇನಾ ಸಿಬ್ಬಂದಿ ಮುಂದಿನ ದಿನಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಸೋರಿಕೆಗೆ ಅವಕಾಶವಿಲ್ಲದಂತೆ ಏರ್ಪಡಿಸುವ ಬಗ್ಗೆ ಆಲೋಚನೆ ನಡೆಸುತ್ತಿದ್ದಾರೆ. ಅಲ್ಲದೇ, ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸೇನೆಯು ಆಂತರಿಕ ತನಿಖೆಯನ್ನೂ ನಡೆಸಿ ಹೆಚ್ಚಿನ ಮಾಹಿತಿ ಕಲೆಹಾಕಲು ನಿರ್ಧರಿಸಿದೆ.

ಇದನ್ನೂ ಓದಿ: JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಇದನ್ನೂ ಓದಿ: Toolkit Case: ದಿಶಾ ರವಿ ಪ್ರಕರಣದ ಖಾಸಗಿ ಚಾಟ್ ಸೋರಿಕೆ ಮಾಡದಂತೆ ಮಾಧ್ಯಮಗಳಿಗೆ ದೆಹಲಿ ಹೈಕೋರ್ಟ್ ನೋಟೀಸ್

Published On - 8:04 pm, Mon, 8 March 21

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು