Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ರಕ್ಷಣಾ ಇಲಾಖೆಯ ಸಿಬ್ಬಂದಿ ಬಂಧನ

Soldier Recruitment Exam: ಈ ಪ್ರಕರಣವನ್ನು ಅತಿ ದೊಡ್ಡ ಹಗರಣವೆಂದು ವ್ಯಾಖ್ಯಾನಿಸಲಾಗಿದ್ದು, ಇದೇ ತೆರನಾದ ಎರಡು ಪ್ರಕರಣಗಳಲ್ಲಿ ಒಟ್ಟು 10 ಜನರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಸೇನಾ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ; ರಕ್ಷಣಾ ಇಲಾಖೆಯ ಸಿಬ್ಬಂದಿ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 7:19 PM

ಚೆನ್ನೈ: ಸೇನಾ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಕ್ಷಣಾ ಇಲಾಖೆಯ ಮುಖ್ಯ ಹುದ್ದೆಯಲ್ಲಿದ್ದ ಸಿಬ್ಬಂದಿಯನ್ನು ಶನಿವಾರ ಬಂಧಿಸಲಾಗಿದೆ. ಸೇನಾ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪುಣೆ ನಗರ ಪೊಲೀಸ್ ಹಾಗೂ ಮಿಲಿಟರಿ ಇಂಟಲಿಜೆನ್ಸ್ ನಡೆಸಿದ ತನಿಖೆಯಲ್ಲಿ ಈ ಅಕ್ರಮಕ್ಕೆ ಕಾರಣರಾದವರ ಹೆಸರು ಬೆಳಕಿಗೆ ಬಂದಿದೆ. ಈ ವಿಷಯವನ್ನು ಪುಣೆ ಪೊಲೀಸ್ ಕಮಿಷನರ್​ ಅಮಿತಾಭ್ ಗುಪ್ತಾ ಸ್ಪಷ್ಟಪಡಿಸಿದ್ದು, ಹಗರಣದಲ್ಲಿ ಪಾಲ್ಗೊಂಡ ಅಧಿಕಾರಿಯನ್ನು ಬಂಧನದಲ್ಲಿಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣವನ್ನು ಅತಿ ದೊಡ್ಡ ಹಗರಣವೆಂದು ವ್ಯಾಖ್ಯಾನಿಸಲಾಗಿದ್ದು, ಇದೇ ತೆರನಾದ ಎರಡು ಪ್ರಕರಣಗಳಲ್ಲಿ ಒಟ್ಟು 10 ಜನರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ. ಈ ಮೂಲಕ ಸೇನೆಯ ಸಾಮಾನ್ಯ ಪ್ರವೇಶಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಫೆಬ್ರವರಿಯಿಂದಲೂ ತನಿಖೆ ನಡೆಸುತ್ತಿದ್ದ ಅಧಿಕಾರಿಗಳು ಕೊನೆಗೂ ಅಕ್ರಮದ ಮೂಲ ಪತ್ತೆ ಮಾಡಿದ್ದಾರೆ. ಫೆಬ್ರವರಿ 28ರಂದು ನಡೆಯಬೇಕಾಗಿದ್ದ ಸದರಿ ಪರೀಕ್ಷೆ ಇದೇ ಕಾರಣದಿಂದ ಮುಂದೂಡಲ್ಪಟ್ಟಿದ್ದು, ಈಗ ಭದ್ರತಾ ಸಿಬ್ಬಂದಿಯೇ aಕ್ರಮದ ಭಾಗಿಯಾಗಿದ್ದಾರೆ ಎನ್ನುವ ವಿಚಾರ ಸಂಚಲನ ಮೂಡಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ನಂತರ ಪುಣೆಯ ವಾನವಾಡಿ ಮತ್ತು ವಿಶ್ರಾಂತ್​ವಾಡಿ ಪೊಲೀಸ್​ ಠಾಣೆಗಳಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಪ್ರತ್ಯೇಕ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ವಿಶ್ರಾಂತ್​ವಾಡಿ ಪೊಲೀಸ್​ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ನಿವೃತ್ತ ಸೇನಾ ಅಧಿಕಾರಿ ಸೇರಿದಂತೆ ಮೂವರ ಬಂಧನವಾಗಿದ್ದರೆ, ವಾನವಾಡಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಸೇವೆಯಲ್ಲಿದ್ದ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ.

ಈ ಸಂಬಂಧ ಮಾತನಾಡಿರುವ ಸೇನಾ ಸಿಬ್ಬಂದಿ ಮುಂದಿನ ದಿನಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಸೋರಿಕೆಗೆ ಅವಕಾಶವಿಲ್ಲದಂತೆ ಏರ್ಪಡಿಸುವ ಬಗ್ಗೆ ಆಲೋಚನೆ ನಡೆಸುತ್ತಿದ್ದಾರೆ. ಅಲ್ಲದೇ, ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸೇನೆಯು ಆಂತರಿಕ ತನಿಖೆಯನ್ನೂ ನಡೆಸಿ ಹೆಚ್ಚಿನ ಮಾಹಿತಿ ಕಲೆಹಾಕಲು ನಿರ್ಧರಿಸಿದೆ.

ಇದನ್ನೂ ಓದಿ: JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಇದನ್ನೂ ಓದಿ: Toolkit Case: ದಿಶಾ ರವಿ ಪ್ರಕರಣದ ಖಾಸಗಿ ಚಾಟ್ ಸೋರಿಕೆ ಮಾಡದಂತೆ ಮಾಧ್ಯಮಗಳಿಗೆ ದೆಹಲಿ ಹೈಕೋರ್ಟ್ ನೋಟೀಸ್

Published On - 8:04 pm, Mon, 8 March 21

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್