AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಪ್ರವಾಹದ ಹೆಸರಿನಲ್ಲಿ ಫೇಕ್​ ವಿಡಿಯೋಗಳೂ ವೈರಲ್​ ಆಗ್ತಿವೆ: ಟಿಟಿಡಿ ಇಒ ಹೇಳಿಕೆ

ವಿಪರೀತ ಮಳೆಯಿಂದಾಗಿ ಮೊದಲ ಹಾಗೂ ಎರಡನೇ ಬೆಟ್ಟದ ರಸ್ತೆಯಲ್ಲಿ ವಿವಿಧೆಡೆ ದೊಡ್ಡದೊಡ್ಡ ಕಲ್ಲುಗಳು ಉರುಳಿಬಿದ್ದಿವೆ. ಪರ್ವತಗಳು ಕುಸಿದಿವೆ. ಹಾಗಾಗಿ ಇದೆರಡೂ ಘಾಟ್​​ಗಳನ್ನು ಮುಚ್ಚಲಾಗಿದೆ.

ತಿರುಮಲ ಪ್ರವಾಹದ ಹೆಸರಿನಲ್ಲಿ ಫೇಕ್​ ವಿಡಿಯೋಗಳೂ ವೈರಲ್​ ಆಗ್ತಿವೆ: ಟಿಟಿಡಿ ಇಒ ಹೇಳಿಕೆ
ಟಿಟಿಡಿ ಇಒ
TV9 Web
| Edited By: |

Updated on: Nov 21, 2021 | 3:29 PM

Share

ಆಂಧ್ರಪ್ರದೇಶದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು ಇದುವರೆಗೆ ಸುಮಾರು 29 ಜನರ ಜೀವ ಹೋಗಿದೆ. ಅದರಲ್ಲೂ  ತಿರುಪತಿ ತಿರುಮಲ ದೇಗುಲದ ಸುತ್ತಲೂ ಜಲಾವೃತವಾಗಿತ್ತು. ಈ ಸಂಬಂಧ ಸೋಷಿಯಲ್​ ಮೀಡಿಯಾಗಳಲ್ಲಿ ಹಲವು ವಿಡಿಯೋಗಳೂ ವೈರಲ್​ ಆಗುತ್ತಿವೆ. ರಸ್ತೆಗಳಲ್ಲೆಲ್ಲ ನೀರು ತುಂಬಿರುವ, ಸಣ್ಣಸಣ್ಣ ಜಲಪಾತಗಳೇ ಸೃಷ್ಟಿಯಾಗಿರುವ ಹಲವು ವಿಡಿಯೋಗಳು ಹರಿದಾಡುತ್ತಿವೆ. ಆದರೆ ತಿರುಪತಿಯದ್ದು ಎಂದು ಕ್ಯಾಪ್ಷನ್​ ಕೊಟ್ಟ ವಿಡಿಯೋಗಳೆಲ್ಲ ಅಲ್ಲಿಯದಲ್ಲ. ತಿರುಪತಿಯಲ್ಲುಂಟಾದ ಪ್ರವಾಹಕ್ಕೆ ಸಂಬಂಧಪಟ್ಟಂತೆ ಒಂದಷ್ಟು ಫೇಕ್​ ವಿಡಿಯೋಗಳು ಹರಿದಾಡುತ್ತಿದ್ದು, ಅದನ್ನು ನಂಬಬೇಡಿ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇಒ (executive officer ) ಡಾ. ಕೆ.ಎಸ್​. ಜವಾಹರ್ ರೆಡ್ಡಿ ತಿಳಿಸಿದ್ದಾರೆ.

ವಿಪರೀತ ಮಳೆಯಿಂದಾಗಿ ಮೊದಲ ಹಾಗೂ ಎರಡನೇ ಬೆಟ್ಟದ ರಸ್ತೆಯಲ್ಲಿ ವಿವಿಧೆಡೆ ದೊಡ್ಡದೊಡ್ಡ ಕಲ್ಲುಗಳು ಉರುಳಿಬಿದ್ದಿವೆ. ಪರ್ವತಗಳು ಕುಸಿದಿವೆ. ಹಾಗಾಗಿ ಇದೆರಡೂ ಘಾಟ್​​ಗಳನ್ನು ಮುಚ್ಚಲಾಗಿದೆ. ಎಲ್ಲವೂ ಸರಿಯಾದ ಬಳಿಕ ಯಾತ್ರಾರ್ಥಿಗಳಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ.  ರಸ್ತೆಗೆ ಬಿದ್ದಿರುವ ಕಲ್ಲುಬಂಡೆಗಳನ್ನು ತೆರವುಗೊಳಿಸಬೇಕು. ಅದಾದ ಬಳಿಕವಷ್ಟೇ ರಸ್ತೆ ಸಂಚಾರಕ್ಕೆ ಮುಕ್ತವಾಗುತ್ತದೆ. ಕೆಲವರು ಯಾವ್ಯಾವುದೋ ಪ್ರವಾಹದ ವಿಡಿಯೋಗಳನ್ನೆಲ್ಲ ತಿರುಪತಿಯದ್ದು ಎಂದು ಹೇಳಿ ವೈರಲ್ ಮಾಡುತ್ತಿದ್ದಾರೆ. ಅದನ್ನು ನೋಡಿ ತಿರುಪತಿ-ತಿರುಮಲದಲ್ಲಿ ಸಿಲುಕಿರುವ ಜನರು ಕಂಗಾಲಾಗಿದ್ದಾರೆ. ದಯವಿಟ್ಟು ಯಾರೂ ಗಾಬರಿ ಆಗಬಾರದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಶೀಘ್ರದಲ್ಲೇ ವಿಶ್ವಕ್ಕೆ ಹಡಗುಗಳನ್ನು ನಿರ್ಮಿಸಲಿದೆ: ಐಎನ್‌ಎಸ್ ವಿಶಾಖಪಟ್ಟಣಂ ಲೋಕಾರ್ಪಣೆಗೊಳಿಸಿ ರಾಜನಾಥ್ ಸಿಂಗ್ ಹೇಳಿಕೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ