AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಪ್ರವಾಹದ ಹೆಸರಿನಲ್ಲಿ ಫೇಕ್​ ವಿಡಿಯೋಗಳೂ ವೈರಲ್​ ಆಗ್ತಿವೆ: ಟಿಟಿಡಿ ಇಒ ಹೇಳಿಕೆ

ವಿಪರೀತ ಮಳೆಯಿಂದಾಗಿ ಮೊದಲ ಹಾಗೂ ಎರಡನೇ ಬೆಟ್ಟದ ರಸ್ತೆಯಲ್ಲಿ ವಿವಿಧೆಡೆ ದೊಡ್ಡದೊಡ್ಡ ಕಲ್ಲುಗಳು ಉರುಳಿಬಿದ್ದಿವೆ. ಪರ್ವತಗಳು ಕುಸಿದಿವೆ. ಹಾಗಾಗಿ ಇದೆರಡೂ ಘಾಟ್​​ಗಳನ್ನು ಮುಚ್ಚಲಾಗಿದೆ.

ತಿರುಮಲ ಪ್ರವಾಹದ ಹೆಸರಿನಲ್ಲಿ ಫೇಕ್​ ವಿಡಿಯೋಗಳೂ ವೈರಲ್​ ಆಗ್ತಿವೆ: ಟಿಟಿಡಿ ಇಒ ಹೇಳಿಕೆ
ಟಿಟಿಡಿ ಇಒ
TV9 Web
| Edited By: |

Updated on: Nov 21, 2021 | 3:29 PM

Share

ಆಂಧ್ರಪ್ರದೇಶದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು ಇದುವರೆಗೆ ಸುಮಾರು 29 ಜನರ ಜೀವ ಹೋಗಿದೆ. ಅದರಲ್ಲೂ  ತಿರುಪತಿ ತಿರುಮಲ ದೇಗುಲದ ಸುತ್ತಲೂ ಜಲಾವೃತವಾಗಿತ್ತು. ಈ ಸಂಬಂಧ ಸೋಷಿಯಲ್​ ಮೀಡಿಯಾಗಳಲ್ಲಿ ಹಲವು ವಿಡಿಯೋಗಳೂ ವೈರಲ್​ ಆಗುತ್ತಿವೆ. ರಸ್ತೆಗಳಲ್ಲೆಲ್ಲ ನೀರು ತುಂಬಿರುವ, ಸಣ್ಣಸಣ್ಣ ಜಲಪಾತಗಳೇ ಸೃಷ್ಟಿಯಾಗಿರುವ ಹಲವು ವಿಡಿಯೋಗಳು ಹರಿದಾಡುತ್ತಿವೆ. ಆದರೆ ತಿರುಪತಿಯದ್ದು ಎಂದು ಕ್ಯಾಪ್ಷನ್​ ಕೊಟ್ಟ ವಿಡಿಯೋಗಳೆಲ್ಲ ಅಲ್ಲಿಯದಲ್ಲ. ತಿರುಪತಿಯಲ್ಲುಂಟಾದ ಪ್ರವಾಹಕ್ಕೆ ಸಂಬಂಧಪಟ್ಟಂತೆ ಒಂದಷ್ಟು ಫೇಕ್​ ವಿಡಿಯೋಗಳು ಹರಿದಾಡುತ್ತಿದ್ದು, ಅದನ್ನು ನಂಬಬೇಡಿ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇಒ (executive officer ) ಡಾ. ಕೆ.ಎಸ್​. ಜವಾಹರ್ ರೆಡ್ಡಿ ತಿಳಿಸಿದ್ದಾರೆ.

ವಿಪರೀತ ಮಳೆಯಿಂದಾಗಿ ಮೊದಲ ಹಾಗೂ ಎರಡನೇ ಬೆಟ್ಟದ ರಸ್ತೆಯಲ್ಲಿ ವಿವಿಧೆಡೆ ದೊಡ್ಡದೊಡ್ಡ ಕಲ್ಲುಗಳು ಉರುಳಿಬಿದ್ದಿವೆ. ಪರ್ವತಗಳು ಕುಸಿದಿವೆ. ಹಾಗಾಗಿ ಇದೆರಡೂ ಘಾಟ್​​ಗಳನ್ನು ಮುಚ್ಚಲಾಗಿದೆ. ಎಲ್ಲವೂ ಸರಿಯಾದ ಬಳಿಕ ಯಾತ್ರಾರ್ಥಿಗಳಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ.  ರಸ್ತೆಗೆ ಬಿದ್ದಿರುವ ಕಲ್ಲುಬಂಡೆಗಳನ್ನು ತೆರವುಗೊಳಿಸಬೇಕು. ಅದಾದ ಬಳಿಕವಷ್ಟೇ ರಸ್ತೆ ಸಂಚಾರಕ್ಕೆ ಮುಕ್ತವಾಗುತ್ತದೆ. ಕೆಲವರು ಯಾವ್ಯಾವುದೋ ಪ್ರವಾಹದ ವಿಡಿಯೋಗಳನ್ನೆಲ್ಲ ತಿರುಪತಿಯದ್ದು ಎಂದು ಹೇಳಿ ವೈರಲ್ ಮಾಡುತ್ತಿದ್ದಾರೆ. ಅದನ್ನು ನೋಡಿ ತಿರುಪತಿ-ತಿರುಮಲದಲ್ಲಿ ಸಿಲುಕಿರುವ ಜನರು ಕಂಗಾಲಾಗಿದ್ದಾರೆ. ದಯವಿಟ್ಟು ಯಾರೂ ಗಾಬರಿ ಆಗಬಾರದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಶೀಘ್ರದಲ್ಲೇ ವಿಶ್ವಕ್ಕೆ ಹಡಗುಗಳನ್ನು ನಿರ್ಮಿಸಲಿದೆ: ಐಎನ್‌ಎಸ್ ವಿಶಾಖಪಟ್ಟಣಂ ಲೋಕಾರ್ಪಣೆಗೊಳಿಸಿ ರಾಜನಾಥ್ ಸಿಂಗ್ ಹೇಳಿಕೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್