AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ಪ್ರವಾಹದ ಹೆಸರಿನಲ್ಲಿ ಫೇಕ್​ ವಿಡಿಯೋಗಳೂ ವೈರಲ್​ ಆಗ್ತಿವೆ: ಟಿಟಿಡಿ ಇಒ ಹೇಳಿಕೆ

ವಿಪರೀತ ಮಳೆಯಿಂದಾಗಿ ಮೊದಲ ಹಾಗೂ ಎರಡನೇ ಬೆಟ್ಟದ ರಸ್ತೆಯಲ್ಲಿ ವಿವಿಧೆಡೆ ದೊಡ್ಡದೊಡ್ಡ ಕಲ್ಲುಗಳು ಉರುಳಿಬಿದ್ದಿವೆ. ಪರ್ವತಗಳು ಕುಸಿದಿವೆ. ಹಾಗಾಗಿ ಇದೆರಡೂ ಘಾಟ್​​ಗಳನ್ನು ಮುಚ್ಚಲಾಗಿದೆ.

ತಿರುಮಲ ಪ್ರವಾಹದ ಹೆಸರಿನಲ್ಲಿ ಫೇಕ್​ ವಿಡಿಯೋಗಳೂ ವೈರಲ್​ ಆಗ್ತಿವೆ: ಟಿಟಿಡಿ ಇಒ ಹೇಳಿಕೆ
ಟಿಟಿಡಿ ಇಒ
TV9 Web
| Updated By: Lakshmi Hegde|

Updated on: Nov 21, 2021 | 3:29 PM

Share

ಆಂಧ್ರಪ್ರದೇಶದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು ಇದುವರೆಗೆ ಸುಮಾರು 29 ಜನರ ಜೀವ ಹೋಗಿದೆ. ಅದರಲ್ಲೂ  ತಿರುಪತಿ ತಿರುಮಲ ದೇಗುಲದ ಸುತ್ತಲೂ ಜಲಾವೃತವಾಗಿತ್ತು. ಈ ಸಂಬಂಧ ಸೋಷಿಯಲ್​ ಮೀಡಿಯಾಗಳಲ್ಲಿ ಹಲವು ವಿಡಿಯೋಗಳೂ ವೈರಲ್​ ಆಗುತ್ತಿವೆ. ರಸ್ತೆಗಳಲ್ಲೆಲ್ಲ ನೀರು ತುಂಬಿರುವ, ಸಣ್ಣಸಣ್ಣ ಜಲಪಾತಗಳೇ ಸೃಷ್ಟಿಯಾಗಿರುವ ಹಲವು ವಿಡಿಯೋಗಳು ಹರಿದಾಡುತ್ತಿವೆ. ಆದರೆ ತಿರುಪತಿಯದ್ದು ಎಂದು ಕ್ಯಾಪ್ಷನ್​ ಕೊಟ್ಟ ವಿಡಿಯೋಗಳೆಲ್ಲ ಅಲ್ಲಿಯದಲ್ಲ. ತಿರುಪತಿಯಲ್ಲುಂಟಾದ ಪ್ರವಾಹಕ್ಕೆ ಸಂಬಂಧಪಟ್ಟಂತೆ ಒಂದಷ್ಟು ಫೇಕ್​ ವಿಡಿಯೋಗಳು ಹರಿದಾಡುತ್ತಿದ್ದು, ಅದನ್ನು ನಂಬಬೇಡಿ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇಒ (executive officer ) ಡಾ. ಕೆ.ಎಸ್​. ಜವಾಹರ್ ರೆಡ್ಡಿ ತಿಳಿಸಿದ್ದಾರೆ.

ವಿಪರೀತ ಮಳೆಯಿಂದಾಗಿ ಮೊದಲ ಹಾಗೂ ಎರಡನೇ ಬೆಟ್ಟದ ರಸ್ತೆಯಲ್ಲಿ ವಿವಿಧೆಡೆ ದೊಡ್ಡದೊಡ್ಡ ಕಲ್ಲುಗಳು ಉರುಳಿಬಿದ್ದಿವೆ. ಪರ್ವತಗಳು ಕುಸಿದಿವೆ. ಹಾಗಾಗಿ ಇದೆರಡೂ ಘಾಟ್​​ಗಳನ್ನು ಮುಚ್ಚಲಾಗಿದೆ. ಎಲ್ಲವೂ ಸರಿಯಾದ ಬಳಿಕ ಯಾತ್ರಾರ್ಥಿಗಳಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ.  ರಸ್ತೆಗೆ ಬಿದ್ದಿರುವ ಕಲ್ಲುಬಂಡೆಗಳನ್ನು ತೆರವುಗೊಳಿಸಬೇಕು. ಅದಾದ ಬಳಿಕವಷ್ಟೇ ರಸ್ತೆ ಸಂಚಾರಕ್ಕೆ ಮುಕ್ತವಾಗುತ್ತದೆ. ಕೆಲವರು ಯಾವ್ಯಾವುದೋ ಪ್ರವಾಹದ ವಿಡಿಯೋಗಳನ್ನೆಲ್ಲ ತಿರುಪತಿಯದ್ದು ಎಂದು ಹೇಳಿ ವೈರಲ್ ಮಾಡುತ್ತಿದ್ದಾರೆ. ಅದನ್ನು ನೋಡಿ ತಿರುಪತಿ-ತಿರುಮಲದಲ್ಲಿ ಸಿಲುಕಿರುವ ಜನರು ಕಂಗಾಲಾಗಿದ್ದಾರೆ. ದಯವಿಟ್ಟು ಯಾರೂ ಗಾಬರಿ ಆಗಬಾರದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಶೀಘ್ರದಲ್ಲೇ ವಿಶ್ವಕ್ಕೆ ಹಡಗುಗಳನ್ನು ನಿರ್ಮಿಸಲಿದೆ: ಐಎನ್‌ಎಸ್ ವಿಶಾಖಪಟ್ಟಣಂ ಲೋಕಾರ್ಪಣೆಗೊಳಿಸಿ ರಾಜನಾಥ್ ಸಿಂಗ್ ಹೇಳಿಕೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!