AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್ ಮಾಡುತ್ತಿದ್ದಾಗ ಮಗನ ಸಾವು, ಅದೇ ಶಾಕ್​ನಲ್ಲಿ ಹೃದಯಾಘಾತದಿಂದ ಅಪ್ಪ ಸಹ ಸಾವು

ಮಗ ಕಾರ್ಯಕ್ರಮವೊಂದರಲ್ಲಿ ಹೈ ಎನರ್ಜಿಯಿಂದ ಸಖತ್​ ಡ್ಯಾನ್ಸ್​ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬೀಳುತ್ತಾನೆ. ಆದರೆ ತಕ್ಷಣ ಅಲ್ಲೇ ಇದ್ದ ಅಪ್ಪ, 66 ವರ್ಷದ ನಾರಪ್​ಜಿ ಸೋನಿಗ್ರಾ ಅವರು ತಮ್ಮ ಮಗನನ್ನು ಆಸ್ಪತ್ರೆಗೆ ಸಾಗಿಸುತ್ತಾರೆ.

ಡ್ಯಾನ್ಸ್ ಮಾಡುತ್ತಿದ್ದಾಗ ಮಗನ ಸಾವು, ಅದೇ ಶಾಕ್​ನಲ್ಲಿ ಹೃದಯಾಘಾತದಿಂದ ಅಪ್ಪ ಸಹ ಸಾವು
ಡ್ಯಾನ್ಸ್ ಮಾಡುತ್ತಿದ್ದಾಗ ಮಗನ ಸಾವು, ಅದೇ ಶಾಕ್​ನಲ್ಲಿ ಹೃದಯಾಘಾತದಿಂದ ಅಪ್ಪ ಸಹ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on: Oct 04, 2022 | 12:37 PM

Share

ಮಹಾರಾಷ್ಟ್ರ: ಇದು ನಿಜಕ್ಕೂ ದುರದೃಷ್ಟಕರ! ಡ್ಯಾನ್ಸ್ ಮಾಡುತ್ತಿದ್ದಾಗ ಮಗ ಕುಸಿದುಬಿದ್ದು ಸಾವಿನತ್ತ ಮುಖ ಮಾಡುತ್ತಾನೆ. ಆದರೆ ಅಲ್ಲೇ ಇಲ್ಲ ತಂದೆ ಆ ಮಗನನ್ನು ಆಸ್ಪತ್ರೆಗೆ ಸಾಗಿಸುತ್ತಾರೆ. ಆದರೆ ಈ ಮಧ್ಯೆ ಅದೇ ಶಾಕ್​ನಲ್ಲಿ ಅಪ್ಪನಿಗೆ ಹೃದಯಾಘಾತವಾಗಿ ಸಾವಿಗೀಡಾಗುತ್ತಾರೆ.

ಹೌದು ಮಗ ಕಾರ್ಯಕ್ರಮವೊಂದರಲ್ಲಿ ಹೈ ಎನರ್ಜಿಯಿಂದ ಸಖತ್​ ಡ್ಯಾನ್ಸ್​ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬೀಳುತ್ತಾನೆ. ಆದರೆ ತಕ್ಷಣ ಅಲ್ಲೇ ಇದ್ದ ಅಪ್ಪ, 66 ವರ್ಷದ ನಾರಪ್​ಜಿ ಸೋನಿಗ್ರಾ ಅವರು ತಮ್ಮ ಮಗನನ್ನು ಆಸ್ಪತ್ರೆಗೆ ಸಾಗಿಸುತ್ತಾರೆ. ಆ ವೇಳೆಗೆ ಮಗ ಸತ್ತಿರುತ್ತಾನೆ. ಇನ್ನು ಹೃದಯಾಘಾತಕ್ಕೀಡಾದ ಅಪ್ಪ ಕುಸಿದ್ದು ಬಿದ್ದಾಗ ವೈದ್ಯರು ಪರೀಕ್ಷಿಸುತ್ತಾರೆ. ಆದರೆ ಆ ವೇಳೆಗೆ ಅಪ್ಪ ಅಸುನೀಗಿರುತ್ತಾರೆ.

ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದ ಯುವಕನ ಸಾವು; ಮೊಬೈಲ್​ನಲ್ಲಿ ಸೆರೆಯಾಗಿತ್ತು ಶಾಕಿಂಗ್ ವಿಡಿಯೋ

ಅಹಮದಾಬಾದ್: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ನವರಾತ್ರಿ ಪ್ರಯುಕ್ತ ವೇದಿಕೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದ 21 ವರ್ಷದ ವೀರೇಂದ್ರ ಎಂಬ ವ್ಯಕ್ತಿಯೊಬ್ಬರು ನೃತ್ಯ ಮಾಡುವಾಗಲೇ ಹೃದಯಾಘಾತದಿಂದ (Heart Attack) ಕುಸಿದು ಬಿದ್ದಿದ್ದಾರೆ. ಗರ್ಬಾ ನೃತ್ಯ (Garba Dance) ಮಾಡುವಾಗ ಆನಂದ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತಾರಾಪುರದ ಶಿವಶಕ್ತಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೀರೇಂದ್ರ ಸಿಂಗ್ ರಮೇಶ್ ಭಾಯಿ ರಜಪೂತ್ ಅವರು ಗರ್ಬಾ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಈ ಇಡೀ ಘಟನೆಯನ್ನು ಆತನ ಸ್ನೇಹಿತ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನವರಾತ್ರಿ ಪ್ರಯುಕ್ತ ಈ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಹೃದಯಾಘಾತದಿಂದ ಕುಸಿದುಬಿದ್ದ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವೀರೇಂದ್ರ ಸಿಂಗ್ ಮೃತಪಟ್ಟಿದ್ದಾರೆ. ವೈದ್ಯರ ಪ್ರಕಾರ, ಅವರಿಗೆ ಹಠಾತ್ತಾಗಿ ಹೃದಯಾಘಾತ ಉಂಟಾಗಿದ್ದು, ಇದೇ ಕಾರಣದಿಂದ ಅವರು ನಿಧನರಾಗಿದ್ದಾರೆ. ವೀರೇಂದ್ರ ಅವರ ತಂದೆ ಗುಜರಾತ್‌ನ ಮೊರಾಜ್ ಗ್ರಾಮದ ಶಾಲೆಯೊಂದರಲ್ಲಿ ಪ್ರಾಂಶುಪಾಲರಾಗಿದ್ದಾರೆ.

ವೇದಿಕೆಯಲ್ಲಿ ನೃತ್ಯ ಮಾಡುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದ ಕಲಾವಿದ

ಶ್ರೀನಗರ: ಜಮ್ಮುವಿನಲ್ಲಿ ಯೋಗೇಶ್ ಗುಪ್ತಾ (Yogesh Gupta) ಎಂಬ ರಂಗ ಕಲಾವಿದ ವೇದಿಕೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ಬುಧವಾರ ಜಮ್ಮುವಿನ ಬಿಷ್ನಾಹ್ ಪ್ರದೇಶದಲ್ಲಿ ಹೃದಯಾಘಾತದಿಂದ (Heart Attack) ವೇದಿಕೆಯ ಮೇಲೆ ಪ್ರದರ್ಶನ ನೀಡುತ್ತಿದ್ದಾಗ ಕಲಾವಿದ ಸಾವನ್ನಪ್ಪಿದ್ದಾರೆ. ಜಮ್ಮುವಿನ ಕೋಥೇ ಗ್ರಾಮದಲ್ಲಿ ಗಣೇಶ ಉತ್ಸವ ಕಾರ್ಯಕ್ರಮದ ವೇಳೆ ನೃತ್ಯ ಪ್ರದರ್ಶನ ನೀಡುತ್ತಿದ್ದ ವೇಳೆ 20 ವರ್ಷದ ಕಲಾವಿದ ಕುಸಿದು ಬಿದ್ದಿದ್ದಾರೆ.

ಈ ವಿಡಿಯೋ ಕ್ಲಿಪ್‌ನಲ್ಲಿ, ಕಲಾವಿದ ಯೋಗೇಶ್ ಮಹಿಳೆಯಂತೆ ವೇಷ ಧರಿಸಿ ನೃತ್ಯ ಮಾಡುತ್ತಿದ್ದರು. ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಮುಂದೆ ನೃತ್ಯ ಮಾಡುತ್ತಿರುವಾಗಲೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಪ್ರದರ್ಶನ ಮಾಡುವಾಗ, ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅವರು ಆ ನಾಟಕದಲ್ಲಿ ತಮ್ಮ ಪಾತ್ರ ಮಾಡುತ್ತಾ ಕೆಳಗೆ ಬಿದ್ದಿರಬಹುದು ಎಂದು ಪ್ರೇಕ್ಷಕರು ಭಾವಿಸಿದ್ದರು. ಆದರೆ, ಕೆಳಗೆ ಬಿದ್ದ ಕಲಾವಿದ ಎಷ್ಟು ಹೊತ್ತಾದರೂ ಏಳದಿದ್ದಾಗ ಅವರು ಪ್ರಜ್ಞೆ ತಪ್ಪಿ ಬಿದ್ದಿರುವುದು ಗೊತ್ತಾಗಿದೆ.

ಈ ಹಿಂದೆ, ಖ್ಯಾತ ಬಾಲಿವುಡ್ ಗಾಯಕ ಕೆಕೆ ಅವರು ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದಾಗ ಕುಸಿದುಬಿದ್ದ ನಿಧನರಾಗಿದ್ದರು. ಮಲಯಾಳಂ ಗಾಯಕ ಎಡವ ಬಶೀರ್ ಕೂಡ ಮೇ 28ರಂದು ಶೋ ವೇಳೆ ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ