AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಲಡಾಖ್Image Credit source: NDTV
ನಯನಾ ರಾಜೀವ್
|

Updated on: Aug 18, 2023 | 8:00 AM

Share

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬುಧವಾರ ನಡೆದ ಪಕ್ಷದ ಕಾರ್ಯಕಾರಿ ಸಭೆಯ ನಂತರ ಲಡಾಖ್ ಬಿಜೆಪಿ ಮುಖ್ಯಸ್ಥ ಫುಂಚೋಕ್ ಸ್ಟಾಂಜಿನ್ ಅವರು ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಲಡಾಖ್​ನಲ್ಲಿ ಯಾವ ಧರ್ಮದವರು ಕೂಡ ಓಡಿ ಹೋಗುವುದು ಸ್ವೀಕಾರಾರ್ಹವಲ್ಲ ಹಾಗೂ ಇದು ಕೋಮು ಸೌಹಾರ್ದತೆಗೆ ಮತ್ತು ಈ ಪ್ರದೇಶದ ಜನರ ಏಕತೆಗೆ ಧಕ್ಕೆ ತಂದಂತೆ ಎಂದು ಬಿಜೆಪಿ ಹೇಳಿದೆ.

ನಜೀರ್ ಅವರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿರುವ ವಿಚಾರ ಕುರಿತಂತೆ ಪಕ್ಷ ಸ್ಪಷ್ಟನೆ ಕೇಳಿತ್ತು. ಒಂದು ತಿಂಗಳ ಹಿಂದೆ ನಜೀರ್ ಪುತ್ರ ಹಾಗೂ ಬೌದ್ಧ ಯುವತಿ ಮದುವೆಯಾಗಿದ್ದಾರೆ, ಆದರೆ ಅವರು ಎಲ್ಲಿದ್ದಾರೆ ಎನ್ನುವ ಸುಳಿವು ಸಿಕ್ಕಿಲ್ಲ.

ತನ್ನ ಮಗ ಮಂಜೂರ್ ಅಹ್ಮದ್‌ನನ್ನು ಬೌದ್ಧ ಮಹಿಳೆಯೊಂದಿಗೆ ವಿವಾಹವಾಗುವುದನ್ನು ಅವರ ಕುಟುಂಬವೂ ವಿರೋಧಿಸುತ್ತದೆ ಮತ್ತು ಕಳೆದ ಒಂದು ತಿಂಗಳಿನಿಂದ ಅವರು ಎಲ್ಲಿ ತಂಗಿದ್ದಾರೆಂದು ತಿಳಿದಿಲ್ಲ ಎಂದು ಉಚ್ಚಾಟಿತ ಬಿಜೆಪಿ ನಾಯಕ ಹೇಳಿದ್ದಾರೆ.

ಮತ್ತಷ್ಟು ಓದಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಗದೀಶ್​ ಶೆಟ್ಟರ್​ರವರ 27 ಆಪ್ತರನ್ನು ಉಚ್ಚಾಟನೆ ಮಾಡಿದ ಬಿಜೆಪಿ

ಬಿಜೆಪಿಯ ನಿಷ್ಠಾವಂತ ಹಿರಿಯ ನಾಯಕ ಅಹ್ಮದ್ ಅವರು ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರೆಗೆ ಹೋಗಿದ್ದರು, ಆ ಸಂದರ್ಭದಲ್ಲಿ ಅವರ ಮಗ ಮತ್ತು ಮಹಿಳೆ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಅವರನ್ನು ಪಕ್ಷದಿಂದ ಹೊರಹಾಕುವ ಮೊದಲು, ಅವರ ಮಗನನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುವಂತೆ ಕೇಳಲಾಯಿತು ಎಂದು ಅಹ್ಮದ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ