AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಲಡಾಖ್Image Credit source: NDTV
ನಯನಾ ರಾಜೀವ್
|

Updated on: Aug 18, 2023 | 8:00 AM

Share

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬುಧವಾರ ನಡೆದ ಪಕ್ಷದ ಕಾರ್ಯಕಾರಿ ಸಭೆಯ ನಂತರ ಲಡಾಖ್ ಬಿಜೆಪಿ ಮುಖ್ಯಸ್ಥ ಫುಂಚೋಕ್ ಸ್ಟಾಂಜಿನ್ ಅವರು ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಲಡಾಖ್​ನಲ್ಲಿ ಯಾವ ಧರ್ಮದವರು ಕೂಡ ಓಡಿ ಹೋಗುವುದು ಸ್ವೀಕಾರಾರ್ಹವಲ್ಲ ಹಾಗೂ ಇದು ಕೋಮು ಸೌಹಾರ್ದತೆಗೆ ಮತ್ತು ಈ ಪ್ರದೇಶದ ಜನರ ಏಕತೆಗೆ ಧಕ್ಕೆ ತಂದಂತೆ ಎಂದು ಬಿಜೆಪಿ ಹೇಳಿದೆ.

ನಜೀರ್ ಅವರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿರುವ ವಿಚಾರ ಕುರಿತಂತೆ ಪಕ್ಷ ಸ್ಪಷ್ಟನೆ ಕೇಳಿತ್ತು. ಒಂದು ತಿಂಗಳ ಹಿಂದೆ ನಜೀರ್ ಪುತ್ರ ಹಾಗೂ ಬೌದ್ಧ ಯುವತಿ ಮದುವೆಯಾಗಿದ್ದಾರೆ, ಆದರೆ ಅವರು ಎಲ್ಲಿದ್ದಾರೆ ಎನ್ನುವ ಸುಳಿವು ಸಿಕ್ಕಿಲ್ಲ.

ತನ್ನ ಮಗ ಮಂಜೂರ್ ಅಹ್ಮದ್‌ನನ್ನು ಬೌದ್ಧ ಮಹಿಳೆಯೊಂದಿಗೆ ವಿವಾಹವಾಗುವುದನ್ನು ಅವರ ಕುಟುಂಬವೂ ವಿರೋಧಿಸುತ್ತದೆ ಮತ್ತು ಕಳೆದ ಒಂದು ತಿಂಗಳಿನಿಂದ ಅವರು ಎಲ್ಲಿ ತಂಗಿದ್ದಾರೆಂದು ತಿಳಿದಿಲ್ಲ ಎಂದು ಉಚ್ಚಾಟಿತ ಬಿಜೆಪಿ ನಾಯಕ ಹೇಳಿದ್ದಾರೆ.

ಮತ್ತಷ್ಟು ಓದಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಗದೀಶ್​ ಶೆಟ್ಟರ್​ರವರ 27 ಆಪ್ತರನ್ನು ಉಚ್ಚಾಟನೆ ಮಾಡಿದ ಬಿಜೆಪಿ

ಬಿಜೆಪಿಯ ನಿಷ್ಠಾವಂತ ಹಿರಿಯ ನಾಯಕ ಅಹ್ಮದ್ ಅವರು ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರೆಗೆ ಹೋಗಿದ್ದರು, ಆ ಸಂದರ್ಭದಲ್ಲಿ ಅವರ ಮಗ ಮತ್ತು ಮಹಿಳೆ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಅವರನ್ನು ಪಕ್ಷದಿಂದ ಹೊರಹಾಕುವ ಮೊದಲು, ಅವರ ಮಗನನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುವಂತೆ ಕೇಳಲಾಯಿತು ಎಂದು ಅಹ್ಮದ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ