Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಲಡಾಖ್Image Credit source: NDTV
Follow us
ನಯನಾ ರಾಜೀವ್
|

Updated on: Aug 18, 2023 | 8:00 AM

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬುಧವಾರ ನಡೆದ ಪಕ್ಷದ ಕಾರ್ಯಕಾರಿ ಸಭೆಯ ನಂತರ ಲಡಾಖ್ ಬಿಜೆಪಿ ಮುಖ್ಯಸ್ಥ ಫುಂಚೋಕ್ ಸ್ಟಾಂಜಿನ್ ಅವರು ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಲಡಾಖ್​ನಲ್ಲಿ ಯಾವ ಧರ್ಮದವರು ಕೂಡ ಓಡಿ ಹೋಗುವುದು ಸ್ವೀಕಾರಾರ್ಹವಲ್ಲ ಹಾಗೂ ಇದು ಕೋಮು ಸೌಹಾರ್ದತೆಗೆ ಮತ್ತು ಈ ಪ್ರದೇಶದ ಜನರ ಏಕತೆಗೆ ಧಕ್ಕೆ ತಂದಂತೆ ಎಂದು ಬಿಜೆಪಿ ಹೇಳಿದೆ.

ನಜೀರ್ ಅವರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿರುವ ವಿಚಾರ ಕುರಿತಂತೆ ಪಕ್ಷ ಸ್ಪಷ್ಟನೆ ಕೇಳಿತ್ತು. ಒಂದು ತಿಂಗಳ ಹಿಂದೆ ನಜೀರ್ ಪುತ್ರ ಹಾಗೂ ಬೌದ್ಧ ಯುವತಿ ಮದುವೆಯಾಗಿದ್ದಾರೆ, ಆದರೆ ಅವರು ಎಲ್ಲಿದ್ದಾರೆ ಎನ್ನುವ ಸುಳಿವು ಸಿಕ್ಕಿಲ್ಲ.

ತನ್ನ ಮಗ ಮಂಜೂರ್ ಅಹ್ಮದ್‌ನನ್ನು ಬೌದ್ಧ ಮಹಿಳೆಯೊಂದಿಗೆ ವಿವಾಹವಾಗುವುದನ್ನು ಅವರ ಕುಟುಂಬವೂ ವಿರೋಧಿಸುತ್ತದೆ ಮತ್ತು ಕಳೆದ ಒಂದು ತಿಂಗಳಿನಿಂದ ಅವರು ಎಲ್ಲಿ ತಂಗಿದ್ದಾರೆಂದು ತಿಳಿದಿಲ್ಲ ಎಂದು ಉಚ್ಚಾಟಿತ ಬಿಜೆಪಿ ನಾಯಕ ಹೇಳಿದ್ದಾರೆ.

ಮತ್ತಷ್ಟು ಓದಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಗದೀಶ್​ ಶೆಟ್ಟರ್​ರವರ 27 ಆಪ್ತರನ್ನು ಉಚ್ಚಾಟನೆ ಮಾಡಿದ ಬಿಜೆಪಿ

ಬಿಜೆಪಿಯ ನಿಷ್ಠಾವಂತ ಹಿರಿಯ ನಾಯಕ ಅಹ್ಮದ್ ಅವರು ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರೆಗೆ ಹೋಗಿದ್ದರು, ಆ ಸಂದರ್ಭದಲ್ಲಿ ಅವರ ಮಗ ಮತ್ತು ಮಹಿಳೆ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಅವರನ್ನು ಪಕ್ಷದಿಂದ ಹೊರಹಾಕುವ ಮೊದಲು, ಅವರ ಮಗನನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುವಂತೆ ಕೇಳಲಾಯಿತು ಎಂದು ಅಹ್ಮದ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು
VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು