ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬೌದ್ಧ ಮಹಿಳೆ ಜತೆ ಓಡಿ ಹೋದ ಮಗ, ಅಪ್ಪನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಲಡಾಖ್
Image Credit source: NDTV

Updated on: Aug 18, 2023 | 8:00 AM

ಲಡಾಖ್​ ಬಿಜೆಪಿಯ ಹಿರಿಯ ನಾಯಕರೊಬ್ಬರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿ ಮದುವೆಯಾಗಿದ್ದು, ಇದರ ಪರಿಣಾಮವನ್ನು ತಂದೆ ಎದುರಿಸಬೇಕಾಗಿದೆ. ಅಪ್ಪನನ್ನು ಬಿಜೆಪಿಯು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಲಡಾಖ್​ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಜೀರ್ ಅಹ್ಮದ್(74) ಅವರ ಮಗ ಒಂದು ತಿಂಗಳ ಹಿಂದೆ ಬೌದ್ಧ ಮಹಿಳೆಯೊಂದಿಗೆ ಓಡಿ ಹೋಗಿದ್ದರು ನಂತರದ ಬೆಳವಣಿಗೆಯಲ್ಲಿ ನಜೀರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಬುಧವಾರ ನಡೆದ ಪಕ್ಷದ ಕಾರ್ಯಕಾರಿ ಸಭೆಯ ನಂತರ ಲಡಾಖ್ ಬಿಜೆಪಿ ಮುಖ್ಯಸ್ಥ ಫುಂಚೋಕ್ ಸ್ಟಾಂಜಿನ್ ಅವರು ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ. ಲಡಾಖ್​ನಲ್ಲಿ ಯಾವ ಧರ್ಮದವರು ಕೂಡ ಓಡಿ ಹೋಗುವುದು ಸ್ವೀಕಾರಾರ್ಹವಲ್ಲ ಹಾಗೂ ಇದು ಕೋಮು ಸೌಹಾರ್ದತೆಗೆ ಮತ್ತು ಈ ಪ್ರದೇಶದ ಜನರ ಏಕತೆಗೆ ಧಕ್ಕೆ ತಂದಂತೆ ಎಂದು ಬಿಜೆಪಿ ಹೇಳಿದೆ.

ನಜೀರ್ ಅವರ ಮಗ ಬೌದ್ಧ ಮಹಿಳೆ ಜತೆ ಓಡಿ ಹೋಗಿರುವ ವಿಚಾರ ಕುರಿತಂತೆ ಪಕ್ಷ ಸ್ಪಷ್ಟನೆ ಕೇಳಿತ್ತು. ಒಂದು ತಿಂಗಳ ಹಿಂದೆ ನಜೀರ್ ಪುತ್ರ ಹಾಗೂ ಬೌದ್ಧ ಯುವತಿ ಮದುವೆಯಾಗಿದ್ದಾರೆ, ಆದರೆ ಅವರು ಎಲ್ಲಿದ್ದಾರೆ ಎನ್ನುವ ಸುಳಿವು ಸಿಕ್ಕಿಲ್ಲ.

ತನ್ನ ಮಗ ಮಂಜೂರ್ ಅಹ್ಮದ್‌ನನ್ನು ಬೌದ್ಧ ಮಹಿಳೆಯೊಂದಿಗೆ ವಿವಾಹವಾಗುವುದನ್ನು ಅವರ ಕುಟುಂಬವೂ ವಿರೋಧಿಸುತ್ತದೆ ಮತ್ತು ಕಳೆದ ಒಂದು ತಿಂಗಳಿನಿಂದ ಅವರು ಎಲ್ಲಿ ತಂಗಿದ್ದಾರೆಂದು ತಿಳಿದಿಲ್ಲ ಎಂದು ಉಚ್ಚಾಟಿತ ಬಿಜೆಪಿ ನಾಯಕ ಹೇಳಿದ್ದಾರೆ.

ಮತ್ತಷ್ಟು ಓದಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಗದೀಶ್​ ಶೆಟ್ಟರ್​ರವರ 27 ಆಪ್ತರನ್ನು ಉಚ್ಚಾಟನೆ ಮಾಡಿದ ಬಿಜೆಪಿ

ಬಿಜೆಪಿಯ ನಿಷ್ಠಾವಂತ ಹಿರಿಯ ನಾಯಕ ಅಹ್ಮದ್ ಅವರು ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರೆಗೆ ಹೋಗಿದ್ದರು, ಆ ಸಂದರ್ಭದಲ್ಲಿ ಅವರ ಮಗ ಮತ್ತು ಮಹಿಳೆ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಅವರನ್ನು ಪಕ್ಷದಿಂದ ಹೊರಹಾಕುವ ಮೊದಲು, ಅವರ ಮಗನನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುವಂತೆ ಕೇಳಲಾಯಿತು ಎಂದು ಅಹ್ಮದ್ ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us