AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ

ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 25, 2022 | 9:43 AM

Share

ವ್ಯಾಯಾಮ ಮಾಡಿದ್ದು ಸಾಕು, ನಿಲ್ಲಿಸು ಎಂದು ಹೇಳಿದ ತಾಯಿಯನ್ನು ಡಂಬೆಲ್​​​ನಿಂದ  ಮಗ ಹತ್ಯೆ ಮಾಡಿದ ದುರ್ಘಟನೆ ಹೈದರಾಬಾದ್​​ನ ಸುಲ್ತಾನ್ ಬಜಾರ್​​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ಈತ ತಾಯಿಯನ್ನು ಕಾಪಾಡಲು ಬಂದ ಸೋದರಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ.  ಆರೋಪಿಯ ಹೆಸರು ಕೊಂಡಾ ಸುಧೀರ್ ಕುಮಾರ್​ (24). ಮೃತ ಮಹಿಳೆ ಹೆಸರು ಕೊಂಡಾ ಪಾಪಮ್ಮ. ಗಾಯಗೊಂಡ ಯುವತಿ ಸುಚಿತ್ರಾ. ಸುಧೀರ್ ಕುಮಾರ್ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಅಸ್ವಸ್ಥ ಎನ್ನಲಾಗಿದ್ದು, ಜನವರಿ 24ರ ತಡರಾತ್ರಿ 2 ಗಂಟೆ ಹೊತ್ತಿಗೆ ಒಂದೇ ಸಮ ವ್ಯಾಯಾಮ ಮಾಡುತ್ತಿದ್ದ. ಅದನ್ನು ನೋಡಿದ ತಾಯಿ, ಮಗನನ್ನು ಮಲಗುವಂತೆ ಹೇಳಿದರು. ಆದರೆ ಕೋಪಗೊಂಡ ಆತ ಕೈಯಲ್ಲಿ ಹಿಡಿದಿದ್ದ ಡಂಬಲ್ಸ್​ನಿಂದ ಆಕೆಗೆ ಹೊಡೆದು ಕೊಂದಿದ್ದಾನೆ. 

ಸದ್ಯ ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.  ಕೊಂಡಾ ಸುಧೀರ್​ ಶಿಕ್ಷಣ ಮುಗಿಸಿದ ಬಳಿಕ ಒಂದು ಫುಡ್​ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ವರ್ಷದ ಹಿಂದೆ ಆ ಕೆಲಸವನ್ನೂ ಬಿಟ್ಟು ಮನೆಯಲ್ಲೇ ಇರುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ಇನ್ನು ಆತನ ಮಾನಸಿಕ ಸ್ಥಿತಿ ಸ್ಥಿಮಿತದಲ್ಲಿಲ್ಲ. ಇತ್ತೀಚೆಗೆ ಕೋಟಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಕಳೆದ 7 ವರ್ಷಗಳ ಹಿಂದೆಯೇ ಆತನ ತಂದೆ ತೀರಿಕೊಂಡಿದ್ದಾರೆ. ಆಗಿನಿಂದಲೂ ತಾಯಿ, ಸೋದರಿ ಮತ್ತು ಈತ ಒಟ್ಟಿಗೇ ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?