AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ

ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 25, 2022 | 9:43 AM

Share

ವ್ಯಾಯಾಮ ಮಾಡಿದ್ದು ಸಾಕು, ನಿಲ್ಲಿಸು ಎಂದು ಹೇಳಿದ ತಾಯಿಯನ್ನು ಡಂಬೆಲ್​​​ನಿಂದ  ಮಗ ಹತ್ಯೆ ಮಾಡಿದ ದುರ್ಘಟನೆ ಹೈದರಾಬಾದ್​​ನ ಸುಲ್ತಾನ್ ಬಜಾರ್​​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ಈತ ತಾಯಿಯನ್ನು ಕಾಪಾಡಲು ಬಂದ ಸೋದರಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ.  ಆರೋಪಿಯ ಹೆಸರು ಕೊಂಡಾ ಸುಧೀರ್ ಕುಮಾರ್​ (24). ಮೃತ ಮಹಿಳೆ ಹೆಸರು ಕೊಂಡಾ ಪಾಪಮ್ಮ. ಗಾಯಗೊಂಡ ಯುವತಿ ಸುಚಿತ್ರಾ. ಸುಧೀರ್ ಕುಮಾರ್ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಅಸ್ವಸ್ಥ ಎನ್ನಲಾಗಿದ್ದು, ಜನವರಿ 24ರ ತಡರಾತ್ರಿ 2 ಗಂಟೆ ಹೊತ್ತಿಗೆ ಒಂದೇ ಸಮ ವ್ಯಾಯಾಮ ಮಾಡುತ್ತಿದ್ದ. ಅದನ್ನು ನೋಡಿದ ತಾಯಿ, ಮಗನನ್ನು ಮಲಗುವಂತೆ ಹೇಳಿದರು. ಆದರೆ ಕೋಪಗೊಂಡ ಆತ ಕೈಯಲ್ಲಿ ಹಿಡಿದಿದ್ದ ಡಂಬಲ್ಸ್​ನಿಂದ ಆಕೆಗೆ ಹೊಡೆದು ಕೊಂದಿದ್ದಾನೆ. 

ಸದ್ಯ ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.  ಕೊಂಡಾ ಸುಧೀರ್​ ಶಿಕ್ಷಣ ಮುಗಿಸಿದ ಬಳಿಕ ಒಂದು ಫುಡ್​ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ವರ್ಷದ ಹಿಂದೆ ಆ ಕೆಲಸವನ್ನೂ ಬಿಟ್ಟು ಮನೆಯಲ್ಲೇ ಇರುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ಇನ್ನು ಆತನ ಮಾನಸಿಕ ಸ್ಥಿತಿ ಸ್ಥಿಮಿತದಲ್ಲಿಲ್ಲ. ಇತ್ತೀಚೆಗೆ ಕೋಟಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಕಳೆದ 7 ವರ್ಷಗಳ ಹಿಂದೆಯೇ ಆತನ ತಂದೆ ತೀರಿಕೊಂಡಿದ್ದಾರೆ. ಆಗಿನಿಂದಲೂ ತಾಯಿ, ಸೋದರಿ ಮತ್ತು ಈತ ಒಟ್ಟಿಗೇ ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ

Follow Us
ಬೆಂಗಳೂರಿನಿಂದ ಸೈಕಲ್​​ನಲ್ಲೇ ತಿರುಪತಿ ತಲುಪಿದ ಶಾಸಕ ಸುರೇಶ್​​ ಕುಮಾರ್​​
ಬೆಂಗಳೂರಿನಿಂದ ಸೈಕಲ್​​ನಲ್ಲೇ ತಿರುಪತಿ ತಲುಪಿದ ಶಾಸಕ ಸುರೇಶ್​​ ಕುಮಾರ್​​
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’