Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ

ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jan 25, 2022 | 9:43 AM

ವ್ಯಾಯಾಮ ಮಾಡಿದ್ದು ಸಾಕು, ನಿಲ್ಲಿಸು ಎಂದು ಹೇಳಿದ ತಾಯಿಯನ್ನು ಡಂಬೆಲ್​​​ನಿಂದ  ಮಗ ಹತ್ಯೆ ಮಾಡಿದ ದುರ್ಘಟನೆ ಹೈದರಾಬಾದ್​​ನ ಸುಲ್ತಾನ್ ಬಜಾರ್​​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ಈತ ತಾಯಿಯನ್ನು ಕಾಪಾಡಲು ಬಂದ ಸೋದರಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ.  ಆರೋಪಿಯ ಹೆಸರು ಕೊಂಡಾ ಸುಧೀರ್ ಕುಮಾರ್​ (24). ಮೃತ ಮಹಿಳೆ ಹೆಸರು ಕೊಂಡಾ ಪಾಪಮ್ಮ. ಗಾಯಗೊಂಡ ಯುವತಿ ಸುಚಿತ್ರಾ. ಸುಧೀರ್ ಕುಮಾರ್ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಅಸ್ವಸ್ಥ ಎನ್ನಲಾಗಿದ್ದು, ಜನವರಿ 24ರ ತಡರಾತ್ರಿ 2 ಗಂಟೆ ಹೊತ್ತಿಗೆ ಒಂದೇ ಸಮ ವ್ಯಾಯಾಮ ಮಾಡುತ್ತಿದ್ದ. ಅದನ್ನು ನೋಡಿದ ತಾಯಿ, ಮಗನನ್ನು ಮಲಗುವಂತೆ ಹೇಳಿದರು. ಆದರೆ ಕೋಪಗೊಂಡ ಆತ ಕೈಯಲ್ಲಿ ಹಿಡಿದಿದ್ದ ಡಂಬಲ್ಸ್​ನಿಂದ ಆಕೆಗೆ ಹೊಡೆದು ಕೊಂದಿದ್ದಾನೆ. 

ಸದ್ಯ ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.  ಕೊಂಡಾ ಸುಧೀರ್​ ಶಿಕ್ಷಣ ಮುಗಿಸಿದ ಬಳಿಕ ಒಂದು ಫುಡ್​ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ವರ್ಷದ ಹಿಂದೆ ಆ ಕೆಲಸವನ್ನೂ ಬಿಟ್ಟು ಮನೆಯಲ್ಲೇ ಇರುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ಇನ್ನು ಆತನ ಮಾನಸಿಕ ಸ್ಥಿತಿ ಸ್ಥಿಮಿತದಲ್ಲಿಲ್ಲ. ಇತ್ತೀಚೆಗೆ ಕೋಟಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಕಳೆದ 7 ವರ್ಷಗಳ ಹಿಂದೆಯೇ ಆತನ ತಂದೆ ತೀರಿಕೊಂಡಿದ್ದಾರೆ. ಆಗಿನಿಂದಲೂ ತಾಯಿ, ಸೋದರಿ ಮತ್ತು ಈತ ಒಟ್ಟಿಗೇ ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ