AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ತನಗೆ ಹೇಳಿರುವನೆಂದು ಕಿರುತೆರೆ ನಟನೊಬ್ಬನ ಮಗ ಮುಂಬೈ ಪೊಲೀಸರಿಗೆ ದೂರಿದ್ದಾರೆ!

ಪೊಲೀಸರು ರೆಕಾರ್ಡ್ ಮಾಡಿಕೊಂಡಿರುವ ಹೇಳಿಕೆಯಲ್ಲಿ ನಟನ ಮಗ ಬೆದರಿಕೆ ಹಾಕಿದ ವ್ಯಕ್ತಿ ವಿಡಿಯೊ ಚ್ಯಾಟ್  ಆ್ಯಪ್ ಮೂಲಕ ತನ್ನ ಸಂಪರ್ಕಕ್ಕೆ ಬಂದನೆಂದು ಹೇಳಿದ್ದಾರೆ.

ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ತನಗೆ ಹೇಳಿರುವನೆಂದು ಕಿರುತೆರೆ ನಟನೊಬ್ಬನ ಮಗ ಮುಂಬೈ ಪೊಲೀಸರಿಗೆ ದೂರಿದ್ದಾರೆ!
ಮುಂಬೈ ಪೊಲೀಸ್​​
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Nov 21, 2021 | 12:37 AM

Share

ಮುಂಬೈ: ಹಿಂದಿ ಕಿರುತೆರೆಯ ನಟರೊಬ್ಬರ ಮಗ ಶನಿವಾರ ಬೆಳಗಿನ ಜಾವ ಮದ್ಯದ ಅಮಲಿನಲ್ಲಿ ಮುಂಬೈ ಮಹಾನಗರದ ಪೊಲೀಸ್ ಕಂಟ್ರೋಲ್ ರೂಮಿಗೆ ಫೋನ್ ಮಾಡಿ ತನ್ನೊಂದಿಗೆ ವಿಡಿಯೋ ಚಾಟ್ ನಲ್ಲಿ ಮಾತಾಡುತ್ತಿದ್ದ ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಅಂತ ದೂರಿದ್ದಾರೆ. ಪೊಲೀಸರು ಅವರ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಟನ 26-ವರ್ಷ ವಯಸ್ಸಿನ ಮಗ ಅಂಧೇರಿಯ ವರ್ಮ ನಗರದಲ್ಲಿ ವಾಸವಾಗಿದ್ದಾರೆ. ಶುಕ್ರವಾರ ತಡರಾತ್ರಿ ತಾನು ಮದ್ಯ ಸೇವಿಸಿದ್ದ ವಿಷಯವನ್ನು ಅವರು ಪೋಲಿಸರಿಗೆ ಬಹಿರಂಗಪಡಿಸಿದ್ದಾರೆ.

ಪೊಲೀಸರು ರೆಕಾರ್ಡ್ ಮಾಡಿಕೊಂಡಿರುವ ಹೇಳಿಕೆಯಲ್ಲಿ ನಟನ ಮಗ ಬೆದರಿಕೆ ಹಾಕಿದ ವ್ಯಕ್ತಿ ವಿಡಿಯೊ ಚ್ಯಾಟ್  ಆ್ಯಪ್ ಮೂಲಕ ತನ್ನ ಸಂಪರ್ಕಕ್ಕೆ ಬಂದನೆಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ವಿಶ್ವಕಪ್ ಪಂದ್ಯದ ಬಗ್ಗೆ ಅವರ ನಡುವೆ ಸಂಭಾಷಣೆ ಆರಂಭವಾದ ಬಳಿಕ ಅವನು ಭಾರತ ಪಂದ್ಯ ಸೋತ ಬಗ್ಗೆ ಪದೇಪದೆ ಮೂದಲಿಸಿದನಂತೆ. ಆಗ ಕೋಪಗೊಂಡ ಇವರು ಅವನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡರಂತೆ.

ಅದಾದ ನಂತರವೇ ಆ ವ್ಯಕ್ತಿ ಮುಂಬೈನಲ್ಲಿ ಬಾಂಬ್ ಗಳನ್ನು ಸ್ಫೋಟಿಸುವ ಬೆದರಿಕೆ ಹಾಕಿದನಂತೆ. ಆದರೆ ಎಲ್ಲಿ, ಯಾವಾಗ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲವಂತೆ.

ಅವನೊಂದಿಗೆ ಸಂಭಾಷಣೆ ಕೊನೆಗೊಂಡ ನಂತರ ಅಂದರೆ ಶನಿವಾರದ ಬೆಳಗಿನ ಜಾವ ನಟನ ಮಗ ಪೊಲೀಸ್ ಕಂಟ್ರೋಲ್ ರೂಮಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸ್ ತಂಡವೊಂದು ಅವರ ಮನೆಗೆ ತೆರಳಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಇದನ್ನೂ ಓದಿ:  ಮುಂಬಯಿಯಲ್ಲಿ ಗುರುವಾರದಿಂದ ಗರ್ಭಿಣಿ ಮಹಿಳೆಯರಿಗೂ ಕೊವಿಡ್​ ಲಸಿಕೆ ನೀಡುವ ಅಭಿಯಾನ ಆರಂಭ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ