AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ತನಗೆ ಹೇಳಿರುವನೆಂದು ಕಿರುತೆರೆ ನಟನೊಬ್ಬನ ಮಗ ಮುಂಬೈ ಪೊಲೀಸರಿಗೆ ದೂರಿದ್ದಾರೆ!

ಪೊಲೀಸರು ರೆಕಾರ್ಡ್ ಮಾಡಿಕೊಂಡಿರುವ ಹೇಳಿಕೆಯಲ್ಲಿ ನಟನ ಮಗ ಬೆದರಿಕೆ ಹಾಕಿದ ವ್ಯಕ್ತಿ ವಿಡಿಯೊ ಚ್ಯಾಟ್  ಆ್ಯಪ್ ಮೂಲಕ ತನ್ನ ಸಂಪರ್ಕಕ್ಕೆ ಬಂದನೆಂದು ಹೇಳಿದ್ದಾರೆ.

ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ತನಗೆ ಹೇಳಿರುವನೆಂದು ಕಿರುತೆರೆ ನಟನೊಬ್ಬನ ಮಗ ಮುಂಬೈ ಪೊಲೀಸರಿಗೆ ದೂರಿದ್ದಾರೆ!
ಮುಂಬೈ ಪೊಲೀಸ್​​
TV9 Web
| Edited By: |

Updated on: Nov 21, 2021 | 12:37 AM

Share

ಮುಂಬೈ: ಹಿಂದಿ ಕಿರುತೆರೆಯ ನಟರೊಬ್ಬರ ಮಗ ಶನಿವಾರ ಬೆಳಗಿನ ಜಾವ ಮದ್ಯದ ಅಮಲಿನಲ್ಲಿ ಮುಂಬೈ ಮಹಾನಗರದ ಪೊಲೀಸ್ ಕಂಟ್ರೋಲ್ ರೂಮಿಗೆ ಫೋನ್ ಮಾಡಿ ತನ್ನೊಂದಿಗೆ ವಿಡಿಯೋ ಚಾಟ್ ನಲ್ಲಿ ಮಾತಾಡುತ್ತಿದ್ದ ವ್ಯಕ್ತಿಯೊಬ್ಬ ಮುಂಬೈನಲ್ಲಿ ಬಾಂಬ್ ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಅಂತ ದೂರಿದ್ದಾರೆ. ಪೊಲೀಸರು ಅವರ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಟನ 26-ವರ್ಷ ವಯಸ್ಸಿನ ಮಗ ಅಂಧೇರಿಯ ವರ್ಮ ನಗರದಲ್ಲಿ ವಾಸವಾಗಿದ್ದಾರೆ. ಶುಕ್ರವಾರ ತಡರಾತ್ರಿ ತಾನು ಮದ್ಯ ಸೇವಿಸಿದ್ದ ವಿಷಯವನ್ನು ಅವರು ಪೋಲಿಸರಿಗೆ ಬಹಿರಂಗಪಡಿಸಿದ್ದಾರೆ.

ಪೊಲೀಸರು ರೆಕಾರ್ಡ್ ಮಾಡಿಕೊಂಡಿರುವ ಹೇಳಿಕೆಯಲ್ಲಿ ನಟನ ಮಗ ಬೆದರಿಕೆ ಹಾಕಿದ ವ್ಯಕ್ತಿ ವಿಡಿಯೊ ಚ್ಯಾಟ್  ಆ್ಯಪ್ ಮೂಲಕ ತನ್ನ ಸಂಪರ್ಕಕ್ಕೆ ಬಂದನೆಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ವಿಶ್ವಕಪ್ ಪಂದ್ಯದ ಬಗ್ಗೆ ಅವರ ನಡುವೆ ಸಂಭಾಷಣೆ ಆರಂಭವಾದ ಬಳಿಕ ಅವನು ಭಾರತ ಪಂದ್ಯ ಸೋತ ಬಗ್ಗೆ ಪದೇಪದೆ ಮೂದಲಿಸಿದನಂತೆ. ಆಗ ಕೋಪಗೊಂಡ ಇವರು ಅವನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡರಂತೆ.

ಅದಾದ ನಂತರವೇ ಆ ವ್ಯಕ್ತಿ ಮುಂಬೈನಲ್ಲಿ ಬಾಂಬ್ ಗಳನ್ನು ಸ್ಫೋಟಿಸುವ ಬೆದರಿಕೆ ಹಾಕಿದನಂತೆ. ಆದರೆ ಎಲ್ಲಿ, ಯಾವಾಗ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲವಂತೆ.

ಅವನೊಂದಿಗೆ ಸಂಭಾಷಣೆ ಕೊನೆಗೊಂಡ ನಂತರ ಅಂದರೆ ಶನಿವಾರದ ಬೆಳಗಿನ ಜಾವ ನಟನ ಮಗ ಪೊಲೀಸ್ ಕಂಟ್ರೋಲ್ ರೂಮಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸ್ ತಂಡವೊಂದು ಅವರ ಮನೆಗೆ ತೆರಳಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಇದನ್ನೂ ಓದಿ:  ಮುಂಬಯಿಯಲ್ಲಿ ಗುರುವಾರದಿಂದ ಗರ್ಭಿಣಿ ಮಹಿಳೆಯರಿಗೂ ಕೊವಿಡ್​ ಲಸಿಕೆ ನೀಡುವ ಅಭಿಯಾನ ಆರಂಭ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ