Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ; ಟಿಆರ್​ಎಸ್​ ಮುಖಂಡನ ಪುತ್ರ, ಮತ್ತವನ ಸ್ನೇಹಿತ ಅರೆಸ್ಟ್​

ಭಾನುವಾರ ಎಚ್ಚರಗೊಂಡ ಯುವತಿ ಅದು ಹೇಗೋ ಪಾರಾಗಿ ಬಂದು, ತನ್ನ ತಾಯಿಯ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ನಂತರ ತಾಯಿ-ಮಗಳು ಇಬ್ಬರೂ ಪೊಲೀಸರ ಬಳಿ ಬಂದು ನಡೆದ ವಿಷಯವನ್ನು ತಿಳಿಸಿದ್ದಾರೆ.

ಯುವತಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ; ಟಿಆರ್​ಎಸ್​ ಮುಖಂಡನ ಪುತ್ರ, ಮತ್ತವನ ಸ್ನೇಹಿತ ಅರೆಸ್ಟ್​
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 19, 2022 | 12:17 PM

ಹೈದರಾಬಾದ್: ಇಲ್ಲಿನ ಸೂರ್ಯಪೇಟ್​ ಜಿಲ್ಲೆಯಲ್ಲಿರುವ ಕೊಡಾಡ್​ ಎಂಬ ಪಟ್ಟಣದ ವಾರ್ಡ್​ವೊಂದರ ಕೌನ್ಸಿಲರ್​ ಆಗಿರುವ ಟಿಆರ್​ಎಸ್​ ನಾಯಕನ ಪುತ್ರ ಮತ್ತು ಆತನ ಸ್ನೇಹಿತ ಸೇರಿ, 20ವರ್ಷದ ಯುವತಿಯನ್ನು ಅಪಹರಿಸಿ, ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈಕೆ ಶುಕ್ರವಾರ ತನ್ನ ಸಂಬಂಧಿಯೊಬ್ಬರ ಮನೆಗೆ ಹೋಗಿದ್ದಳು. ಅಲ್ಲಿಂದಲೇ ಅಪಹರಿಸಿ, ಪ್ರತ್ಯೇಕವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ 20ವರ್ಷದ ಯುವತಿ ಕೊಡಾಡ್​​ನಲ್ಲಿ ತನ್ನ ತಾಯಿಯೊಂದಿಗೆ ವಾಸವಾಗಿದ್ದಳು. ಟಿಆರ್​ಎಸ್​ ವಾರ್ಡ್​ ಕೌನ್ಸಿಲರ್​ ಪಾಶಾ ಎಂಬುವರ ಪುತ್ರ ಮೊಹಮ್ಮದ್​ ಗೌಸ್ ಪಾಶಾ ಮತ್ತು ಅವರ ಸ್ನೇಹಿತ ಸಾಯಿರಾಮ್​ ರೆಡ್ಡಿ ಆರೋಪಿಗಳು. ಇವರಿಬ್ಬರೂ ಯುವತಿಯನ್ನು ಆಟೋ ರಿಕ್ಷಾದಲ್ಲಿ ಕಿಡ್ನ್ಯಾಪ್​ ಮಾಡಿದ್ದಾರೆ. ಅದಾದ ಬಳಿಕ ಆಕೆಗೆ ಮತ್ತು ಬರಿಸುವ ಔಷಧಿ ನೀಡಿ, ಯಾರೂ ಇಲ್ಲದ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಮತ್ತು ಆಕೆಯನ್ನು ಅಲ್ಲಿಯೇ ಇಟ್ಟಿದ್ದರು.

ಭಾನುವಾರ ಎಚ್ಚರಗೊಂಡ ಯುವತಿ ಅದು ಹೇಗೋ ಪಾರಾಗಿ ಬಂದು, ತನ್ನ ತಾಯಿಯ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ನಂತರ ತಾಯಿ-ಮಗಳು ಇಬ್ಬರೂ ಪೊಲೀಸರ ಬಳಿ ಬಂದು ನಡೆದ ವಿಷಯವನ್ನು ತಿಳಿಸಿದ್ದಾರೆ. ಕೊಡಾಡ್​ ಸರ್ಕಲ್​ ಇನ್ಸ್​​ಪೆಕ್ಟರ್​ ನರಸಿಂಹ ರಾವ್​ ಈ ಬಗ್ಗೆ ಮಾಹಿತಿ ನೀಡಿದ್ದು, ಸಂತ್ರಸ್ತೆ ಮತ್ತು ಆಕೆಯ ತಾಯಿ ನೀಡಿದ ದೂರಿನ ಅನ್ವಯ ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದೂ ಹೇಳಿದ್ದಾರೆ. ಪ್ರಕರಣವನ್ನು ತನಿಖೆಗೆ ಒಳಪಡಿಸಲಾಗಿದ್ದು, ಮೊಹಮ್ಮದ್​ ಗೌಸ್ ಪಾಶಾ ಮತ್ತು ಅವರ ಸ್ನೇಹಿತ ಸಾಯಿರಾಮ್​ ರೆಡ್ಡಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅವರಿಬ್ಬರನ್ನೂ ವಿಚಾರಣೆಗೂ ಒಳಪಡಿಸಲಾಗಿದೆ.

ಇದನ್ನೂ ಓದಿ: ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ; ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಿಸುವುದಾಗಿ ಭರವಸೆ

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ