AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿಗೆ ಹೊಡಿಬೇಡಮ್ಮಾ; ವೃದ್ಧೆಯನ್ನು ಥಳಿಸುತ್ತಿದ್ದ ಅಮ್ಮನಿಗೆ ಅಂಗಲಾಚಿದ ಮಗ

ಪಂಜಾಬ್ ಮಹಿಳೆಯೊಬ್ಬರು ಮನೆಯಲ್ಲಿ ತನ್ನ ವೃದ್ಧ ಅತ್ತೆಯನ್ನು ಹೊಡೆದಿದ್ದಾರೆ. ಆಗ ಆಕೆಯ ಮಗ ಅಜ್ಜಿಗೆ ಹೊಡೆಯಬೇಡಮ್ಮ ಎಂದು ಅಮ್ಮನನ್ನು ಬೇಡಿಕೊಂಡಿದ್ದಾನೆ. ಆದರೂ ಆ ಮಹಿಳೆ ಸುಮ್ಮನಾಗಿಲ್ಲ. ಗಂಡ ತೀರಿಹೋದ ನಂತರ ಆ ಮಹಿಳೆ ಅತ್ತೆಯನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಳು. ಆದರೆ, ಮೊಮ್ಮಗನಿಗೆ ಅಜ್ಜಿಯೆಂದರೆ ಇಷ್ಟವಿತ್ತು. ಆತ ಅಮ್ಮ ಅಜ್ಜಿಯನ್ನು ಥಳಿಸುತ್ತಿರುವುದನ್ನು ಸಹಿಸಿಕೊಳ್ಳುತ್ತಿರಲಿಲ್ಲ.

ಅಜ್ಜಿಗೆ ಹೊಡಿಬೇಡಮ್ಮಾ; ವೃದ್ಧೆಯನ್ನು ಥಳಿಸುತ್ತಿದ್ದ ಅಮ್ಮನಿಗೆ ಅಂಗಲಾಚಿದ ಮಗ
Punjab Crime News
ಸುಷ್ಮಾ ಚಕ್ರೆ
|

Updated on: Oct 02, 2025 | 9:51 PM

Share

ಪಂಜಾಬ್, ಅಕ್ಟೋಬರ್ 2: ಪಂಜಾಬಿನಲ್ಲಿ ಗಂಡ ತೀರಿಹೋದ ನಂತರ ಅತ್ತೆ ಹಾಗೂ ತನ್ನ ಮಗನ ಜೊತೆ ವಾಸಿಸುತ್ತಿದ್ದ ಮಹಿಳೆಯೊಬ್ಬಳು ತನ್ನ ಅತ್ತೆಗೆ ಹಿಗ್ಗಾಮುಗ್ಗಾ ಥಳಿಸಿ ಹಿಂಸೆ ನೀಡುತ್ತಿದ್ದಳು. ಈ ಬಗ್ಗೆ ಗುರ್ಬಜನ್ ಕೌರ್ ದೂರು ನೀಡಿದ್ದು, ಆ ದೂರಿನಲ್ಲಿ ತನ್ನ ಸೊಸೆ ತನ್ನ ಮೇಲೆ ಪದೇ ಪದೇ ದೌರ್ಜನ್ಯ ಎಸಗುತ್ತಿದ್ದಾಳೆ ಮತ್ತು ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಒತ್ತಡ ಹೇರುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ಪಂಜಾಬ್‌ನ ಗುರುದಾಸ್ಪುರ್ ಜಿಲ್ಲೆಯಲ್ಲಿ ವೈರಲ್ ಆದ ವಿಡಿಯೋವೊಂದರಲ್ಲಿ ಮಹಿಳೆ ತನ್ನ ವೃದ್ಧ ಅತ್ತೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಿರುವುದನ್ನು ನೋಡಬಹುದು. ಆಕೆಯ ಮಗ ತನ್ನ ಅಜ್ಜಿಗೆ ಹೊಡೆಯುವುದನ್ನು ನಿಲ್ಲಿಸುವಂತೆ ಅಮ್ಮನ ಬಳಿ ಬೇಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ದೆಹಲಿಯಲ್ಲಿ ದುರ್ಗಾ ಪೂಜೆ ವೇಳೆ ಧುನುಚಿ ನಾಚ್ ಪ್ರದರ್ಶಿಸಿದ ಬಿಜೆಪಿ ನಾಯಕಿ ಸ್ಮೃತಿ ಇರಾನಿ

“ಮುಮ್ಮಾ ನಾ ಕರೋ (ಅಮ್ಮ, ಹಾಗೆ ಹೊಡೆಯಬೇಡಿ)” ಎಂದು ಆ ಹುಡುಗ ತನ್ನ ಫೋನ್‌ನಲ್ಲಿ ಆ ಘಟನೆಯನ್ನು ರೆಕಾರ್ಡ್ ಮಾಡುತ್ತಾ ಪಂಜಾಬಿಯಲ್ಲಿ ಹೇಳುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋದಲ್ಲಿ ಹರ್ಜೀತ್ ಕೌರ್ ಎಂಬ ಮಹಿಳೆ ತನ್ನ ಅತ್ತೆ ಗುರ್ಬಜನ್ ಕೌರ್ ಅವರ ಕೂದಲನ್ನು ಹಿಡಿದು ಎಳೆದುಕೊಂಡು ಹೋಗಿ ಹೊಡೆಯುತ್ತಿರುವುದು ರೆಕಾರ್ಡ್ ಆಗಿದೆ.

ವಿಧವೆಯಾದ ಗುರ್ಬಜನ್ ಕೌರ್ ತನ್ನ ಪೊಲೀಸ್ ದೂರಿನಲ್ಲಿ, ತನ್ನ ಸೊಸೆ ತನ್ನ ಮೇಲೆ ಪದೇ ಪದೇ ದೌರ್ಜನ್ಯ ಎಸಗುತ್ತಿರುವುದಾಗಿ ಮತ್ತು ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಒತ್ತಡ ಹೇರುತ್ತಿರುವುದಾಗಿ ಆರೋಪಿಸಿದ್ದಾರೆ. ವಿಡಿಯೋ ರೆಕಾರ್ಡ್ ಮಾಡಿದ ಅವರ ಮೊಮ್ಮಗ ಚರತ್‌ವೀರ್ ಸಿಂಗ್, ಇದು ನಮ್ಮ ಮನೆಯಲ್ಲಿ ದಿನವೂ ನಡೆಯುವ ಘಟನೆ. ನನ್ನ ತಾಯಿ ಮದ್ಯ ಸೇವಿಸಿದ ನಂತರ ಆಗಾಗ ನನ್ನ ಅಜ್ಜಿಯನ್ನು ಹೊಡೆಯುತ್ತಿದ್ದರು ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್