AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonali Phogat Murder Case: ಫೋಗಟ್ ಸೇವಿಸಿದ ಜ್ಯೂಸ್​ನಲ್ಲಿ ನಾವೇ ವಿಷ ಬೆರೆಸಿದ್ದು ಎಂದು ಒಪ್ಪಿಕೊಂಡ ಆರೋಪಿಗಳು

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಆರೋಪಿ ಸುಧೀರ್ ಸಂಗ್ವಾನ್ ಮತ್ತು ಅವರ ಸಹವರ್ತಿ ಸುಖ್ವಿಂದರ್ ಸಿಂಗ್ ಅವರು ಕ್ಲಬ್‌ನಲ್ಲಿ ಸೋನಾಲಿ ಫೋಗಟ್ ಜೊತೆ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಅವರಲ್ಲಿ ಒಬ್ಬರು ಆಕೆ ಜ್ಯೂಸ್​ನಲ್ಲಿ ವಿಷವನ್ನು ಹಾಕಿದ್ದಾರೆ ಎಂದು ವಿಡಿಯೋದಲ್ಲಿ ಕಂಡುಬಂದಿದೆ ಎಂದು ಪೊಲೀಸ್ ಮಹಾನಿರೀಕ್ಷಕ ತಿಳಿಸಿದ್ದಾರೆ.

Sonali Phogat Murder Case: ಫೋಗಟ್ ಸೇವಿಸಿದ ಜ್ಯೂಸ್​ನಲ್ಲಿ ನಾವೇ ವಿಷ ಬೆರೆಸಿದ್ದು ಎಂದು ಒಪ್ಪಿಕೊಂಡ ಆರೋಪಿಗಳು
Sonali Phogat
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 26, 2022 | 5:14 PM

Share

ದೆಹಲಿ: ಸೋನಾಲಿ ಫೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗಳು ನಡೆಯುತ್ತಿದೆ. ಬಿಜೆಪಿ ನಾಯಕನ ಆಪ್ತ ಸಹಾಯಕ ಸುಧೀರ್ ಸಾಂಗ್ವಾನ್ ಮತ್ತು ಅವರ ಸ್ನೇಹಿತ ಸುಖವಿಂದರ್ ವಾಸಿ ಅವರು ಉದ್ದೇಶಪೂರ್ವಕವಾಗಿ ಆಕೆಯ ಜ್ಯೂಸ್​ನಲ್ಲಿ ವಿಷವನ್ನು ಹಾಕಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಗೋವಾ ಪೊಲೀಸರು ಶುಕ್ರವಾರ ಹೇಳಿದ್ದಾರೆ. “

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಆರೋಪಿ ಸುಧೀರ್ ಸಂಗ್ವಾನ್ ಮತ್ತು ಅವರ ಸಹವರ್ತಿ ಸುಖ್ವಿಂದರ್ ಸಿಂಗ್ ಅವರು ಕ್ಲಬ್‌ನಲ್ಲಿ ಸೋನಾಲಿ ಫೋಗಟ್ ಜೊತೆ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಬಲವಂತವಾಗಿ ಜ್ಯೂಸ್ ಕುಡಿಯುವಂತೆ . ಬಲವಂತ ಮಾಡುತ್ತಿರುವುದು ವಿಡಿಯೋದಲ್ಲಿ ತಿಳಿದು ಬಂದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಓಂವಿರ್ ಸಿಂಗ್ ಬಿಷ್ಣೋಯ್ ಹೇಳಿದ್ದಾರೆ. ಸುಖ್ವಿಂದರ್ ಮತ್ತು ಸುಧೀರ್ ಅವರು ಉದ್ದೇಶಪೂರ್ವಕವಾಗಿ ಜ್ಯೂಸ್​ಗೆ ವಿಷವನ್ನು ಹಾಕಿ ಸೋನಾಲಿ ಫೋಗಟ್ ಕುಡಿಯುವಂತೆ ಮಾಡಿದ್ದಾರೆ ಎಂದು ಒಪ್ಪಿಕೊಂಡರು.

ಸೋನಾಲಿ ಫೋಗಟ್ ಸಾವಿನ ಪ್ರಕರಣ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗಳು

  1. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಆರೋಪಿಗಳು ಪತ್ತೆಯಾಗಿದ್ದು, ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
  2. ಎಫ್‌ಎಸ್‌ಎಲ್‌ನ ತಜ್ಞರನ್ನು ಕರೆಯಲಾಗಿದೆ. ಹೆಚ್ಚಿನ ವಿಚಾರಣೆಗಾಗಿ, ಹೆಚ್ಚಿನ ಸಾಕ್ಷ್ಯಗಳನ್ನು ಪಡೆಯಲು ಆರೋಪಿಗಳನ್ನು ವಿವಿಧ ಸ್ಥಳಗಳಿಗೆ ತಂಡದೊಂದಿಗೆ ಕಳುಹಿಸಲಾಗುವುದು
  3. ಆಕೆಯ ಶವಪರೀಕ್ಷೆ ವರದಿಯು ಫೋಗಟ್ ಅವರ ದೇಹದ ಮೇಲೆ ಬಲದ ಗಾಯಗಳು ಆಗಿವೆ ಎಂದು ಬಹಿರಂಗಪಡಿಸಿತು.
  4. ಆಕೆಯ ಶವಪರೀಕ್ಷೆಯನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಫೋಗಟ್ ಅವರ ದೇಹವನ್ನು ನಡೆಸಲಾಯಿತು.
  5. ಪೊಲೀಸರ ಪ್ರಕಾರ, ಫೋಗಟ್​ಗೆ ಸೋಮವಾರ ರಾತ್ರಿ ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಮರುದಿನ ಬೆಳಿಗ್ಗೆ (ಮಂಗಳವಾರ), 8 ಗಂಟೆ ಸುಮಾರಿಗೆ ಅಂಜುನಾದ ಸೇಂಟ್ ಆಂಥೋನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವಳು ನಿಧನರಾಗಿದ್ದರೆ ಎಂದು ಹೇಳಲಾಗಿದೆ.
  6. ಫೋಗಟ್ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಅಂಜುನಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
  7. ಸೋನಾಲಿ ಫೋಗಟ್ ಸಹೋದರ ರಿಂಕು ಢಾಕಾ ನೀಡಿದ ದೂರಿನ ಮೇರೆಗೆ ಗುರುವಾರ ಪ್ರಕರಣ ದಾಖಲಿಸಲಾಗಿದೆ. ರಿಂಕು ಢಾಕಾ ಇಬ್ಬರು ವ್ಯಕ್ತಿಗಳ ವಿರುದ್ಧ ಆರೋಪಗಳನ್ನು ಮಾಡಿದ್ದರು. ಈ ದೂರಿನ ಆಧಾರದಲ್ಲಿ ಅವರಿಬ್ಬರನ್ನು ತನಿಖೆ ನಡೆಲಾಗಿತ್ತು ಎಂದು ಬಿಷ್ಣೋಯ್ ಹೇಳಿದರು.
  8. ಆಗಸ್ಟ್ 22 ರಂದು ಗೋವಾಕ್ಕೆ ಬಂದಿದ್ದ ಆಕೆ ಅಂಜುನಾ ಹೋಟೆಲ್‌ನಲ್ಲಿ ತಂಗಿದ್ದಳು. ಆರೋಪಿಗಳು ಸಿನಿಮಾ ಚಿತ್ರೀಕರಣದ ನೆಪದಲ್ಲಿ ಆಕೆಯನ್ನು ಗೋವಾಕ್ಕೆ ಕರೆತಂದಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
  9. ಸುಧೀರ್ ಸಗ್ವಾನ್ (ಫೋಗಟ್‌ನ ಪಿಎ) ನಮಗೆ ಆಗಸ್ಟ್ 24 ರಂದು ಚಲನಚಿತ್ರದ ಶೂಟಿಂಗ್ ಇತ್ತು ಎಂದು ಹೇಳಿದರು. ಆದರೆ ಆಗಸ್ಟ್ 22 ಮತ್ತು 23ರಂದು ಎರಡು ದಿನಗಳ ಕಾಲ ಹೋಟೆಲ್ ರೂಮ್ ಬುಂಕ್ ಮಾಡಲಾಗಿತ್ತು. ಯಾವುದೇ ಚಲನಚಿತ್ರ ಚಿತ್ರೀಕರಣ ಇರಲಿಲ್ಲ. ನಾವು ಇಲ್ಲಿ ಯಾವುದೇ ನಟ ಅಥವಾ ಚಲನಚಿತ್ರದ ಚಿತ್ರೀಕರಣವನ್ನು ನೋಡಿಲ್ಲ ಎಂದು ಸೋನಾಲಿ ಫೋಗಟ್ ಅವರ ಸಹೋದರ ರಿಂಕು ಧಾಕಾ.
  10. ಆರೋಪಿಯೊಬ್ಬನೊಂದಿಗೆ ತನ್ನ ಸಹೋದರಿ ನೃತ್ಯ ಮಾಡುತ್ತಿರುವ ವಿಡಿಯೋ ಗುರುಗ್ರಾಮದಿಂದ ಬಂದಿದ್ದು ಗೋವಾದಿಂದಲ್ಲ ಎಂದು ಅವರು ಹೇಳಿದ್ದಾರೆ.

Published On - 5:14 pm, Fri, 26 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್