AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ಸೋನಿಯಾ ದಾಖಲು

ಹೊಟ್ಟೆನೋವು, ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನ ದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ದೆಹಲಿಯಲ್ಲಿಂದು ಮೋದಿ ಱಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪೂರ್ವ ದೆಹಲಿಯ ಕರಕೂರಡೂಮಾದಲ್ಲಿಂದು ಪ್ರಧಾನಿ ಮೋದಿ ಮೊದಲ ಱಲಿ ನಡೆಸಲಿದ್ದಾರೆ. ನಾಳೆ ದ್ವಾರಕಾ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, 11ನೇ ತಾರೀಖು ಫಲಿತಾಂಶ […]

ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ಸೋನಿಯಾ ದಾಖಲು
ಸಾಧು ಶ್ರೀನಾಥ್​
|

Updated on: Feb 03, 2020 | 6:58 AM

Share

ಹೊಟ್ಟೆನೋವು, ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನ ದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.

ದೆಹಲಿಯಲ್ಲಿಂದು ಮೋದಿ ಱಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪೂರ್ವ ದೆಹಲಿಯ ಕರಕೂರಡೂಮಾದಲ್ಲಿಂದು ಪ್ರಧಾನಿ ಮೋದಿ ಮೊದಲ ಱಲಿ ನಡೆಸಲಿದ್ದಾರೆ. ನಾಳೆ ದ್ವಾರಕಾ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, 11ನೇ ತಾರೀಖು ಫಲಿತಾಂಶ ಹೊರಬೀಳಲಿದೆ.

ಮೂರು ಕಚೇರಿಗಳು ಶಿಫ್ಟ್: ಆಂಧ್ರಕ್ಕೆ 3 ರಾಜಧಾನಿ ಘೋಷಿಸಿದ್ದ ಸರ್ಕಾರ ಈಗ ಮತ್ತೊಂದು ತೀರ್ಮಾನ ಕೈಗೊಂಡಿದೆ. ಅಮರಾವತಿಯಿಂದ ವಿಚಾರಣಾ ಆಯುಕ್ತರು ಸೇರಿ 3ಕಚೇರಿಗಳನ್ನು ಕರ್ನೂಲ್‌ಗೆ ಸ್ಥಳಾಂತರಿಸಲು ಮುಂದಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆಡಳಿತದ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹ ಪಟ್ಟ: ಮೋದಿ ವಿರುದ್ಧ ಯಾರಾದರೂ ಮಾತನಾಡಿದರೆ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗುತ್ತಿದೆ ಅಂತಾ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಅಲ್ದೆ, ಜೈಲ್ ಭರೋ ಆಂದೋಲನ ಪ್ರಾರಂಭಿಸುವ ಸಮಯ ಬರಲಿದ್ದು, ಜನ ರಸ್ತೆಗಿಳಿದ್ರೆ ಜೈಲುಗಳು ಸಾಕಾಗಲ್ಲ ಅಂತಾನೂ ವಾಗ್ದಾಳಿ ನಡೆಸಿದ್ದಾರೆ.