AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ರಾಜ್ಯಗಳ ಹೊಣೆ ಐವರು ಹಿರಿಯ ನಾಯಕರಿಗೆ ಕೊಟ್ಟ ಸೋನಿಯಾ ಗಾಂಧಿ; ಚುನಾವಣೋತ್ತರ ಪರಿಸ್ಥಿತಿ ಪರಿಶೀಲನೆಗೆ ಸೂಚನೆ

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜಿ23 ನಾಯಕರು ಸ್ವಲ್ಪ ಕಟುವಾಗಿಯೇ ವಿಮರ್ಶೆ ಮಾಡುತ್ತಿದ್ದಾರೆ. ಕಾಂಗ್ರೆಸ್​ ಒಂದಾಗಿರಲಿ. ಆದರೆ ಗಾಂಧಿ ಕುಟುಂಬಕ್ಕೆ ತುಂಬ ನಿಷ್ಠರಾಗಿರುವವರನ್ನು ಪಕ್ಷದ ಆಯಕಟ್ಟಿನ ಸ್ಥಾನಗಳಿಂದ ತೆಗೆಯಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಐದು ರಾಜ್ಯಗಳ ಹೊಣೆ ಐವರು ಹಿರಿಯ ನಾಯಕರಿಗೆ ಕೊಟ್ಟ ಸೋನಿಯಾ ಗಾಂಧಿ; ಚುನಾವಣೋತ್ತರ ಪರಿಸ್ಥಿತಿ ಪರಿಶೀಲನೆಗೆ ಸೂಚನೆ
ಸೋನಿಯಾ ಗಾಂಧಿ (ಸಂಗ್ರಹ ಚಿತ್ರ)
TV9 Web
| Updated By: Lakshmi Hegde|

Updated on: Mar 17, 2022 | 12:34 PM

Share

ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್​​ಗೀಗ ಪಕ್ಷದೊಳಗಿನ ಪರಿಸ್ಥಿತಿಯನ್ನು ಎಷ್ಟು ಪರಾಮರ್ಶಿಸಿದರೂ ಸಾಕಾಗುತ್ತಿಲ್ಲ. ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯೂಸಿ ಸಭೆ ನಡೆದಿದೆ. ಸದ್ಯದ ಮಟ್ಟಿಗೆ ಸೋನಿಯಾ ಗಾಂಧಿಯವರೇ ಕಾಂಗ್ರೆಸ್​ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅದರ ಬೆನ್ನಲ್ಲೇ ಐದೂ ರಾಜ್ಯಗಳ ಅಂದರೆ ಗೋವಾ, ಪಂಜಾಬ್​, ಮಣಿಪುರ, ಉತ್ತರ ಪ್ರದೇಶ, ಉತ್ತರಾಖಂಡ  ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆಯನ್ನೂ ಪಡೆದಿದ್ದಾರೆ. ಇದೀಗ ಈ ಐದು ರಾಜ್ಯಗಳಲ್ಲಿ ಚುನಾವಣೆ ನಂತರ ಇರುವ ಪರಿಸ್ಥಿತಿ ಪರಿಶೀಲನೆ ಮಾಡುವಂತೆ ಐವರು ಹಿರಿಯ ನಾಯಕರನ್ನು ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ.  ಪ್ರಾದೇಶಿಕವಾಗಿ ಸಾಂಸ್ಥಿಕ ಬದಲಾವಣೆಗಳನ್ನು ಮಾಡುವ ನಿಟ್ಟಿನಲ್ಲಿ ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂದು ಮೌಲ್ಯಮಾಪನ ಮಾಡಿ ಎಂದೂ ಹೇಳಿದ್ದಾರೆ.

ಅದರಂತೆ ರಾಜ್ಯ ಸಭಾ ಸದಸ್ಯರಾದ ರಜನಿ ಪಾಟೀಲ್​ ಗೋವಾ, ಜೈರಾಮ್​ ರಮೇಶ್​ ಮಣಿಪುರ, ಅಜಯ್​ ಮೇಕನ್​ ಪಂಜಾಬ್​, ಜಿತೇಂದ್ರ ಸಿಂಗ್​ ಉತ್ತರ ಪ್ರದೇಶ ಮತ್ತು ಅವಿನಾಶ್​ ಪಾಂಡೆ ಉತ್ತರಾಖಂಡ್​​ನ ರಾಜಕೀಯ ಸ್ಥಿತಿ ಮೌಲ್ಯಮಾಪನ ಮಾಡಲಿದ್ದು, ಅಲ್ಲಿ ಪಕ್ಷ ಸಂಘಟನೆ, ಪಕ್ಷದ ಅಭಿವೃದ್ಧಿಗೆ ಏನೆಲ್ಲ ಕ್ರಮ ಕೈಗೊಳ್ಳಬಹುದೆಂದು ಪರಿಶೀಲನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್​ ಮೂಲಗಳಿಂತ ಮಾಹಿತಿ ಲಭ್ಯವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ ಕಾಂಗ್ರೆಸ್​ಗೆ ಈಗಿನ ವಿಧಾನಸಭೆ ಚುನಾವಣೆಯೂ ಶಾಕ್​ ನೀಡಿದೆ. ಪಂಜಾಬ್​​ನಲ್ಲಿ ಆಡಳಿತದಲ್ಲಿದ್ದ ಸರ್ಕಾರವಾಗಿದ್ದರೂ, ಈ ಸಲ ಸೋತಿದೆ.

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜಿ23 ನಾಯಕರು ಸ್ವಲ್ಪ ಕಟುವಾಗಿಯೇ ವಿಮರ್ಶೆ ಮಾಡುತ್ತಿದ್ದಾರೆ. ಕಾಂಗ್ರೆಸ್​ ಒಂದಾಗಿರಲಿ. ಆದರೆ ಗಾಂಧಿ ಕುಟುಂಬಕ್ಕೆ ತುಂಬ ನಿಷ್ಠರಾಗಿರುವವರನ್ನು ಪಕ್ಷದ ಆಯಕಟ್ಟಿನ ಸ್ಥಾನಗಳಿಂದ ತೆಗೆಯಬೇಕು ಎಂದು ಇವರು ಒತ್ತಾಯಿಸುತ್ತಿದ್ದಾರೆ. ಈ ಜಿ23 ನಾಯಕರು ನಿನ್ನೆ ಹಿರಿಯ ನಾಯಕ ಗುಲಾಂ ನಬಿ ಆಜಾದ್ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಸಂಸದ ಶಶಿ ತರೂರ್​ ಕೂಡ ಭಾಗವಹಿಸಿದ್ದರು. ಸದ್ಯ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತುಸು ಹೆಚ್ಚಾಗಿವೆ.

ಇದನ್ನೂ ಓದಿ:ಶಿರಸಿ ಮಾರಿಕಾಂಬೆ ರಥದ ಬಳಿ ತಲುಪಿತು ಅಪ್ಪು ಫೋಟೋ; ಜಾತ್ರೆಯಲ್ಲಿ ಅಭಿಮಾನ ಮೆರೆದ ಪುನೀತ್​ ಫ್ಯಾನ್ಸ್​

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ