Sonia Gandhi: ಶೀಘ್ರದಲ್ಲೇ ಪ್ರಕಟವಾಗಲಿದೆ ಸೋನಿಯಾ ಗಾಂಧಿ ಆತ್ಮಕತೆ

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥನ ಶೀಘ್ರದಲ್ಲೇ ಪ್ರಕಟವಾಗಲಿದ್ದು, ಇದರ ಕೆಲಸ ನಡೆಯುತ್ತಿದೆ. ಈಗಾಗಲೇ ಆತ್ಮಚರಿತ್ರೆಯ ಪುಸ್ತಕ ಪ್ರಕಟಣೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವರದಿಗಳು ಹೇಳಿವೆ. ಹಲವು ವರ್ಷಗಳಿಂದ ಸೋನಿಯಾ ಗಾಂಧಿ ಆತ್ಮಚರಿತ್ರೆಯ ಕೆಲಸ ನಡೆಯುತ್ತಿದ್ದು, ಕೊನೆಗೂ ಅದು ಅಂತಿಮ ಹಂತ ತಲುಪಿದೆ. ಇದು ನೆಹರು ಕುಟುಂಬದ ಮೊದಲ ಸಮಗ್ರ ಆತ್ಮಕತೆಯಾಗಿದೆ.

Sonia Gandhi: ಶೀಘ್ರದಲ್ಲೇ ಪ್ರಕಟವಾಗಲಿದೆ ಸೋನಿಯಾ ಗಾಂಧಿ ಆತ್ಮಕತೆ
ಸೋನಿಯಾ ಗಾಂಧಿ
Follow us
|

Updated on:Oct 05, 2024 | 10:51 PM

ನವದೆಹಲಿ: ಸೋನಿಯಾ ಗಾಂಧಿಯವರ ಆತ್ಮಚರಿತ್ರೆಯ ಕೆಲಸಗಳು ಹಲವು ವರ್ಷಗಳಿಂದ ನಡೆಯುತ್ತಿವೆ. ಕೊನೆಗೂ ಇದೀಗ ಅದು ಪ್ರಕಟಣೆಗೆ ಅಣಿಯಾಗಿದೆ. ಆದರೆ, ಆತ್ಮಕಥನದ ಪ್ರಕಟಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಸೋನಿಯಾ ಗಾಂಧಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾರ್ಪರ್‌ಕಾಲಿನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತ್ ಪದ್ಮನಾಭನ್ ಅವರು ಆಂಗ್ಲ ಪತ್ರಿಕೆಯೊಂದಕ್ಕೆ ಈ ವಿಷಯ ತಿಳಿಸಿದ್ದಾರೆ.

ಪೆಂಗ್ವಿನ್ ರಾಂಡಮ್ ಹೌಸ್ ಭಾರತದಲ್ಲಿ ಸೋನಿಯಾ ಗಾಂಧಿಯವರ ಆತ್ಮಕಥೆಯನ್ನು ಪ್ರಕಟಿಸಲಿದೆ. ಈ ಕುರಿತು ಅಧಿಕೃತ ಪ್ರಕಟಣೆಯಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು. ಇದು ನೆಹರೂ ಕುಟುಂಬದ ಮೊದಲ ಸಮಗ್ರ ಆತ್ಮಚರಿತ್ರೆಯಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಹೆಚ್ಚಿಸುತ್ತೇವೆ; ಮಹಾರಾಷ್ಟ್ರದಲ್ಲಿ ರಾಹುಲ್ ಗಾಂಧಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಅನಿರೀಕ್ಷಿತವಾಗಿ ಕೊಲ್ಲಲ್ಪಟ್ಟ ಕಾರಣ ಅವರ ಜೀವನದ ಸಂಪೂರ್ಣ ಜೀವನ ಚರಿತ್ರೆಯನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಲೇಖಕ ಪುಪುಲ್ ಜಯಕರ್ ಅವರ ‘ಇಂದಿರಾ ಗಾಂಧಿ: ಎ ಬಯಾಗ್ರಫಿ’, ಸೋನಿಯಾ ಗಾಂಧಿಯವರ ‘ರಾಜೀವ್’ ಮತ್ತು ನೆಹರೂ ಅವರ ‘ಆನ್ ಆಟೋಬಯೋಗ್ರಫಿ: ಟುವರ್ಡ್ ಫ್ರೀಡಂ’ ನೆಹರು-ಗಾಂಧಿ ಕುಟುಂಬದ ಈ ಹಿಂದೆ ಪ್ರಕಟವಾದ ಕೆಲವು ಪುಸ್ತಕಗಳು.

ಇದೇ ಡಿಸೆಂಬರ್‌ನಲ್ಲಿ 78ನೇ ವರ್ಷಕ್ಕೆ ಕಾಲಿಡುತ್ತಿರುವ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆಯ ಕುರಿತು ಇತ್ತೀಚಿನ ಮಾಹಿತಿ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Sat, 5 October 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ