AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi Birthday: ಬಿಪಿನ್​ ರಾವತ್​ ದುರಂತ ಅಂತ್ಯ; ಇಂದು ಜನ್ಮದಿನ ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ ಸೋನಿಯಾ ಗಾಂಧಿ

ಡಿಸೆಂಬರ್​ 8ರಂದು ಜನರಲ್​ ಬಿಪಿನ್​ ರಾವತ್​, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ ಸೇನಾಧಿಕಾರಿಗಳು ವೆಲ್ಲಿಂಗ್ಟನ್​​ಗೆ ತೆರಳುತ್ತಿದ್ದರು. ದೆಹಲಿಯಿಂದ ಬೆಳಗ್ಗೆ ವಿಶೇಷ ವಿಮಾನದಲ್ಲಿ ಸುಲೂರ್​ಗೆ ಹೋಗಿ, ಅಲ್ಲಿಂದ ವೆಲ್ಲಿಂಗ್ಟನ್​ಗೆ ತೆರಳುತ್ತಿದ್ದರು.

Sonia Gandhi Birthday: ಬಿಪಿನ್​ ರಾವತ್​ ದುರಂತ ಅಂತ್ಯ; ಇಂದು ಜನ್ಮದಿನ ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
TV9 Web
| Edited By: |

Updated on:Dec 09, 2021 | 9:35 AM

Share

ತಮಿಳುನಾಡಿನ ಕೂನೂರ್​​ನಲ್ಲಿ ಹೆಲಿಕಾಪ್ಟರ್​ ಪತನದಲ್ಲಿ ಸಿಡಿಎಸ್​ ಬಿಪಿನ್​ ರಾವತ್ (Gen. Bipin Rawat) ಮತ್ತು ಇತರ 11 ಸೈನಿಕರು ಮೃತರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಇಂದು ತಮ್ಮ ಹುಟ್ಟುಹಬ್ಬ (Sonia Gandhi Birthday) ಆಚರಣೆ ಮಾಡಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ. ಹಾಗೇ, ರಾಷ್ಟ್ರಾದ್ಯಂತ ಯಾವುದೇ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ತಮ್ಮ ಜನ್ಮದಿನದ ನಿಮಿತ್ತ ಸಂಭ್ರಮ ಆಚರಣೆ ಮಾಡಬಾರದು. ಯಾವುದೇ ಕಾರ್ಯಕ್ರಮವನ್ನೂ ನಡೆಸಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಟ್ವಿಟರ್ ಮೂಲಕ ಘೋಷಣೆ ಮಾಡಿದ್ದಾರೆ. ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ನಿರ್ಧಾರವನ್ನು ತಿಳಿಸಿದ್ದಾರೆ. 

ಈ ಬಗ್ಗೆ ಲೋಕಸಭಾ ಸಂಸದರಾದ ಮಾಣಿಕ್ಕಮ್​ ಟಾಗೋರ್​ ಅವರೂ ಸಹ ಮಾಹಿತಿ ನೀಡಿದ್ದು, ಜನರಲ್ ರಾವತ್​ ಮತ್ತು 11 ಯೋಧರ ನಿಧನದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಂಭ್ರಮ ಆಚರಣೆಗಳನ್ನೂ ರದ್ದುಗೊಳಿಸಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಇದು ಅವರ ಸೂಕ್ಷ್ಮತೆಗೆ ಸಾಕ್ಷಿ ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆ ಡಿಸೆಂಬರ್​ 8ರಂದು ಜನರಲ್​ ಬಿಪಿನ್​ ರಾವತ್​, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ ಸೇನಾಧಿಕಾರಿಗಳು ವೆಲ್ಲಿಂಗ್ಟನ್​​ಗೆ ತೆರಳುತ್ತಿದ್ದರು. ದೆಹಲಿಯಿಂದ ಬೆಳಗ್ಗೆ ವಿಶೇಷ ವಿಮಾನದಲ್ಲಿ ಸುಲೂರ್​ಗೆ ಹೋಗಿ, ಅಲ್ಲಿಂದ ವೆಲ್ಲಿಂಗ್ಟನ್​ಗೆ ತೆರಳುತ್ತಿದ್ದರು. ಆದರೆ ತಮಿಳುನಾಡಿನ ಊಟಿ ಸಮೀಪ ಕೂನೂರ್​​ಬಳಿ ಗುಡ್ಡ ಪ್ರದೇಶದಲ್ಲಿ ಪತನಗೊಂಡಿತ್ತು. ಇದು ವಿವಿಐಪಿ ಹೆಲಿಕಾಪ್ಟರ್​ ಆಗಿದ್ದು, ಎಲ್ಲರೀತಿಯ ಮುಂಜಾಗ್ರತೆಯನ್ನು ತೆಗೆದುಕೊಂಡಿದ್ದಾಗ್ಯೂ ಪತನಗೊಂಡಿದ್ದು ಹೇಗೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯೂ ಪ್ರಾರಂಭವಾಗಿದೆ. ಆದರೆ ಜನರಲ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳ ಸಾವಿಗೆ ಇಡೀ ದೇಶ ಮರುಗುತ್ತಿದೆ.  ಪ್ರಧಾನಿ ಮೋದಿ, ರಾಮನಾಥ್​ ಕೋವಿಂದ್, ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್​, ರಾಹುಲ್ ಗಾಂಧಿ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Bipin Rawat: ಸಿಡಿಎಸ್​ ಬಿಪಿನ್​ ರಾವತ್ ನಿಧನಕ್ಕೆ ಯುಎಸ್​ ಉನ್ನತ ಅಧಿಕಾರಿಗಳ ಸಂತಾಪ; ಅವರೊಬ್ಬ ಉತ್ತಮ ಸ್ನೇಹಿತ ಎಂದ ರಕ್ಷಣಾ ಕಾರ್ಯದರ್ಶಿ

Published On - 9:34 am, Thu, 9 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ