AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಹಿಂಸಾಚಾರ ಪೂರ್ವಯೋಜಿತ: ಶಾ ರಾಜೀನಾಮೆಗೆ ಸೋನಿಯಾ ಒತ್ತಾಯ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಕಳೆದ ಎರಡು ದಿನಗಳಿಂದ ಪ್ರತಿಭಟನಾಕಾರರ ಆಕ್ರೋಶಕ್ಕೆ 20ಕ್ಕೂ ಹೆಚ್ಚು ಜನ ದಾರುಣವಾಗಿ ಮೃತಪಟ್ಟಿದ್ದಾರೆ. ಕರ್ಫ್ಯೂ ನಡುವೆಯೂ ಮೌಜ್​ಪುರ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಲವರು ಊರು ತೊರೆಯುತ್ತಿದ್ದಾರೆ. ಅಮಿತ್ ಶಾ ರಾಜೀನಾಮೆ ನೀಡಲಿ: ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಹಿಂಸಾಚಾರ ಪೂರ್ವನಿಯೋಜಿತ ಕೃತ್ಯ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಜತೆ ಕಾಂಗ್ರೆಸ್ ಇರುತ್ತೆ. ಹಿಂಸಾಚಾರ […]

ಸಾಧು ಶ್ರೀನಾಥ್​
|

Updated on:Feb 26, 2020 | 5:25 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಕಳೆದ ಎರಡು ದಿನಗಳಿಂದ ಪ್ರತಿಭಟನಾಕಾರರ ಆಕ್ರೋಶಕ್ಕೆ 20ಕ್ಕೂ ಹೆಚ್ಚು ಜನ ದಾರುಣವಾಗಿ ಮೃತಪಟ್ಟಿದ್ದಾರೆ. ಕರ್ಫ್ಯೂ ನಡುವೆಯೂ ಮೌಜ್​ಪುರ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಲವರು ಊರು ತೊರೆಯುತ್ತಿದ್ದಾರೆ.

ಅಮಿತ್ ಶಾ ರಾಜೀನಾಮೆ ನೀಡಲಿ: ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಹಿಂಸಾಚಾರ ಪೂರ್ವನಿಯೋಜಿತ ಕೃತ್ಯ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಜತೆ ಕಾಂಗ್ರೆಸ್ ಇರುತ್ತೆ. ಹಿಂಸಾಚಾರ ತಡೆಯಲು ಕೇಂದ್ರ ಹಾಗೂ ದೆಹಲಿ ಸರ್ಕಾರ ವಿಫಲವಾಗಿವೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದರ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸೋನಿಯ ಗಾಂಧಿ ಆಗ್ರಹಿಸಿದ್ದಾರೆ.

ಹಿಂಸಾಚಾರದ ಹಿಂದೆ ಬಿಜೆಪಿ ಕೈವಾಡ ಇದೆ: ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿದ್ರು. ಆದ್ರೆ, ಬಿಜೆಪಿ ನಾಯಕರ ವಿರುದ್ಧ ಹಿಂಸಾಚಾರ ತಡೆಗಟ್ಟಲು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ, ಪೊಲೀಸರ ವೈಫಲ್ಯದಿಂದ ಹಿಂಸಾಚಾರ ನಡೆಯುತ್ತಿದೆ. ಇನ್ನು ಹಿಂಸಾಚಾರದ ಹಿಂದೆ ಬಿಜೆಪಿ ಕೈವಾಡ ಇದೆ. ಹಿಂಸಾಚಾರದ ವೇಳೆ ಕೇಂದ್ರ ಗೃಹ ಸಚಿವರು ಎಲ್ಲಿದ್ದರು? ಹಿಂಸಾಚಾರದ ವೇಳೆ ದೆಹಲಿ ಸಿಎಂ ಏನು ಮಾಡುತ್ತಿದ್ದರು? ಹಿಂಸಾಚಾರ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಇರಲಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಲಭೆ ಪೀಡಿತ ಪ್ರದೇಶಗಳಲ್ಲಿ ತಕ್ಷಣ ದೆಹಲಿ ಸಿಎಂ, ಗೃಹ ಸಚಿವರು ಭೇಟಿ ನೀಡಿ ಅಲ್ಲಿನ ನಿವಾಸಿಗಳಿಗೆ ಧೈರ್ಯ ತುಂಬಲಿ. ಹಾಗೇ ನಿವಾಸಿಗಳಿಗೆ ಭದ್ರತೆಯನ್ನು ಹೆಚ್ಚಿಸಬೇಕು ಎಂದು ಸೋನಿಯಾ ಗಾಂಧಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ನಾಳೆ ರಾಷ್ಟ್ರಪತಿ ಭವನಕ್ಕೆ ಕಾಂಗ್ರೆಸ್​ ನಾಯಕರ ಪಾದಯಾತ್ರೆ: ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಕಾಂಗ್ರೆಸ್​ ನಾಯಕರ ಪಾದಯಾತ್ರೆ ಹೊರಡಲು ತೀರ್ಮಾನಿಸಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲಿದ್ದಾರೆ.

Published On - 2:00 pm, Wed, 26 February 20

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!