AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಗಳ GST ಪಾಲು ಕೊಡದೆ ಮೋದಿ ಸರ್ಕಾರದಿಂದ ಮಹಾ ದ್ರೋಹ: ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಮಧ್ಯಂತರ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಹಾಗೂ ಬಿಜಿಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೋರಲಿನ ಹೋರಾಟದ ಅಗತ್ಯವಿದೆ ಪ್ರತಿಪಾದಿಸಿದ್ದಾರೆ. ರಾಜ್ಯಗಳಿಗೆ ಕೇಂದ್ರದಿಂದ ಜಿಎಸ್‌.ಟಿ. ಪರಿಹಾರ ನೀಡಲು ಕೆಲ ಸಿಎಂಗಳು ಆಗ್ರಹಿಸುತ್ತಿದ್ದು, ಈ ಸಂಬಂಧ ಬಿಜೆಪಿಯೇತರ ಸಿಎಂಗಳು ಒಕ್ಕಟ್ಟಿನಿಂದ ಹೋರಾಡಬೇಕಿದೆ ಎಂದ ಸೋನಿಯಾ ಗಾಂಧಿ, ಆಗಸ್ಟ್‌ 11ರಂದು ನಡೆದ ಹಣಕಾಸು ಸ್ಥಾಯಿ ಸಮಿತಿ ಸಭೆಯಲ್ಲಿ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಈ […]

ರಾಜ್ಯಗಳ GST ಪಾಲು ಕೊಡದೆ ಮೋದಿ ಸರ್ಕಾರದಿಂದ ಮಹಾ ದ್ರೋಹ: ಸೋನಿಯಾ ಗಾಂಧಿ
Guru
Guru|

Updated on: Aug 26, 2020 | 3:42 PM

Share

ನವದೆಹಲಿ: ಕಾಂಗ್ರೆಸ್‌ ಪಕ್ಷದ ಮಧ್ಯಂತರ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಹಾಗೂ ಬಿಜಿಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೋರಲಿನ ಹೋರಾಟದ ಅಗತ್ಯವಿದೆ ಪ್ರತಿಪಾದಿಸಿದ್ದಾರೆ.

ರಾಜ್ಯಗಳಿಗೆ ಕೇಂದ್ರದಿಂದ ಜಿಎಸ್‌.ಟಿ. ಪರಿಹಾರ ನೀಡಲು ಕೆಲ ಸಿಎಂಗಳು ಆಗ್ರಹಿಸುತ್ತಿದ್ದು, ಈ ಸಂಬಂಧ ಬಿಜೆಪಿಯೇತರ ಸಿಎಂಗಳು ಒಕ್ಕಟ್ಟಿನಿಂದ ಹೋರಾಡಬೇಕಿದೆ ಎಂದ ಸೋನಿಯಾ ಗಾಂಧಿ, ಆಗಸ್ಟ್‌ 11ರಂದು ನಡೆದ ಹಣಕಾಸು ಸ್ಥಾಯಿ ಸಮಿತಿ ಸಭೆಯಲ್ಲಿ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಈ ವರ್ಷ ಜಿಎಸ್‌ಟಿಯಲ್ಲಿನ ಕಡ್ಡಾಯ ಶೇ.14ರಷ್ಟು ಪಾಲನ್ನು ರಾಜ್ಯಗಳಿಗೆ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದು ದೇಶದ ಜನತೆಗೆ ಮೋದಿ ಸರ್ಕಾರ ಮಾಡಿದ ಮಹಾ ಮೋಸ ಎಂದು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ಕೇಂದ್ರದ ನೂತನ ಶಿಕ್ಷಣ ನೀತಿ ವಿದ್ಯಾರ್ಥಿಗಳ ಪಾಲಿಗೆ ಮಾರಕವಾಗಿದ್ದು, ಕೊರೊನಾದಂಥ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಹಿತ ಕಾಯುವ ಬದಲು ಅವರ ಹಿತಾಸಕ್ತಿಗೆ ಮಾರಕವಾಗುವಂಥ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸೋನಿಯಾ ಮೋದಿ ಸರ್ಕಾರವನ್ನ ಖಂಡಿಸಿದ್ದಾರೆ.

ಸೋನಿಯಾ ಗಾಂಧಿ ಜತೆಗಿನ ಈ ಸಂವಾದದಲ್ಲಿ ಭಾಗಿಯಾಗಿದ್ದ ಜಾರ್ಖಂಡ್, ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ್, ಪಶ್ಚಿಮ ಬಂಗಾಳ ಸಿಎಂಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್, ಜೆಇಇ ಪರೀಕ್ಷೆ ಮುಂದೂಡಿಕೆಗೆ ಒಕ್ಕೋರಲಿನಿಂದ ಆಗ್ರಹಿಸಿದ್ದಾರೆ. ಅದ್ರಲ್ಲೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲ್ಲ ಸಿಎಂಗಳು ಸೇರಿ ನೀಟ್‌ ಪರೀಕ್ಷೆ ವಿರುದ್ಧ ಸುಪ್ರೀಮ್‌ ಕೋರ್ಟ್‌ ಮೊರೆ ಹೋಗುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ.

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ