AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಗಳ GST ಪಾಲು ಕೊಡದೆ ಮೋದಿ ಸರ್ಕಾರದಿಂದ ಮಹಾ ದ್ರೋಹ: ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಮಧ್ಯಂತರ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಹಾಗೂ ಬಿಜಿಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೋರಲಿನ ಹೋರಾಟದ ಅಗತ್ಯವಿದೆ ಪ್ರತಿಪಾದಿಸಿದ್ದಾರೆ. ರಾಜ್ಯಗಳಿಗೆ ಕೇಂದ್ರದಿಂದ ಜಿಎಸ್‌.ಟಿ. ಪರಿಹಾರ ನೀಡಲು ಕೆಲ ಸಿಎಂಗಳು ಆಗ್ರಹಿಸುತ್ತಿದ್ದು, ಈ ಸಂಬಂಧ ಬಿಜೆಪಿಯೇತರ ಸಿಎಂಗಳು ಒಕ್ಕಟ್ಟಿನಿಂದ ಹೋರಾಡಬೇಕಿದೆ ಎಂದ ಸೋನಿಯಾ ಗಾಂಧಿ, ಆಗಸ್ಟ್‌ 11ರಂದು ನಡೆದ ಹಣಕಾಸು ಸ್ಥಾಯಿ ಸಮಿತಿ ಸಭೆಯಲ್ಲಿ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಈ […]

ರಾಜ್ಯಗಳ GST ಪಾಲು ಕೊಡದೆ ಮೋದಿ ಸರ್ಕಾರದಿಂದ ಮಹಾ ದ್ರೋಹ: ಸೋನಿಯಾ ಗಾಂಧಿ
Guru
|

Updated on: Aug 26, 2020 | 3:42 PM

Share

ನವದೆಹಲಿ: ಕಾಂಗ್ರೆಸ್‌ ಪಕ್ಷದ ಮಧ್ಯಂತರ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಹಾಗೂ ಬಿಜಿಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೋರಲಿನ ಹೋರಾಟದ ಅಗತ್ಯವಿದೆ ಪ್ರತಿಪಾದಿಸಿದ್ದಾರೆ.

ರಾಜ್ಯಗಳಿಗೆ ಕೇಂದ್ರದಿಂದ ಜಿಎಸ್‌.ಟಿ. ಪರಿಹಾರ ನೀಡಲು ಕೆಲ ಸಿಎಂಗಳು ಆಗ್ರಹಿಸುತ್ತಿದ್ದು, ಈ ಸಂಬಂಧ ಬಿಜೆಪಿಯೇತರ ಸಿಎಂಗಳು ಒಕ್ಕಟ್ಟಿನಿಂದ ಹೋರಾಡಬೇಕಿದೆ ಎಂದ ಸೋನಿಯಾ ಗಾಂಧಿ, ಆಗಸ್ಟ್‌ 11ರಂದು ನಡೆದ ಹಣಕಾಸು ಸ್ಥಾಯಿ ಸಮಿತಿ ಸಭೆಯಲ್ಲಿ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಈ ವರ್ಷ ಜಿಎಸ್‌ಟಿಯಲ್ಲಿನ ಕಡ್ಡಾಯ ಶೇ.14ರಷ್ಟು ಪಾಲನ್ನು ರಾಜ್ಯಗಳಿಗೆ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದು ದೇಶದ ಜನತೆಗೆ ಮೋದಿ ಸರ್ಕಾರ ಮಾಡಿದ ಮಹಾ ಮೋಸ ಎಂದು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ಕೇಂದ್ರದ ನೂತನ ಶಿಕ್ಷಣ ನೀತಿ ವಿದ್ಯಾರ್ಥಿಗಳ ಪಾಲಿಗೆ ಮಾರಕವಾಗಿದ್ದು, ಕೊರೊನಾದಂಥ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಹಿತ ಕಾಯುವ ಬದಲು ಅವರ ಹಿತಾಸಕ್ತಿಗೆ ಮಾರಕವಾಗುವಂಥ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸೋನಿಯಾ ಮೋದಿ ಸರ್ಕಾರವನ್ನ ಖಂಡಿಸಿದ್ದಾರೆ.

ಸೋನಿಯಾ ಗಾಂಧಿ ಜತೆಗಿನ ಈ ಸಂವಾದದಲ್ಲಿ ಭಾಗಿಯಾಗಿದ್ದ ಜಾರ್ಖಂಡ್, ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ್, ಪಶ್ಚಿಮ ಬಂಗಾಳ ಸಿಎಂಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್, ಜೆಇಇ ಪರೀಕ್ಷೆ ಮುಂದೂಡಿಕೆಗೆ ಒಕ್ಕೋರಲಿನಿಂದ ಆಗ್ರಹಿಸಿದ್ದಾರೆ. ಅದ್ರಲ್ಲೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲ್ಲ ಸಿಎಂಗಳು ಸೇರಿ ನೀಟ್‌ ಪರೀಕ್ಷೆ ವಿರುದ್ಧ ಸುಪ್ರೀಮ್‌ ಕೋರ್ಟ್‌ ಮೊರೆ ಹೋಗುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ