AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಗಳ GST ಪಾಲು ಕೊಡದೆ ಮೋದಿ ಸರ್ಕಾರದಿಂದ ಮಹಾ ದ್ರೋಹ: ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಮಧ್ಯಂತರ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಹಾಗೂ ಬಿಜಿಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೋರಲಿನ ಹೋರಾಟದ ಅಗತ್ಯವಿದೆ ಪ್ರತಿಪಾದಿಸಿದ್ದಾರೆ. ರಾಜ್ಯಗಳಿಗೆ ಕೇಂದ್ರದಿಂದ ಜಿಎಸ್‌.ಟಿ. ಪರಿಹಾರ ನೀಡಲು ಕೆಲ ಸಿಎಂಗಳು ಆಗ್ರಹಿಸುತ್ತಿದ್ದು, ಈ ಸಂಬಂಧ ಬಿಜೆಪಿಯೇತರ ಸಿಎಂಗಳು ಒಕ್ಕಟ್ಟಿನಿಂದ ಹೋರಾಡಬೇಕಿದೆ ಎಂದ ಸೋನಿಯಾ ಗಾಂಧಿ, ಆಗಸ್ಟ್‌ 11ರಂದು ನಡೆದ ಹಣಕಾಸು ಸ್ಥಾಯಿ ಸಮಿತಿ ಸಭೆಯಲ್ಲಿ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಈ […]

ರಾಜ್ಯಗಳ GST ಪಾಲು ಕೊಡದೆ ಮೋದಿ ಸರ್ಕಾರದಿಂದ ಮಹಾ ದ್ರೋಹ: ಸೋನಿಯಾ ಗಾಂಧಿ
Guru
|

Updated on: Aug 26, 2020 | 3:42 PM

Share

ನವದೆಹಲಿ: ಕಾಂಗ್ರೆಸ್‌ ಪಕ್ಷದ ಮಧ್ಯಂತರ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕಾಂಗ್ರೆಸ್‌ ಹಾಗೂ ಬಿಜಿಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಒಕ್ಕೋರಲಿನ ಹೋರಾಟದ ಅಗತ್ಯವಿದೆ ಪ್ರತಿಪಾದಿಸಿದ್ದಾರೆ.

ರಾಜ್ಯಗಳಿಗೆ ಕೇಂದ್ರದಿಂದ ಜಿಎಸ್‌.ಟಿ. ಪರಿಹಾರ ನೀಡಲು ಕೆಲ ಸಿಎಂಗಳು ಆಗ್ರಹಿಸುತ್ತಿದ್ದು, ಈ ಸಂಬಂಧ ಬಿಜೆಪಿಯೇತರ ಸಿಎಂಗಳು ಒಕ್ಕಟ್ಟಿನಿಂದ ಹೋರಾಡಬೇಕಿದೆ ಎಂದ ಸೋನಿಯಾ ಗಾಂಧಿ, ಆಗಸ್ಟ್‌ 11ರಂದು ನಡೆದ ಹಣಕಾಸು ಸ್ಥಾಯಿ ಸಮಿತಿ ಸಭೆಯಲ್ಲಿ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಈ ವರ್ಷ ಜಿಎಸ್‌ಟಿಯಲ್ಲಿನ ಕಡ್ಡಾಯ ಶೇ.14ರಷ್ಟು ಪಾಲನ್ನು ರಾಜ್ಯಗಳಿಗೆ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದು ದೇಶದ ಜನತೆಗೆ ಮೋದಿ ಸರ್ಕಾರ ಮಾಡಿದ ಮಹಾ ಮೋಸ ಎಂದು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ಕೇಂದ್ರದ ನೂತನ ಶಿಕ್ಷಣ ನೀತಿ ವಿದ್ಯಾರ್ಥಿಗಳ ಪಾಲಿಗೆ ಮಾರಕವಾಗಿದ್ದು, ಕೊರೊನಾದಂಥ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಹಿತ ಕಾಯುವ ಬದಲು ಅವರ ಹಿತಾಸಕ್ತಿಗೆ ಮಾರಕವಾಗುವಂಥ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸೋನಿಯಾ ಮೋದಿ ಸರ್ಕಾರವನ್ನ ಖಂಡಿಸಿದ್ದಾರೆ.

ಸೋನಿಯಾ ಗಾಂಧಿ ಜತೆಗಿನ ಈ ಸಂವಾದದಲ್ಲಿ ಭಾಗಿಯಾಗಿದ್ದ ಜಾರ್ಖಂಡ್, ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ್, ಪಶ್ಚಿಮ ಬಂಗಾಳ ಸಿಎಂಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್, ಜೆಇಇ ಪರೀಕ್ಷೆ ಮುಂದೂಡಿಕೆಗೆ ಒಕ್ಕೋರಲಿನಿಂದ ಆಗ್ರಹಿಸಿದ್ದಾರೆ. ಅದ್ರಲ್ಲೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲ್ಲ ಸಿಎಂಗಳು ಸೇರಿ ನೀಟ್‌ ಪರೀಕ್ಷೆ ವಿರುದ್ಧ ಸುಪ್ರೀಮ್‌ ಕೋರ್ಟ್‌ ಮೊರೆ ಹೋಗುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ.

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?