AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ. ಬೆಳಗ್ಗೆ 8.15ಕ್ಕೆ […]

ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?
Follow us
ಸಾಧು ಶ್ರೀನಾಥ್​
|

Updated on:Oct 23, 2019 | 11:13 AM

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ.

ಬೆಳಗ್ಗೆ 8.15ಕ್ಕೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಡಿ ನೀಡಿದ್ದು, ಅಂಬಿಕಾ ಸೋನಿ ಜತೆಗೂಡಿ ಸೋನಿಯಾ ಗಾಂಧಿ ಡಿಕೆ ಶಿವಕುಮಾರನ್ನ ಭೇಟಿ ಮಾಡಿದ್ದಾರೆ

ಕಳೆದ ಕೆಲ ದಿನಗಳ ಹಿಂದೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನಷ್ಟೇ ಭೇಟಿಯಾಗಿದ್ದರು. ನಂತರ ಅನಾರೋಗ್ಯ ಕಾರಣದಿಂದ ಡಿಕೆಶಿ ಭೇಟಿ ರದ್ದು ಮಾಡಿದ್ದರು. ಇಂದು ಡಿಕೆಶಿ ಜಾಮೀನು ತೀರ್ಪು ದಿನವೇ ಸೋನಿಯಾ ಡಿಕೆಶಿಯನ್ನು ಭೇಟಿಯಾಗುತ್ತಿರುವುದು ಕುತೂಹಲ ತಂದಿದೆ.

Published On - 11:11 am, Wed, 23 October 19

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ