ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ. ಬೆಳಗ್ಗೆ 8.15ಕ್ಕೆ […]

ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?

Updated on: Oct 23, 2019 | 11:13 AM

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ.

ಬೆಳಗ್ಗೆ 8.15ಕ್ಕೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಡಿ ನೀಡಿದ್ದು, ಅಂಬಿಕಾ ಸೋನಿ ಜತೆಗೂಡಿ ಸೋನಿಯಾ ಗಾಂಧಿ ಡಿಕೆ ಶಿವಕುಮಾರನ್ನ ಭೇಟಿ ಮಾಡಿದ್ದಾರೆ

ಕಳೆದ ಕೆಲ ದಿನಗಳ ಹಿಂದೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನಷ್ಟೇ ಭೇಟಿಯಾಗಿದ್ದರು. ನಂತರ ಅನಾರೋಗ್ಯ ಕಾರಣದಿಂದ ಡಿಕೆಶಿ ಭೇಟಿ ರದ್ದು ಮಾಡಿದ್ದರು. ಇಂದು ಡಿಕೆಶಿ ಜಾಮೀನು ತೀರ್ಪು ದಿನವೇ ಸೋನಿಯಾ ಡಿಕೆಶಿಯನ್ನು ಭೇಟಿಯಾಗುತ್ತಿರುವುದು ಕುತೂಹಲ ತಂದಿದೆ.

Published On - 11:11 am, Wed, 23 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us