AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G23 ನಾಯಕರೊಂದಿಗೆ ಸಮಾಲೋಚನೆ ಮುಂದುವರಿಸಿದ ಸೋನಿಯಾ ಗಾಂಧಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಂತರವೇ ಬದಲಾವಣೆ

ಸೋನಿಯಾ ಗಾಂಧಿ ಅವರನ್ನು G-23 ಬಣದ ನಾಯಕರಾದ ಆನಂದ್ ಶರ್ಮಾ, ಮನಿಶ್ ತಿಮಾರಿ ಮತ್ತು ವಿವೇಕ್ ಟಂಕ ಭೇಟಿಯಾಗಿ ಮಾತುಕತೆ ನಡೆಸಿದರು.

G23 ನಾಯಕರೊಂದಿಗೆ ಸಮಾಲೋಚನೆ ಮುಂದುವರಿಸಿದ ಸೋನಿಯಾ ಗಾಂಧಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಂತರವೇ ಬದಲಾವಣೆ
ಸೋನಿಯಾ ಗಾಂಧಿ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 23, 2022 | 11:54 AM

Share

ದೆಹಲಿ: ಕಾಂಗ್ರೆಸ್​ನಲ್ಲಿ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ನಾಯಕತ್ವ ಬದಲಾವಣೆ ಆಗಬೇಕು ಎಂದು G-23 ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸಮಾಲೋಚನೆ ಮುಂದುವರಿಸಿದ್ದು, ಇದೇ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಪಕ್ಷದ ಅಧ್ಯಕ್ಷೀಯ ಚುನಾವಣೆಯ ನಂತರವೇ ಸಂಘಟನಾತ್ಮಕ ಬದಲಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ. G-23 ಬಣದ ನಾಯಕರಾದ ಆನಂದ್ ಶರ್ಮಾ, ಮನಿಶ್ ತಿಮಾರಿ ಮತ್ತು ವಿವೇಕ್ ಟಂಕ ಅವರನ್ನು ತಮ್ಮ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸೋಲು ಅನುಭವಿಸಿದ ನಂತರ ಆಂತರಿಕ ಭಿನ್ನಮತ ಹೆಚ್ಚಾಗಿತ್ತು. ಕಾಂಗ್ರೆಸ್ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಸಾಮೂಹಿಕ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂದು G23 ನಾಯಕರು ದೂರಿದ್ದರು.

G-23 ನಾಯಕರು ಪಕ್ಷದ ಸಂಘಟನೆಯಲ್ಲಿ ಸಮಗ್ರ ಬದಲಾವಣೆ ಆಗಬೇಕು ಎಂದು ಹಲವು ಬಾರಿ ಒತ್ತಾಯಿಸಿದ್ದರು. ಮುಂದಿನ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. ಮೊದಲು ಅದರ ಕಡೆಗೆ ಗಮನ ಕೊಡಿ. ಅದಾದ ನಂತರ ಕೆಲಮಟ್ಟಿಗೆ ಬದಲಾವಣೆಗಳನ್ನು ಮಾಡುತ್ತೇನೆ ಎಂದು ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ G-23 ನಾಯಕರೇ ಆಗಲಿ ಅಥವಾ ಗಾಂಧಿ ಕುಟುಂಬದ ಯಾವೊಬ್ಬ ಸದಸ್ಯರೇ ಆಗಲಿ ಕಪಿಲ್ ಸಿಬಲ್ ಅವರ ಬಗ್ಗೆ ಏನೂ ಹೇಳಲಿಲ್ಲ ಎಂದು ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಉನ್ನತ ಹಂತದಲ್ಲಿರುವ ಕೆಲ ನಾಯಕರನ್ನು ಯಾವ ತಪ್ಪುಗಳಿಗೂ ಹೊಣೆಗಾರರನ್ನಾಗಿ ಮಾಡುತ್ತಿಲ್ಲ ಎಂದು G-23 ನಾಯಕರು ಆಕ್ಷೇಪಿಸಿದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿರುವ ಪ್ರಧಾನ ಕಾರ್ಯದರ್ಶಿಗಳು ರಾಹುಲ್ ಗಾಂಧಿ ಅವರ ಹೆಸರಿನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದಲ್ಲಿ ಕೆಲವರು ತೆಗೆದುಕೊಳ್ಳುತ್ತಿರುವ ತಪ್ಪು ನಿರ್ಧಾರಗಳಿಂದ ಆಗುತ್ತಿರುವ ಅನಾಹುತಗಳಿಗೆ ಯಾರನ್ನು ಹೊಣೆ ಮಾಡುವುದು ಎಂದು ಸೋನಿಯಾರನ್ನು ಭೇಟಿ ಮಾಡಿದ G-23 ನಾಯಕರು ಪ್ರಶ್ನಿಸಿದರು. ಪಕ್ಷವನ್ನು ಕೆಲವೇ ನಾಯಕರ ಸುಪರ್ದಿಗೆ ಒಪ್ಪಿಸಲು ಆಗುವುದಿಲ್ಲ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿದರು. ‘ಪಕ್ಷದ ನಾಯಕರು ಪ್ರಸ್ತಾಪಿಸಿರುವ ಎಲ್ಲ ವಿಚಾರಗಳ ಬಗ್ಗೆ ಗಮನ ಹರಿಸುವುದಾಗಿ ಸೋನಿಯಾ ಗಾಂಧಿ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.

ಎಲ್ಲರನ್ನೂ ಒಳಗೊಳ್ಳುವ ಸಾಮೂಹಿಕ ನಾಯಕತ್ವ ಕಾಂಗ್ರೆಸ್ ಪಕ್ಷಕ್ಕೆ ಬೇಕು ಎಂದು G-23 ನಾಯಕರು ಒತ್ತಾಯಿಸಿದರು. ಬಹುತೇಕ G-23 ನಾಯಕರ ಆಕ್ರೋಶವು ಕಾಂಗ್ರೆಸ್​ ಪಕ್ಷದ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ರಣದೀಪ್ ಸುರ್ಜೆವಾಲಾ, ಅಜಯ್ ಮೆಕನ್ ಮತ್ತು ಕೆ.ಸಿ.ವೇಣುಗೋಪಾಲ್ ಅವರ ವಿರುದ್ಧ ತಿರುಗಿದೆ. ಕಾಂಗ್ರೆಸ್ ಪಕ್ಷದ ಇತರ ನಾಯಕರು, ಉನ್ನತ ನಾಯಕತ್ವ ಮತ್ತು G-23 ನಾಯಕರ ನಡುವೆ ಬೆಳೆಯುತ್ತಿರುವ ಭಿನ್ನಮತ ಶಮನಗೊಳಿಸುವ ಉದ್ದೇಶದಿಂದ ಸೋನಿಯಾ ಅವರು ಭಿನ್ನದನಿಯ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಮಾರ್ಚ್ 18ರಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸೋನಿಯಾ ಗಾಂಧಿ ಭೇಟಿಯಾಗಿದ್ದರು.

ಇದನ್ನೂ ಓದಿ: ಹೌದು, ನಾವು ಗಾಂಧಿ-ನೆಹರೂ ಕುಟುಂಬದ ಗುಲಾಮರೇ; ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಂಡ ಕಾಂಗ್ರೆಸ್ ಶಾಸಕ

ಇದನ್ನೂ ಓದಿ: ಪಾದಯಾತ್ರೆ ನಾಟಕ ಮಾಡುವ ಕಾಂಗ್ರೆಸ್ಸಿಗರಿಗೆ ಮಿತ್ರಪಕ್ಷ ಡಿಎಂಕೆ ಮನವೊಲಿಸುವ ಧೈರ್ಯವಿಲ್ಲವೇ? -ಸಚಿವ ಸುಧಾಕರ್ ಮಾರ್ಮಿಕ ಪ್ರಶ್ನೆ

Published On - 11:52 am, Wed, 23 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!